ಸ್ಟೇಟಸ್, ಬ್ಯಾನರ್ ಮೂಲಕ ಟಿಪ್ಪು ಸೇರಿದಂತೆ ಮುಸ್ಲಿಂ ರಾಜರಿಗೆ ಅವಮಾನ: ಚಿಕ್ಕೋಡಿಯಲ್ಲಿ ಆಕ್ರೋಶ..!
ಚಿಕ್ಕೋಡಿ ನವೆಂಬರ್ 11: ಎಲ್ಲೆಡೆ ದೀಪಾವಳಿ ಹಬ್ಬದ ಆಚರಣೆ ಆರಂಭವಾಗಿದ್ದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ರಾತ್ರೋರಾತ್ರಿ ಟಿಪ್ಪು ಸುಲ್ತಾನ್ ಸೇರಿದಂತೆ ಅನೇಕ ಮುಸ್ಲಿಂ ರಾಜರನ್ನು ಅವಮಾನಿಸುವ ರೀತಿ ವಾಟ್ಸಾಪ್ ಸ್ಟೇಟಸ್ ಹಾಗೂ ಬ್ಯಾನರ್ ಅಳವಡಿಕೆ ಮಾಡಿರುವುದು ಕಂಡು ಬಂದಿದೆ. ಇದರಿಂದಾಗಿ ಚಿಕ್ಕೋಡಿ ಬೂದಿಮುಚ್ಚಿದ ಕೆಂಡದಂತಿದೆ.
ಇದರಿಂದಾಗಿ ಚಿಕ್ಕೋಡಿ ತಾಲೂಕಿನಲ್ಲಿ ಪೊಲೀಸ್ ಬಿಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮುಜಾಗ್ರತೆ ದೃಷ್ಟಿಯಿಂದ ಎಲ್ಲೆಡೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಚಿಕ್ಕೋಡಿಯ ಹೊಸಪೇಟೆ ಗಲ್ಲಿಯಲ್ಲಿ ಕೆಲವರು ಟಿಪ್ಪು ಸುಲ್ತಾನ್ ಸೇರಿದಂತೆ ಮುಸ್ಲಿಂ ರಾಜರನ್ನು ಅವಮಾನಿಸುವ ರೀತಿ ವಾಟ್ಸಾಪ್ ಸ್ಟೇಟಸ್ ಇಟ್ಟಿದ್ದರು. ಇದರೊಂದಿಗೆ ಬ್ಯಾನರ್ ಕೂಡ ಹಾಕಿದ್ದರು.

ಈ ಘಟನೆ ಆಕ್ರೋಶಕ್ಕೆ ಗುರಿಯಾಗಿದೆ. ಹಬ್ಬದ ಸಮಯದಲ್ಲಿ ಕಿಡಿಗೇಡಿಗಳು ಸಮಾಜದ ಶಾಂತಿಗೆ ಭಂಗ ತರುವಂತಹ ಕೆಲಸ ಮಾಡಿದ್ದಾರೆ. ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಇಡೀ ಪ್ರದೇಶ ಸದ್ಯ ಖಾಕಿ ಕಣ್ಗಾವಲಿನಲ್ಲಿದೆ. ಹೀಗೆ ವಾಟ್ಸಪ್ ಸ್ಟೇಟಸ್ ಇಟ್ಟವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜನರ ಗುಂಪೊಂದು ಜಮಾಯಿಸಿದ್ದರು.
ಇದೇ ಸಮಯದಲ್ಲಿ ಅಖಂಡ ಭಾರತ ಹೆಸರಿನಡಿ ಭೂಪಟದ ಬ್ಯಾನರ್ ಅಳವಡಿಕೆಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದರು. 'ಅಖಂಡ ಭಾರತ್ ಸಪ್ಮಾ ಹೈ ಆಫ್ಘಾನಿಸ್ತಾನ್ ತಕ್ ಅಪ್ನಾ ಹೈ' ಅಖಂಡ ಭಾರತ ಹೆಸರಿನ ಬ್ಯಾನರ್ ಗೆ ಕೆಲವರು ಆಕ್ರೋಶ ಹೊರ ಹಾಕಿದರು. ಇದರಿಂದಾಗಿ ಸ್ಥಳಕ್ಕೆ ಡಿವೈಎಸ್ಪಿ ಸಿ.ಬಿ ಗೌಡರ, ಸಿಪಿಐ ಭೇಟಿ ನೀಡಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.
ಇದರಿಂದ ತನಿಖೆ ತೀವ್ರಗೊಳಿಸಿದ ಪೊಲೀಸರು ವಾಟ್ಸಪ್ ಕಿಡಿಗೇಡಿಯನ್ನು ಬಂಧಿಸಿದ್ದಾರೆ. ಆತನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಚಿಕ್ಕೋಡಿಯ ಹೊಸಪೇಟೆ ಗಲ್ಲಿಯಲ್ಲಿ 50 ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ ನೀಡಲಾಗಿದೆ. ಅಖಂಡ ಭಾರತ ಹೆಸರಿನಡಿ ಭೂಪಟದ ಬ್ಯಾನರ್ ಅಳವಡಿಸಿದ ಸ್ಥಳದಲ್ಲೂ ಭದ್ರತೆ ನೀಡಲಾಗಿದೆ.
ಅಂದಹಾಗೆ ದೀಪಾವಳಿ ನಿಮಿತ್ಯ ನಿರ್ಮಿಸುವ ಕೋಟೆ ಮಾದರಿ ಬಳಿ ಗಡಿ ಭಾಗದಲ್ಲಿ ಈ ಬ್ಯಾನರ್ ಅನ್ನು ಹಾಕಲಾಗಿತ್ತು. ಬ್ಯಾನರ್ ಅಳವಡಿಸಿರುವ ಸ್ಥಳದಲ್ಲೂ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆದಂತೆ ಪೊಲೀಸರಿಂದ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಘಟನೆ ಕುರಿತಂತೆ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ವಶಕ್ಕೆ ಪಡೆದ ವ್ಯಕ್ತ ವಿಚಾರಣೆಯನ್ನು ಮಾಡಲಾಗುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications