ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಕಲಿ ಮದ್ಯ ಹಾವಳಿಗೆ ಕಠಿಣ ಕ್ರಮದ ಅಗತ್ಯ ಹೆಚ್ಚಿದೆ; ರಮೇಶ ಜಾರಕಿಹೊಳಿ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಮೇ 16: ಬೆಳಗಾವಿ ಭಾಗದಲ್ಲಿ ನಕಲಿ ಮದ್ಯದ ಹಾವಳಿ ಹೆಚ್ಚಾಗಿದ್ದು, ಇದನ್ನು ಕಠಿಣ ಕಾನೂನು ಕ್ರಮದ‌ ಮೂಲಕ ಹತ್ತಿಕ್ಕಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಗೋಕಾಕ್ ನಗರದಲ್ಲಿ ಅಂಗವಿಕಲರಿಗೆ ದ್ವಿಚಕ್ರ ವಾಹನ ವಿತರಿಸಿ ಮಾತನಾಡಿದ ಅವರು, ಮದ್ಯಪಾನ ನಿಷೇಧದ ಬಗ್ಗೆ ರಾಜ್ಯ ಸರ್ಕಾರದ ನಿರ್ಧಾರವೇ ಅಂತಿಮ. ಈಗಾಗಲೇ ಗುಜರಾತ್ ರಾಜ್ಯದಲ್ಲಿ ಮದ್ಯಪಾನ ನಿಷೇಧ ಜಾರಿಯಲ್ಲಿದೆ. ಆದರೆ ಅದು ಯಶಸ್ವಿಯಾಗಿಲ್ಲ. ಆದರೆ ಮದ್ಯಪಾನ ನಿಷೇಧದಿಂದ ನಕಲಿ ಮದ್ಯದ ಹಾವಳಿ ಹೆಚ್ಚಾಗುವ ಆತಂಕವೂ ಇದೆ. ಹೀಗಾಗಿ ಈ ಕುರಿತು ಕಠಿಣ ಕಾನೂನು ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ" ಎಂದು ತಿಳಿಸಿದರು.

Strict Legal Action Required To Stop Illicit Liquor Said Ramesh Jarkiholi

ಮದ್ಯ ನಿಷೇಧ ಮಾಡಬೇಕು ಎಂದು ಈಗಾಗಲೇ ಹಲವಾರು ಮಠಾಧೀಶರು ಮತ್ತು ಜನರು ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರ ಈ ಕುರಿತು ಕಠಿಣವಾದ ಕಾನೂನು ಜಾರಿಗೊಳಿಸಬೇಕು ಎಂದು ಸಲಹೆ ನೀಡಿದರು.

ಮೇ 17ರ ಬಳಿಕ ಲಾಕ್‌ಡೌನ್ ಸಡಿಲಿಕೆಯಾಗುವ ಸಂಭವವಿದೆ. ಆದರೂ ಜನ ಸಾಮಾಜಿಕ ಅಂತರ ಕಾಪಾಡಿಕೊಂಡು ಜೀವಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

English summary
Strict legal action is required to stop illicit liquor said Ramesh Jarkiholi in belagavi today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X