ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿ: ಸಿಎಂ ಭರವಸೆ ನಂತರ ಕಬ್ಬು ಬೆಳೆಗಾರರ ಪ್ರತಿಭಟನೆ ವಾಪಸ್

|
Google Oneindia Kannada News

ಬೆಳಗಾವಿ, ನವೆಂಬರ್ 16: ಕಬ್ಬು ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ನಿನ್ನೆಯಿಂದ ಮಾಡುತ್ತಿದ್ದ ಅಹೋರಾತ್ರಿ ಪ್ರತಿಭಟನೆ ಇಂದು ತಾತ್ಕಾಲಿಕವಾಗಿ ಅಂತ್ಯವಾಗಿದೆ.

ಪ್ರತಿಭಟನಾನಿರತ ರೈತ ಮುಖಂಡರೊಡನೆ ಸಿಎಂ ಅವರು ದೂರವಾಣಿ ಮೂಲಕ ಮಾತನಾಡಿ, ಸೋಮವಾರ ತಾವೇ ಬೆಳಗಾವಿಗೆ ಬಂದು ಸಮಸ್ಯೆ ಬಗ್ಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ ಮೇಲೆ ಕಬ್ಬು ಬೆಳೆಗಾರರು ಪ್ರತಿಭಟನೆ ವಾಪಸ್ ಪಡೆದಿದ್ದಾರೆ.

Sugar cane farmers took protest back after talking to CM

ನಿನ್ನೆಯಿಂದಲೂ ರೈತರು ಅರೆಬೆತ್ತಲೆಯಾಗಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ಮಾಡುತ್ತಿದ್ದರು. ಇಂದು ಬೆಳಗ್ಗೆ ಸಹ ತಲೆ ಮೇಲೆ ಕಲ್ಲು ಹೊತ್ತು ರೈತ ಮಹಿಳೆಯರೂ ಸೇರಿದಂತೆ ರೈತರು ಉಗ್ರ ಪ್ರತಿಭಟನೆ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಸ್ನಾನ ಮಾಡಿ ವಿನೂತನವಾಗಿ ಸರ್ಕಾರದ ವಿರುದ್ಧ ಪ್ರತಿಭಟಿಸಿದರು.

ಯುವ ರೈತ ನಾಯಕ ದರ್ಶನ್ ಪುಟ್ಟಣ್ಣಯ್ಯರನ್ನು ಬಿಜೆಪಿಗೆ ಸೆಳೆಯಲು ಯತ್ನಯುವ ರೈತ ನಾಯಕ ದರ್ಶನ್ ಪುಟ್ಟಣ್ಣಯ್ಯರನ್ನು ಬಿಜೆಪಿಗೆ ಸೆಳೆಯಲು ಯತ್ನ

ರೈತರ ಪ್ರತಿಭಟನೆಯ ಬಗ್ಗೆ ಮಾಹಿತಿ ಪಡೆದ ಕುಮಾರಸ್ವಾಮಿ, ರೈತ ಮುಖಂಡರಿಗೆ ಕರೆ ಮಾಡಿ ಸೋಮವಾರ ಬೆಂಗಳೂರಿಗೆ ಬರಲು ಹೇಳಿದರು. ಆದರೆ ರೈತರು ಅದಕ್ಕೆ ಒಪ್ಪದ ಕಾರಣ ತಾವೇ ಸೋಮವಾರ ಬೆಳಗಾವಿಗೆ ಬಂದು ರೈತರೊಂದಿಗೆ ಮಾತನಾಡುವುದಾಗಿ ಹೇಳಿದರು. ಆ ನಂತರವಷ್ಟೆ ರೈತರು ಪ್ರತಿಭಟನೆ ಹಿಂಪಡೆದರು.

ರೈತರ ಕೇಳಿದ ಪ್ರಶ್ನೆಗಳಿಗೆ ಕುಮಾರಸ್ವಾಮಿ ನೀಡಿದ ಉತ್ತರಗಳಿವುರೈತರ ಕೇಳಿದ ಪ್ರಶ್ನೆಗಳಿಗೆ ಕುಮಾರಸ್ವಾಮಿ ನೀಡಿದ ಉತ್ತರಗಳಿವು

ಬೆಳಗಾವಿ ಮಾತ್ರವಲ್ಲದೆ ಬಾಗಲಕೋಟೆ, ಮುಧೋಳ, ವಿಜಯಪುರ ಮುಂತಾದ ಕಡೆ ರೈತರು ಹೆದ್ದಾರಿ ತಡೆದು ಕಬ್ಬಿಗೆ ಬೆಂಬಲ ನೀಡಬೇಕೆಂದು ಪ್ರತಿಭಟನೆ ಮಾಡಿದರು. ಮುಧೋಳ ತಾಲ್ಲೂಕು ಬಂದ್‌ಗೆ ಕೂಡ ಕರೆ ನೀಡಿದ್ದರು.

ನ.16ರಂದು ಮುಧೋಳ ಬಂದ್‌ಗೆ ಕರೆ ಕೊಟ್ಟ ಕಬ್ಬು ಬೆಳೆಗಾರರುನ.16ರಂದು ಮುಧೋಳ ಬಂದ್‌ಗೆ ಕರೆ ಕೊಟ್ಟ ಕಬ್ಬು ಬೆಳೆಗಾರರು

English summary
Sugar cane farmers took their protest back after they talk to CM Kumaraswamy through phone. CM requested farmers to not to protest, he said that he will come to Belgavi on Monday and solve their problems.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X