ಬಾಕಿ ಹಣ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರ ಪ್ರತಿಭಟನೆ
ಬೆಳಗಾವಿ, ಡಿಸೆಂಬರ್ 22 : ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ರಮೇಶ್ ಜಾರಕಿಹೋಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ಕಬ್ಬು ಕಳಿಸಿದ ರೈತರಿಗೆ ಬರಬೇಕಾದ ಬಾಕಿ ಹಣ ನೀಡಿದ ಹಿನ್ನಲೆ ರೈತರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಎರಡು ದಿನಗಳಿಂದ ರೈತರು .ಅರೆಬೆತ್ತಲೆ ಪ್ರತಿಭಟನೆ ಮಾಡುತ್ತಿದ್ದಾರೆ. ಕಬ್ಬು ಬೆಳಗಾಗರಿಗೆ ಮೂರು ವರ್ಷದಿಂದ ಬಾಕಿ ಹಣವನ್ನು ನೀಡದೆ ಸತಾಯಿಸುತ್ತಿದ್ದಾರೆ. ನಾವು ಕಬ್ಬುಬೆಳೆಯನ್ನು ನಂಬಿಕೊಂಡೇ ನಮ್ಮ ಸಂಸಾರವನ್ನು ಸಾಗಿಸುತ್ತಿದ್ದೇವೆ. ಹಣವನ್ನು ನೀಡದೆ ಸಚಿವ ರಮೇಶ್ ಜಾರಕಿಹೊಳಿ ಸತಾಯಿಸುತ್ತಿದ್ದಾರೆ ಎಂದು ರೈತರು ತಮ್ಮ ಅಳಲು ತೋಡಿಕೊಂಡರು.

ರೈತರು ಸರ್ಕಾರದ ವಿರುದ್ದ ನಾಟಕ ಮಾಡಿ ಆಕ್ರೋಶ ವ್ಯಕ್ತಪಡಿಸಿದ ವ್ಯಕ್ತಡಿಸಿದರು. ಸಿದ್ದರಾಮಯ್ಯ ಅವರು ಶುಕ್ರವಾರ ಮತ್ತು ಶನಿವಾರ ಜಿಲ್ಲೆಯ ಪ್ರವಾಸದಲ್ಲಿದ್ದಾರೆ. ಸಿ.ಎಂ ಸಿದ್ದರಾಮಯ್ಯ ಬಂದು ಬಾಕಿ ಕೊಡಿಸುವರೆಗೆಪ್ರತಿಭಟನೆ ಮುಂದುವರೆಸುತ್ತೇವೆ ಎಂದು ರೈತರು ಹೇಳಿದ್ದಾರೆ. ಬಾಕಿ ಕೊಡದ ಸರ್ಕಾರದ ವಿರುದ್ದ ಬೆಳಗಾವಿ ರೈತರ ಹೋರಾಟ. ರೈತರ ಪ್ರತಿಭಟನೆಯಿಂದ ಸರ್ಕಾರದ ಸಾಧನಾ ಸಮಾವೇಶ ಇರುಸು ಮುರುಸುಗೊಂಡಿದೆ.












Click it and Unblock the Notifications