ಕಾಂಗ್ರೆಸ್ಗೆ ಮತ: ಉಪಕಾರಸ್ಮರಣೆಯ ಮಂತ್ರ ಜಪಿಸಿದ ಮಾತೆ ಮಹಾದೇವಿ
ಬೆಳಗಾವಿ, ಮೇ 1: 'ನಮಗೆ ಉಪಕಾರ ಮಾಡಿದ ಕಾಂಗ್ರೆಸ್ಅನ್ನು ಚುನಾವಣೆಯಲ್ಲಿ ಬೆಂಬಲಿಸಿ ನಾವು ಉಪಕಾರ ಮಾಡಬೇಕು' ಎಂದು ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿದ್ದಾರೆ.
ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಟ್ಟ ನಿರ್ಧಾರ ತೆಗೆದುಕೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಈ ರೀತಿ ನಮಗೆ ಉಪಕಾರ ಮಾಡಿದ ಅವರಿಗೆ ನಾವೂ ಉಪಕಾರ ಮಾಡಬೇಕು' ಎಂದು ಅವರು ತಿಳಿಸಿದರು.
ಜಿಲ್ಲೆಯ ನಿರ್ಮಿಸಿರುವ ಬಸವ ಮಂಟಪವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ಐತಿಹಾಸಿಕ ನಿರ್ಣಯವನ್ನು ನೀವು ತೆಗೆದುಕೊಳ್ಳಿ. ನಾವು ನಿಮ್ಮನ್ನು ಬೆಂಬಲಿಸುತ್ತೇವೆ ಎಂದು ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದೆವು. ಅಂದರಂತೆಯೇ ಅವರು ನಡೆದುಕೊಂಡಿದ್ದಾರೆ ಎಂದು ಮಾತೆ ಮಹಾದೇವಿ ಹೇಳಿದರು.

ಚುನಾವಣೆಯಲ್ಲಿ ಕಾಂಗ್ರೆಸ್ಅನ್ನು ಬೆಂಬಲಿಸುವಂತೆ ಹೇಳಿಕೆ ನೀಡಿದ್ದಕ್ಕೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಈ ವಿಚಾರದಲ್ಲಿ ಮುಚ್ಚುಮರೆ ಏಕೆ. ನಾನು ಬೆಂಬಲಿಸುತ್ತೇನೆ ಎಂಬುದನ್ನು ಬಹಿರಂಗವಾಗಿಯೇ ಹೇಳುತ್ತೇನೆ. ಹಿಂದೊಂದು-ಮುಂದೊಂದು ಹೇಳುವುದು ನಮಗೆ ತಿಳಿದಿಲ್ಲ ಎಂದು ಹೇಳಿದರು.
ವ್ಯಾಪಕ ಹೋರಾಟದ ಫಲವಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ಬೇಡಿಕೆಯನ್ನು ಶಿಫಾರಸು ಮಾಡಿದೆ. ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತರು ಎಂಬ ಮಾನ್ಯತೆಯನ್ನೂ ನೀಡಬೇಕು ಎಂದು ಕೋರಿಕೆ ಸಲ್ಲಿಸಲಾಗಿದೆ. 900 ವರ್ಷಗಳ ಬಳಿಕ ಈ ಐತಿಹಾಸಿಕ ಕಾರ್ಯ ನಡೆದಿದೆ.
ಪಕ್ಷದ ಒಳಗಿನ ಮತ್ತು ಹೊರಗಿನವರ ವಿರೋಧಗಳನ್ನು ಲೆಕ್ಕಿಸದೆ ಸಿದ್ದರಾಮಯ್ಯ ಅವರು ದಿಟ್ಟತನದಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಭಿನ್ನಮತೀಯರು ಇದ್ದರೂ ಅವರ ಧ್ವನಿ ಇಲ್ಲಿ ಕ್ಷೀಣವಾಗಿದೆ.
ಜಾತಿ ಎಂದರೆ ಕತ್ತಲು, ಧರ್ಮವೆಂದರೆ ಬೆಳಕು ಎಂಬುದನ್ನು ಮರೆಯಬಾರದು. ಲಿಂಗಾಯತವು ಜಾತಿಯಲ್ಲ. ಅದು ಧರ್ಮ ಎಂಬುದನ್ನು ಬಹಳ ಹಿಂದಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇನೆ. ಈ ಸಮುದಾಯವನ್ನು ಹಿಂದೂ ಲಿಂಗಾಯತ ಎಂದು ಗುರುತಿಸುವುದು ಮಹಾಪರಾಧ ಎಂದು ತಿಳಿಸಿದರು.
ವೀರಶೈವ ಸಂಪ್ರದಾಯವಾದಿಗಳಿಗೂ ಲಿಂಗಾಯತ ಧರ್ಮ ಪಾಲಿಸುವವರಿಗೂ ಬಹಳ ವ್ಯತ್ಯಾಸಗಳಿವೆ. ಆದರೂ ಬಸವಣ್ಣನೇ ನಮ್ಮ ಗುರು, ವಚನ ಸಾಹಿತ್ಯವೇ ನಮ್ಮ ಸಂವಿಧಾನ ಎಂದು ಒಪ್ಪಿಕೊಂಡು ಬರುವವರನ್ನು ಮುಕ್ತ ಸ್ವಾಗತವಿದೆ.
ಕೆಲ ವಿರಕ್ತರು ಪಂಚಪೀಠದವರ ಜತೆ ಸೇರಿಕೊಂಡು ಸಮಾಜಕ್ಕೆ ಹಾಗೂ ಗುರುವಿಗೆ ದ್ರೋಹ ಎಸಗುತ್ತಿದ್ದಾರೆ. ವಿರಕ್ತರು ಬಸವಣ್ಣನೇ ಗುರು ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications