ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಜಮೀರ್ ಅಹ್ಮದ್ ಯಾವ ದೇಶದ ಪರ ಇದ್ದಾರೆ ತಿಳಿಸಲಿ"

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಏಪ್ರಿಲ್ 20: ಪಾದರಾಯನಪುರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೇ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಪ್ರತಿಕ್ರಿಯಿಸಿದ್ದಾರೆ.

"ಪಾದರಾಯನಪುರದಲ್ಲಿ ನಡೆದ ಈ ಘಟನೆ ರಾಜ್ಯಕ್ಕೆ ಶೋಭೆ ತರುವುದಿಲ್ಲ. ಇದಕ್ಕೆ ಪ್ರಚೋದನೆ ನೀಡುವ ಕೆಲಸ ನಡೆಯುತ್ತಿದೆ. ಇಂಥವರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕಿದೆ" ಎಂದು ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಜತೆ ಸುರೇಶ್ ಅಂಗಡಿ ಸಭೆಅಲ್ಪಸಂಖ್ಯಾತ ಸಮುದಾಯದ ಮುಖಂಡರ ಜತೆ ಸುರೇಶ್ ಅಂಗಡಿ ಸಭೆ

"ಈ ರೀತಿ ಕೋಮಿಗೆ ಪ್ರಚೋದನೆ ನೀಡುವವರ ಮೇಲೆ ದೇಶ ದ್ರೋಹದ ಪ್ರಕರಣ ದಾಖಲಿಸಬೇಕು. ಜಮೀರ್ ಅಹ್ಮದ್ ಅವರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಮೊದಲು ಅವರು ಯಾವ ದೇಶದ ಪರವಾಗಿದ್ದಾರೆ ಅದನ್ನು ತಿಳಿಸಲಿ" ಎಂದು ಕಿಡಿಕಾರಿದ್ದಾರೆ.

Suresh Angadi Reaction To Padarayanapura Incident

"ರಾಜ್ಯದ ಗೃಹ ಸಚಿವರು ಇದರ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ ಎಂಬ ಭರವಸೆ ನೀಡಿದ್ದಾರೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಲಿದೆ" ಎಂದು ಹೇಳಿದ್ದಾರೆ.

English summary
The Union Minister of Railways Suresh Angadi has reacted to the incident of padarayanapura
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X