"ಶಿಕ್ಷಕರ ತವರೂರು" ಬೆಳಗಾವಿಯ ಈ ಇಂಚಲ ಗ್ರಾಮ
ಬೆಳಗಾವಿ, ಸೆಪ್ಟೆಂಬರ್ 5: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮ ದೇಶಕ್ಕೆ ಅತಿ ಹೆಚ್ಚು ಸೈನಿಕರನ್ನು ನೀಡಿದ ಗೌರವಕ್ಕೆ ಪಾತ್ರವಾದ ಊರು. ಒಂದು ಕಾಲದಲ್ಲಿ ಅಪರಾಧ ಕೃತ್ಯಗಳ ಮೂಲಕ ಈ ಗ್ರಾಮ ಅಪಕೀರ್ತಿಗೆ ಪಾತ್ರವಾಗಿತ್ತು. ಈ ಗ್ರಾಮದಲ್ಲಿ ಕೊಲೆ ಸುಲಿಗೆ, ಮಚ್ಚು ಲಾಂಗುಗಳ ಅಬ್ಬರವೇ ಜಾಸ್ತಿಯಾಗಿತ್ತು. ಆದರೆ ಈಗ ಪರಿಸ್ಥಿತಿ ಸಂಪೂರ್ಣ ಭಿನ್ನವಾಗಿದೆ. ಶಿಕ್ಷಣದ ಕಂಪು ಮನೆ ಮನೆಯಲ್ಲೂ ಪಸರಿಸಿದೆ.
ಇಂಚಲ ಮಠದ ಶಿವಾನಂದ ಭಾರತಿ ಮಹಾಸ್ವಾಮಿಗಳು ಇಡೀ ಗ್ರಾಮವನ್ನೇ ಬದಲಿಸಿದ್ದಾರೆ. ಗ್ರಾಮದಲ್ಲಿ ಎಲ್ ಕೆಜಿ ಯಿಂದ ಹಿಡಿದು ಪದವಿವರೆಗೆ ಶಿಕ್ಷಣ ಸಂಸ್ಥೆ ಆರಂಭಿಸಿದ್ದಾರೆ. ಡಿಇಡಿ, ಬಿಇಡಿ ಕಾಲೇಜು, ವೈದ್ಯಕೀಯ ಮಹಾವಿದ್ಯಾಲಯ ಆರಂಭಿಸಿದ್ದಾರೆ. ಗ್ರಾಮಕ್ಕೆ ಶಿಕ್ಷಣದ ಮಹತ್ವದ ಅರಿವು ಮೂಡಿಸಿದ್ದಾರೆ.

ಗ್ರಾಮದಲ್ಲಿ ಅನಕ್ಷರತೆ ಹೋಗಲಾಡಿಸಿ ಪ್ರತಿಯೊಬ್ಬರಿಗೂ ಶಿಕ್ಷಣ ಕೊಡಿಸಿದ್ದಾರೆ. ಹೀಗಾಗಿ ಗ್ರಾಮದಲ್ಲಿ ಮನೆಗೊಬ್ಬರಂತೆ ಸರ್ಕಾರಿ ನೌಕರಿಯಲ್ಲಿದ್ದಾರೆ. ಜೊತೆಗೆ ಇಡೀ ಗ್ರಾಮದಲ್ಲಿ ಅತಿಹೆಚ್ಚು ಶಿಕ್ಷಕರಿದ್ದು, ರಾಜ್ಯದಲ್ಲಿ "ಶಿಕ್ಷಕರ ತವರೂರು" ಎಂದೇ ಗುರುತಿಸಿಕೊಂಡಿದೆ.

ಇಂಚಲ ಮಠದ ಶಿವಾನಂದ ಭಾರತಿ ಮಹಾಸ್ವಾಮಿಗಳು ಗ್ರಾಮದಲ್ಲಿ ಮೊದಲು ಪ್ರಾಥಮಿಕ ಶಿಕ್ಷಣ ಆರಂಭಿಸಿದರು. 1975ರಲ್ಲಿ ಪ್ರೌಢ ಶಿಕ್ಷಣ, 1982ರಲ್ಲಿ ಪಿಯು ಕಾಲೇಜು, 1985ರಲ್ಲಿ ಡಿಎಡ್ ಕಾಲೇಜು ಆರಂಭ ಮಾಡಿದರು. ಆರಂಭದಲ್ಲಿ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳಿದ್ದರು. ಇದೀಗ ಸಾವಿರಾರು ವಿದ್ಯಾರ್ಥಿಗಳಿದ್ದಾರೆ. ಇಂಚಲ ಗ್ರಾಮದಲ್ಲಿ ಹತ್ತು ಸಾವಿರಕ್ಕೂ ಅಧಿಕ ಜನಸಂಖ್ಯೆಯಿದ್ದು, ಸುಮಾರು ಒಂದು ಸಾವಿರಕ್ಕೂ ಅಧಿಕ ಮನೆಗಳಿವೆ. ಗ್ರಾಮದಲ್ಲಿ ಇಲ್ಲಿವರೆಗೂ ಸುಮಾರು ಒಂಬತ್ತನೂರಕ್ಕೂ ಅಧಿಕ ಶಿಕ್ಷಕರಿದ್ದು, ಎಲ್ಲರೂ ಸರ್ಕಾರಿ ಶಿಕ್ಷಕರೇ ಎಂಬುದು ವಿಶೇಷ.
-
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications