10 ದಿನದ ಚಳಿಗಾಲದ ಅಧಿವೇಶನಕ್ಕೆ ಸುವರ್ಣ ವಿಧಾನಸೌಧ ಸಿದ್ಧ
ಬೆಳಗಾವಿ, ಡಿಸೆಂಬರ್ 09 : 10 ದಿನಗಳ ಕಾಲ ನಡೆಯುವ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧ ಸಜ್ಜಾಗಿದೆ. ಮೊದಲ ದಿನ ಪ್ರತಿಪಕ್ಷ ಬಿಜೆಪಿ ಬೃಹತ್ ರೈತ ಸಮಾವೇಶ ಆಯೋಜನೆ ಮಾಡಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ.
ಡಿಸೆಂಬರ್ 10ರ ಸೋಮವಾರದಿಂದ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ. ಅಧಿವೇಶನದ ಭದ್ರತೆಗಾಗಿ 4 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಅಧಿವೇಶನದ ಖರ್ಚು ವೆಚ್ಚಗಳು ಪಾರದರ್ಶಕರಾಗಿರಬೇಕು. ಸರ್ಕಾರದ ಹಣ ದುರುಪಯೋಗವಾಗಬಾರದು ಎಂಬ ಕಾರಣಕ್ಕೆ ಇದೇ ಮೊದಲ ಬಾರಿಗೆ ಐಎಎಸ್ ಅಧಿಕಾರಿ ಉಜ್ಜಲ್ ಕುಮಾರ್ ಘೋಷ್ ಅವರನ್ನು ವಿಶೇಷ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.
ವಿಧಾಸನಸಭೆ ಸ್ಪೀಕರ್ ರಮೇಶ್ ಕುಮಾರ್ ಅವರ ಆಶಯದಂತೆ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸಲಿದ್ದಾರೆ.

ಹಲವು ಪ್ರತಿಭಟನೆ
ಮೊದಲ ದಿನ ಹಲವು ಸಂಘಟನೆಗಳ ಪ್ರತಿಭಟನೆ ನಡೆಯಲಿದೆ. ಕಬ್ಬು ಬೆಳೆಗಾರರು, ಉತ್ತರ ಕರ್ನಾಟಕದ ವಿವಿಧ ಮಠಾಧೀಶರು ಸರ್ಕಾರದ ವಿರುದ್ಧ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ನಾಯಕರು ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಮೈತ್ರಿ ಸರ್ಕಾರಕ್ಕೆ ಮೊದಲ ದಿನವೇ ಪ್ರತಿಭಟನೆ ಬಿಸಿ ತಟ್ಟಲಿದೆ.

ಶಾಸಕರ ಊಟಕ್ಕೆ ಕತ್ತರಿ
ಅಧಿವೇಶನದಲ್ಲಿ ಭಾಗವಹಿಸುವ ಶಾಸಕರಿಗೆ ಈ ಬಾರಿ ಕೇವಲ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳಗಿನ ಉಪಹಾರ ಮತ್ತು ರಾತ್ರಿ ಊಟವನ್ನು ಶಾಸಕರು ತಮಗೆ ಸಿಗುವ ಭತ್ಯೆಯಲ್ಲಿಯೇ ಸೇವಿಸಬೇಕು. ತಮ್ಮ ಪಿಎ, ಗನ್ಮ್ಯಾನ್, ಡ್ರೈವರ್ಗಳ ಊಟಕ್ಕೆ ಶಾಸಕರೇ ವೆಚ್ಚ ಭರಿಸಬೇಕು. ಶಾಸಕರಿಗೆ ಮಾತ್ರ ರೂಂ ವ್ಯವಸ್ಥೆ ಮಾಡಲಾಗಿದೆ.

ಸಚಿವಾಲಯ ಶಿಫ್ಟ್
10 ದಿನಗಳ ಅಧಿವೇಶನಕ್ಕಾಗಿ ವಿಧಾನಸಭೆ ಮತ್ತು ವಿಧಾನ ಪರಿಷತ್ನ ಎರಡೂ ಸಚಿವಾಲಯಗಳು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಗೊಂಡಿವೆ. ಸುಮಾರು 300 ಸಿಬ್ಬಂದಿ ಶನಿವಾರದಿಂದ ಬೆಳಗಾವಿಯಲ್ಲಿ ಕೆಲಸ ಆರಂಭಿಸಿದ್ದಾರೆ. ಐದು ಸಾವಿರ ಅಧಿಕಾರಿಗಳು, ಶಾಸಕರು, ಪತ್ರಕರ್ತರಿಗೆ ಮಾತ್ರ ಊಟ, ವಸತಿ, ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

17.57 ಕೋಟಿ ವೆಚ್ಚ
ಬೆಳಗಾವಿಯಲ್ಲಿ ನಡೆಯುವ 10 ದಿನದ ಅಧಿವೇಶನಕ್ಕೆ 17.57 ಕೋಟಿ ರೂ. ವೆಚ್ಚ ನಿಗದಿ ಮಾಡಲಾಗಿದೆ. ಭದ್ರತೆಗೆ ನಿಯೋಜನೆಗೊಳ್ಳುವ ಪೊಲೀಸರಿಗೆ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಿಕೊಡಲಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications