ಬಸ್ ನಿಲ್ಲಿಸದೆ ವಿದ್ಯಾರ್ಥಿ ಮೇಲೆ ಹರಿಸಲು ಮುಂದಾದ ಚಾಲಕ
ಬೆಳಗಾವಿ, ಸೆಪ್ಟೆಂಬರ್ 24: ಬಸ್ ನಿಲ್ಲಿಸುವಂತೆ ಕೈ ಮಾಡಿದ ವಿದ್ಯಾರ್ಥಿ ಮೇಲೆ ಬಸ್ ಹರಿಸಲು ಯತ್ನಿಸಿದ ಚಾಲಕನ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ವೈರಲ್ ವಿಡಿಯೋ: ಕೇಳಲೇ ಬೇಕಾದ ಪಿಯುಸಿ ವಿದ್ಯಾರ್ಥಿಯ ಭಾಷಣ
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೆಕವಾಡ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ಇಲ್ಲದೇ ಪರದಾಡುತ್ತಿದ್ದರು. ಈ ಸಮಯದಲ್ಲಿ ಅಲ್ಲಿಗೆ ಬಸ್ಸೊಂದು ಬಂದಿದ್ದು, ಶಾಲಾ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲಿಲ್ಲ. ಇದರಿಂದ ವಿದ್ಯಾರ್ಥಿಗಳು ತಡೆಯಲು ಮುಂದಾದಾಗ ಅವರ ಮೇಲೆ ಬಸ್ ಹರಿಸಲು ಮುಂದಾಗಿ ಸಾರಿಗೆ ಸಂಸ್ಥೆಯ ಬಸ್ ಚಾಲಕ ಉದ್ಧಟತನ ತೋರಿದ್ದಾನೆ.
ಕೂದಲೆಳೆ ಅಂತರದಲ್ಲಿ ವಿದ್ಯಾರ್ಥಿ ಪಾರಾಗಿದ್ದಾನೆ. ಬಸ್ ಬೆನ್ನಟ್ಟಿದರು ನಿಲ್ಲಿಸದೇ ಹೋದ ಚಾಲಕನ ವರ್ತನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ವಿದ್ಯಾರ್ಥಿ ಏಕಾಏಕಿ ಚಲಿಸುತ್ತಿರುವ ಬಸ್ ನಿಲ್ಲಿಸಲು ಮುಂದಾಗಿದ್ದು ಕೂಡ ಉದ್ಧಟತನವೇ. ಆದರೆ ನಿಯಮದ ಪ್ರಕಾರ ಈ ಗ್ರಾಮದಲ್ಲಿ ಬಸ್ ನಿಲ್ಲಿಸಲು ಅವಕಾಶ ಇತ್ತೋ ಇಲ್ಲವೋ ಎಂಬ ಬಗ್ಗೆ ಮಾತ್ರ ಸಂಪೂರ್ಣ ಮಾಹಿತಿ ದೊರೆತಿಲ್ಲ.