ಸರ್ಕಾರದ ಕಣ್ಣು ತೆರೆಸಲು ಪ್ರತಿಭಟನೆ : ಲಕ್ಷಣ್ ಸವದಿ
ಬೆಳಗಾವಿ, ಡಿಸೆಂಬರ್ 09 : 'ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ರೈತ ಸಮಾವೇಶ ನಡೆಸಿ ಸರ್ಕಾರದ ಕಣ್ಣು ತೆರೆಸಲಿದೆ' ಎಂದು ಕರ್ನಾಟಕ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಲಕ್ಷಣ್ ಸವದಿ ಹೇಳಿದರು.
ಬೆಳಗಾವಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, 'ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ಭರವಸೆ ನೀಡಿದ್ದರು. ಸರ್ಕಾರಕ್ಕೆ 6 ತಿಂಗಳ ಸಮಯ ನೀಡಿದೆವು. ಸರ್ಕಾರ ಎಲ್ಲರ ಸಾಲ ಮನ್ನಾ ಮಾಡಬೇಕು' ಎಂದು ಒತ್ತಾಯಿಸಿದರು.
'19 ದ್ವಿದಳ ಧಾನ್ಯ ಬೆಳೆಗಳಿಗೆ ಕೇಂದ್ರ ಸರ್ಕಾರ ವೈಜ್ಞಾನಿಕ ಬೆಲೆ ನಿಗದಿ ಮಾಡಿದೆ. ರೈತರ ಬೆಳೆಗಳ ಖರೀದಿ ಕೇಂದ್ರವನ್ನು ರಾಜ್ಯ ಸರ್ಕಾರ ಆರಂಭಮಾಡಿಲ್ಲ. ವಿಜಯಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಬರಬೇಕಾದ ಕಬ್ಬಿನ ಬಾಕಿ ಬಿಲ್ ಕೊಟ್ಟಿಲ್ಲ' ಎಂದು ಆರೋಪಿಸಿದರು.

'ಮೂರು ಜಿಲ್ಲೆಯ 46 ಸಕ್ಕರೆ ಕಾರ್ಖಾನೆಗಳು ಸೇರಿ ಒಟ್ಟು 1630 ಕೋಟಿ ಕಬ್ಬಿನ ಬಿಲ್ ಕೊಡಬೇಕಿದೆ. ಅದೇ ರೀತಿ ಕಲಬುರಗಿ, ಬೀದರ್ ಜಿಲ್ಲೆಯ ಕಬ್ಬಿನ ಬಿಲ್ ಇನ್ನೂ ಕೊಟ್ಟಿಲ್ಲ. ಎಸ್ಎಪಿ ಕಾನೂನಿನ ಅಡಿ ಮೊದಲ ಕಂತು ಹಾಗೂ ಲಾಭಾಂಶದಲ್ಲಿ 2ನೇ ಬಿಲ್ ಕೊಡಬೇಕಿತ್ತು. ಆದರೆ, ಕಾರ್ಖಾನೆ ಲಾಭಿಗೆ ಮಣಿದು ರಾಜ್ಯ ಕ್ರಮ ಕೈಗೊಂಡಿಲ್ಲ' ಎಂದರು.
'ರೈತರ ಬೆಳೆ ಹಾನಿಗೆ ಇಲ್ಲಿಯವರೆಗೆ ವಿಮೆ ಸಿಕ್ಕಿಲ್ಲ. ಸಮ್ಮಿಶ್ರ ಸರ್ಕಾರ ಬರ ಪೀಡಿತ ಪ್ರದೇಶದಲ್ಲಿ ಜಾನುವಾರುಗಳಿಗೆ ನೀರು ಒದಗಿಸಿಲ್ಲ. ಕುಡಿಯುವ ನೀರು ಪೂರೈಕೆ ಮಾಡಲು ಕ್ರಮ ಕೈಗೊಂಡಿಲ್ಲ' ಎಂದು ಲಕ್ಷಣ್ ಸವದಿ ಟೀಕಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications