ಕೋಳಿ ಮರಿ ಎಸೆದು ಹರಕೆ ತೀರಿಸುವ ವಡಗಾವಿ ಜಾತ್ರೆ...
ಬೆಳಗಾವಿ, ಜುಲೈ 26: ಕುಂದಾನಗರಿಯ ವಡಗಾವಿಯಲ್ಲಿ ಸುಪ್ರಸಿದ್ಧ ಮಂಗಾಯಿದೇವಿ ದೇವಸ್ಥಾನದಲ್ಲಿ ಆಷಾಢದ ಕೊನೆಯ ವಾರ ವಿಶೇಷವಾದ ಜಾತ್ರೆಯೊಂದು ನಡೆಯುತ್ತದೆ. ಜಾತ್ರೆಗಿಂತ, ಜಾತ್ರೆಯಲ್ಲಿ ನಡೆಯುವ ಹರಕೆಯೇ ಹೆಚ್ಚು ಗಮನ ಸೆಳೆಯುತ್ತದೆ.
ಕೈಯಲ್ಲಿ ಪುಟ್ಟ ಪುಟ್ಟ ಕೋಳಿ ಮರಿಗಳನ್ನು ಹಿಡಿದು ದೇವಿ ಮುಂದೆ ಸಾಲು ನಿಂತು ಪ್ರಾರ್ಥಿಸುತ್ತಿರುವ ಭಕ್ತರನ್ನು ನೋಡಿ ಇದೇನಪ್ಪಾ ಎಂದು ಆಲೋಚಿಸುವಷ್ಟರಲ್ಲೇ ಆ ಕೋಳಿ ಮರಿಗಳನ್ನು ದೇವಸ್ಥಾನದ ಮೇಲೆ ಎಸೆದಿರುತ್ತಾರೆ ಅವರು. ಇದೇ ಇಲ್ಲಿನ ಹರಕೆಯಂತೆ. ಕೋಳಿ ಮರಿಗಳನ್ನು ಎಸೆಯುವ ಈ ಜಾತ್ರೆ ಕುಂದಾನಗರದಲ್ಲಿ ಭಾರೀ ಪ್ರಸಿದ್ಧಿ.
ಕೋಳಿ ಮರಿಗಳನ್ನು ದೇವಸ್ಥಾನದ ಮೇಲೆ ಎಸೆದು ಹರಕೆ ತೀರಿಸುವುದು ಇಲ್ಲಿನ ರೂಢಿ. ಈ ರೂಢಿ ತಲತಲಾಂತರವಾಗಿ ನಡೆದುಕೊಂಡು ಬಂದಿದೆ. ಆಷಾಢ ಮಾಸದ ಕೊನೆಯ ಮಂಗಳವಾರ ಆರಂಭವಾಗುವ ಈ ಮಂಗಾಯಿದೇವಿ ಜಾತ್ರೆ ಮೂರು ದಿನಗಳ ಕಾಲ ನಡೆಯುತ್ತದೆ. ಅಲ್ಲಿಯವರೆಗೂ ಕೋಳಿ ಮರಿ ಎಸೆಯುವ ಹರಕೆ ಮುಂದುವರೆಯುತ್ತಲೇ ಇರುತ್ತದೆ.

ತಮಗೆ ಎದುರಾದ ಸಮಸ್ಯೆಗಳನ್ನು ಪರಿಹರಿಸಿದರೆ ಜಾತ್ರೆಯಲ್ಲಿ ಕೋಳಿ ಮರಿಗಳನ್ನು ಅರ್ಪಿಸುವುದಾಗಿ ಭಕ್ತರು ಹರಕೆ ಹೊತ್ತುಕೊಳ್ಳುತ್ತಾರೆ. ಬೇಡಿಕೆ ಈಡೇರಿದರೆ ಜಾತ್ರೆಗೆ ಬಂದು ಐದು ರೂಪಾಯಿಗೊಂದರಂತೆ ಕೋಳಿ ಮರಿಗಳನ್ನು ಖರೀದಿ ಮಾಡಿ, ದೇವಸ್ಥಾನದ ಮೇಲೆ ಎಸೆದು ಹರಕೆ ಪೂರೈಸಿಕೊಳ್ಳುತ್ತಾರೆ. ಒಬ್ಬೊಬ್ಬರು ಎರಡು, ಐದು, ಹನ್ನೊಂದು ಕೊಳಿ ಮರಿಗಳನ್ನು ದೇವಸ್ಥಾನದ ಮೇಲೆ ತೂರಿ ಹರಕೆ ತೀರಿಸುತ್ತಾರೆ.
ಮಂಗಾಯಿ ದೇವಿಗೆ ಪೂಜೆ ಸಲ್ಲಿಸಿದರೆ ಮಳೆ-ಬೆಳೆ ಉತ್ತಮವಾಗಿ ಆಗುತ್ತದೆ ಎಂಬ ನಂಬಿಕೆಯಿಂದ ಸುತ್ತಮುತ್ತಲಿನ ರೈತರು ತಪ್ಪದೇ ಪ್ರತಿ ವರ್ಷ ಜಾತ್ರೆಗೆ ಬಂದು ದೇವಿಗೆ ಪೂಜೆ ಸಲ್ಲಿಸುತ್ತಾರೆ. ಈ ಜಾತ್ರೆಗೆ ಮಹಾರಾಷ್ಟ್ರ, ಗೋವಾ ರಾಜ್ಯದಿಂದಲೂ ಪ್ರತಿ ವರ್ಷ ಸಾವಿರಾರು ಭಕ್ತರು ತಪ್ಪದೇ ಆಗಮಿಸುತ್ತಾರೆ. ಕೋಳಿ ಮರಿಯನ್ನು ಎಸೆದು ಹರಕೆ ತೀರಿಸಿಕೊಳ್ಳುತ್ತಾರೆ.
ಹೀಗೆ ಹರಕೆ ತೀರಿಸುವಾಗ ಎಸೆಯಲಾಗುವ ಎಷ್ಟೋ ಕೋಳಿ ಮರಿಗಳು ಸಾವನ್ನಪ್ಪುತ್ತವೆ. ಅದಾವುದನ್ನು ಲೆಕ್ಕಿಸದೇ ಭಕ್ತರು ತಮ್ಮ ಪಾಡಿಗೆ ಕೋಳಿ ಮರಿ ಎಸೆದು ಹರಿಕೆ ತೀರಿಸಿ ಸಂತೃಪ್ತಿಯಲ್ಲಿ ಹೊರಟು ಹೋಗುತ್ತಾರೆ. ದೇವಸ್ಥಾನದ ಮೇಲೆ ಎಸೆದಿರುವ ಕೋಳಿ ಮರಿಗಳನ್ನು ಸಂಗ್ರಹಿಸಿ ಕೆಲವರು ಮತ್ತೆ ಅವುಗಳನ್ನು ಮಾರುತ್ತಾರೆ. ಮೂರು ದಿನಗಳ ಜಾತ್ರೆಯಲ್ಲಿ ಲಕ್ಷಾಂತರ ಕೋಳಿ ಮರಿಗಳನ್ನು ಎಸೆಯಲಾಗುತ್ತದೆ. ಜನ ಮರಳೋ ಜಾತ್ರೆ ಮರಳೋ ಎಂಬಂತೆ ಜನರು ಬಂದು ಕೋಳಿ ಮರಿಗಳನ್ನು ಎಸೆದು ಹೋಗುತ್ತಿರುತ್ತಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications