Belagavi: ಲೋಕಸಭೆಯಲ್ಲಿ ಭದ್ರತಾ ಲೋಪ: ಸುವರ್ಣಸೌಧದಲ್ಲಿ ಬಿಗಿ ಬಂದೋಬಸ್ತ್
ಬೆಳಗಾವಿ, ಡಿಸೆಂಬರ್ 14: ಲೋಕಸಭೆಯಲ್ಲಿ ಭದ್ರತಾ ಲೋಪ ನಡೆದು ಆಗಂತುಕರು ಸದನದೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಬೆನ್ನಲ್ಲೇ ಬೆಳಗಾವಿಯ ಸುವರ್ಣಸೌಧದಲ್ಲಿ ಭದ್ರತೆ ಹೆಚ್ಚಿಸಿ, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸುವರ್ಣ ವಿಧಾನಸೌಧದ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ತಮ್ಮ ಚೇಂಬರ್ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಸಭೆಯಲ್ಲಿ ಭದ್ರತಾ ಸಿಬ್ಬಂದಿಗಳಿಗೆ ಎಲ್ಲೆಡೆ ಕಟ್ಟೆಚ್ಚರ ವಹಿಸುವಂತೆ ನಿರ್ದೇಶನಗಳನ್ನು ನೀಡಿದರು, ಶಾಸಕರು ಮತ್ತು ಮಂತ್ರಿಗಳೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳ ಮೇಲೆ ಮೇಲ್ವಿಚಾರಣೆಯ ಮಹತ್ವವನ್ನು ಒತ್ತಿ ಹೇಳಿದರು. ಅಲ್ಲದೆ, ಅಧಿಕೃತ ಸಿಬ್ಬಂದಿಗೆ ಮಾತ್ರ ಅವಕಾಶ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸದ್ಯ ಸುವರ್ಣಸೌಧದಲ್ಲಿ ಭದ್ರತಾ ಸಿಬ್ಬಂದಿ ಸುರ್ವಣಸೌಧ ಪ್ರವೇಶಿಸುವ ಪ್ರತೀ ವ್ಯಕ್ತಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಪಾಸ್ಗಳನ್ನು ಹೊಂದಿರುವವರಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗುತ್ತಿದೆ. ಲೋಕಸಭೆಯಲ್ಲಿ ವ್ಯಕ್ತಿಯೊಬ್ಬ ಗ್ಯಾಲರಿಯಿಂದ ಕೆಳಗೆ ಜಿಗಿದು ಹಂಗಾಮಾ ಸೃಷ್ಟಿಸಿದ್ದ. ಹೀಗಾಗಿ ಸಂಸತ್ನಲ್ಲಿ ಭದ್ರತಾ ಲೋಪವಾದ ಕಾರಣ ಸುವರ್ಣ ಸೌಧದಲ್ಲೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಂಸತ್ ಘಟನೆ ವರದಿಯಾದ ತಕ್ಷಣ ಸ್ಪೀಕರ್ ಯು.ಟಿ.ಖಾದರ್ ಮಾರ್ಷಲ್ಗಳ ಜೊತೆ ಸಭೆ ನಡೆಸಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು.
ಸುವರ್ಣ ಸೌಧದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಸುವರ್ಣಸೌಧದ ವಿಧಾನಸಭೆ ಪ್ರವೇಶ ದ್ವಾರದ ಮಹಡಿಯಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ಇಲ್ಲಿದ್ದ ಸಾರ್ವಜನಿಕರನ್ನು ಪೊಲೀಸರು ಹೊರಕ್ಕೆ ಕಳುಹಿಸಿದ್ದಾರೆ. ಮೊದಲ ಮಹಡಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಇದರ ಜೊತೆಗೆ ಸುವರ್ಣಸೌಧ ಪ್ರವೇಶಿಸುವ ಸಾರ್ವಜನಿಕರನ್ನೂ ಹೆಚ್ಚಿನ ತಪಾಸಣೆ ಮಾಡಿ ಒಳಗೆ ಬಿಡಲಾಗುತ್ತಿದೆ.
ಯಾವಾಗ ಏನಾಗಬಹುದು ಊಹೆ ಮಾಡಲು ಸಾಧ್ಯವಿಲ್ಲ, ನಮಗೆ ಎಚ್ಚರಿಕೆ ಗಂಟೆ: ಸ್ಪೀಕರ್ ಯು.ಟಿ.ಖಾದರ್
ಸಂಸತ್ನಲ್ಲಿ ಸ್ಮೋಕ್ ಬಾಂಬ್ ಪ್ರಕರಣ ನಮಗೆ ಎಚ್ಚರಿಕೆ ಗಂಟೆ ಎಂದು ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ಯಾವಾಗ ಏನಾಗಬಹುದು ಎಂದು ಊಹೆ ಮಾಡಲು ಸಾಧ್ಯವಿಲ್ಲ. ಜನಸಾಮಾನ್ಯರು ಸಹಕಾರ ಕೊಡಬೇಕು. ಜನರಿಗೆ ಪಾಸ್ ಕೊಡುವಾಗ ಅವರ ನೈಜತೆ ನೋಡಿಕೊಂಡು ಪಾಸ್ ಕೊಡಲು ಸೂಚಿಸಲಾಗಿದೆ ಎಂದರು.
ವಿದ್ಯಾರ್ಥಿಗಳಿಗೆ, ಸತ್ಪ್ರಜೆಗಳಿಗೆ ತೊಂದರೆ ಆಗದಂತೆ ಪಾಸ್ ವಿತರಣೆಗೆ ಸೂಚಿಸಲಾಗಿದೆ. ಹೆಚ್ಚು ತಪಾಸಣೆ ಮೂಲಕ ಸುವರ್ಣಸೌಧಕ್ಕೆ ಪ್ರವೇಶ ನೀಡಲಾಗಿದೆ. ಜನ ಸಾಮಾನ್ಯರು ಸಹಕರಿಸಬೇಕು ಎಂದು ಹೇಳಿದರು. ಸಂಸತ್ ಮೇಲೆ ದಾಳಿ ನಡೆದ ಬೆನ್ನಲ್ಲೇ ಸುವರ್ಣ ಸೌಧದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದ್ದು, ಪಾಸ್ ವಿತರಣೆ ವ್ಯವಸ್ಥೆಯಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications