ಫ್ರೆಂಚ್ ಸೇವಕನಾಗಿ ಬ್ರಿಟಿಷರ ವಿರುದ್ಧ ಟಿಪ್ಪು ಹೋರಾಟ: ಸ್ವಾಮಿ
ಬೆಳಗಾವಿ, ನವೆಂಬರ್ 06: ಟಿಪ್ಪು ಸುಲ್ತಾನ ತನ್ನ ಸಾಮ್ರಾಜ್ಯ ಉಳಿವಿಗಾಗಿ ಫ್ರೆಂಚರಿಂದ ಹಣ ಪಡೆದು ಬ್ರಿಟಿಷರ ವಿರುದ್ಧ ಹೋರಾಡಿದ್ದಾನೆ. ಅವನೊಬ್ಬ ಸ್ವಾತಂತ್ರ್ಯ ಹೋರಾಟಗಾರ ಎಂಬುಂದು ಸುಳ್ಳು ಎಂದು ರಾಜ್ಯಸಭಾ ಸದಸ್ಯ ಡಾ. ಸುಬ್ರಹ್ಮಣ್ಯಂ ಸ್ವಾಮಿ ಹೇಳಿದರು.
ನಗರದ ಕೆಎಲ್ಇ ಸಂಸ್ಥೆಯ ಜಿರಗೆ ಸಭಾ ಭವನದಲ್ಲಿ ಪ್ರಬುದ್ಧ ಭಾರತ ಸಂಘಟನೆ ಏರ್ಪಡಿಸಿದ್ದ ಬೌದ್ಧಿಕ ಭಯೋತ್ಪಾದನೆ ವಿಷಯ ಕುರಿತು ಮಾತನಾಡಿದ ಅವರು, ಇತಿಹಾಸದಲ್ಲಿ ಹಿಂದು ಧರ್ಮಕ್ಕಾಗಿ ಹೋರಾಡಿದ ಛತ್ರಪತಿ ಶುವಾಜಿ, ರಾಣಾ ಪ್ರತಾಪ್ಸಿಂಹ, ವಿಜಯನಗರ ಅರಸರ ಬಗ್ಗೆ ಪ್ರಸ್ತಾಪವಿಲ್ಲದೆ ದೇಶವನ್ನಾಳಿದ ಪರಕೀಯರ ಇತಿಹಾಸ ಸೃಷ್ಟಿಸಿದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ನ್ಯಾಶನಲ್ ಹೆರಾಲ್ಡ್ ಹಗರಣದಲ್ಲಿ ಅಮ್ಮ ಮಗನಾದ ಸೋನಿಯಾ ಹಾಗೂ ರಾಹುಲ್ ಗಾಂಧಿ ತಿಹಾರ ಜೈಲು ಸೇರುವುದು ಖಚಿತವಾಗಿದೆ ಎಂದ ಅವರು, 2 ಜಿ ಸೇಕ್ಟ್ರಂ ಹಗರಣದಲ್ಲಿ ಪಿ.ಚಿದಂಬರಂ ಹಾಗೂ ಅವರ ಪುತ್ರ ತಿಹಾರ ಜೈಲಿನಲ್ಲಿ ಇಟಾಲಿಯನ್ ಕಾಂಗ್ರೆಸ್ ಪಕ್ಷದ ಅಮ್ಮ ಮಗನ ಜೊತೆಗೆ ಕಂಬಿ ಎಣಿಕೆ ಮಾಡಲ್ಲಿದ್ದಾರೆ ಎಂದರು.

ಬಿಜೆಪಿ ಹಾಗೂ ಆರ್ ಎಸ್ ಎಸ್ ದೇಶದ ಜನರಲ್ಲಿ ನಾವೆಲ್ಲರೂ ಒಂದು ಎಂದು ಸಮಾನತೆ ಸಾರುತ್ತಿದೆ. ತ್ರಿವಳಿ ತಲಾಕ್ ವಿರುದ್ಧ ಮಾತನಾಡದ ಕಾಂಗ್ರೆಸ್ ಮುಸ್ಲಿಂ ಮಹಿಳೆಯರ ಮೇಲೆ ನಡೆಯುತ್ತಿದ್ದ ಅನ್ಯಾಯವನ್ನು ತಡೆಯಲು ಯಾವ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು
Mind blowing response, crowd overflowing for Dr @Swamy39 programme now at Belagavi organised by Prabuddha Bharat! @jagdishshetty @vhsindia pic.twitter.com/SkSTwcu2It
— nikunj shah 🇮🇳 (@niku1630) November 5, 2017
ಉತ್ತರಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡದ ಬಿಜೆಪಿ ಸೋಲು ಖಚಿತ ಎಂದು ಮಾತನಾಡುತ್ತಿದ್ದ ಜನರಿಗೆ ಮುಸ್ಲಿಂ ಬಹುಸಂಖ್ಯಾತ ಪ್ರದೇಶಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವುದು ಸಾಕ್ಷಿಯಾಗಿದೆ ಎಂದರು.
venue already packed at #Belgavi in anticipation of Dr @swamy39 speech .. via @jagdishshetty pic.twitter.com/lA0ujZ82wL
— ॐRameshॐ (@rameshnswamy) November 5, 2017
ಪ್ರಬುದ್ಧ ಭಾರತ ಸಂಘಟನೆಯ ಚೇತನ್ಯಾ ಕುಲಕರ್ಣಿ, ಸಚೀನ ಸಬನೀಸ್ ವೇದಿಕೆಯ ಮೇಲೆ ಇದ್ದರು.ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ, ಸಂಸದ ಸುರೇಶ ಅಂಗಡಿ, ಶಾಸಕರಾದ ಮಹಾಂತೇಶ ಕವಟಗಿಮಠ, ಸಂಜಯ ಪಾಟೀಲ, ಮಾಜಿ ಶಾಸಕ ಅಭಯ ಪಾಟೀಲ ಸೇರಿದಂತೆ ಮುಂತಾದವರು ಸಂದರ್ಭದಲ್ಲಿ ಉಪಸ್ಥಿತರಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications