Breaking: ಬೆಳಗಾವಿ; ITBP ಕೇಂದ್ರದಿಂದ ಎರಡು ಎಕೆ 47 ರೈಫಲ್ ನಾಪತ್ತೆ
ಬೆಳಗಾವಿ, ಆಗಸ್ಟ್ 19: ಬೆಳಗಾವಿ ಜಿಲ್ಲೆಯ ಹಾಲಭಾವಿ ಗ್ರಾಮದಲ್ಲಿರುವ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಕ್ಯಾಂಪಿನಿಂದ ಎರಡು ಎಕೆ - 47 ರೈಫಲ್ಗಳು ಕಾಣೆಯಾಗಿವೆ.
ಹಾಲಭಾವಿಯಲ್ಲಿರುವ ಐಟಿಬಿಪಿ ಶಿಬಿರದಲ್ಲಿ ನಕ್ಸಲ್ ನಿಗ್ರಹ ತರಬೇತಿ ನಡೆಯುತ್ತಿದೆ. ಎಕೆ-47 ರೈಫಲ್ಗಳು ಮಧುರೈನ 45ನೇ ಬೆಟಾಲಿಯನ್ ಪೊಲೀಸ್ ಪಡೆಯ ರಾಜೇಶ್ ಕುಮಾರ್ ಮತ್ತು ಸಂದೀಪ್ ಮೀನಾ ಅವರಿಗೆ ಸೇರಿದವು.
ಸಿಐಜೆಡಬ್ಲ್ಯು (counter-insurgency and jungle warfare) ಶಾಲೆಯಲ್ಲಿ ಆಗಸ್ಟ್ 17ರಂದು ಇರಿಸಲಾಗಿದ್ದ ಎರಡು ಎಕೆ-47 ರೈಫಲ್ಗಳು ಕಾಣೆಯಾಗಿವೆ. ಈ ಬಗ್ಗೆ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯಡಿ ಐಟಿಬಿಪಿ ಅಧಿಕಾರಿಗಳು ಕಾಕತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ರೈಫಲ್ ಕಳುವು ಪ್ರಕರಣ ಭಾರಿ ಆತಂಕಕ್ಕೆ ಕಾರಣವಾಗಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಪೊಲೀಸ್ ಆಯುಕ್ತ ಎಂ.ಬಿ. ಬೋರಲಿಂಗಯ್ಯ ಅವರು ಪ್ರಕರಣದ ತನಿಖೆಗಾಗಿ ಉಪ ಆಯುಕ್ತರಾದ (ಅಪರಾಧ) ಪಿ.ವಿ.ಸ್ನೇಹಾ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದಾರೆ. ನಗರ ಪೊಲೀಸರ ತಂಡ ಆಗಸ್ಟ್ 18ರಂದು ಸಿಐಜೆಡಬ್ಲ್ಯು ಶಾಲೆಗೆ ಭೇಟಿ ನೀಡಿತ್ತು.
ಐಟಿಬಿಪಿಯು ಜುಲೈ 29ರಿಂದ ಬೆಳಗಾವಿ ಜಿಲ್ಲೆಯ ಹಾಲಭಾವಿ ಗ್ರಾಮದಲ್ಲಿರುವ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಕ್ಯಾಂಪಿನಲ್ಲಿ ನಕ್ಸಲ್ ನಿಗ್ರಹ ತರಬೇತಿ ಶಿಬಿರ ನಡೆಸುತ್ತಿದೆ.
ಕಾಕತಿ ಪೊಲೀಸ್ ಠಾಣೆಯಲ್ಲಿ ದೂರಿನ ಪ್ರಕಾರ, ಮಧುರೈನ 45ನೇ ಬೆಟಾಲಿಯನ್ ಪೊಲೀಸ್ ಪಡೆಯ ರಾಜೇಶ್ ಕುಮಾರ್ ಮತ್ತು ಸಂದೀಪ್ ಮೀನಾ ಅವರು ಹೊತ್ತೊಯ್ದ ಎರಡು ಎಕೆ 47 ರೈಫಲ್ಗಳನ್ನು ಆಗಸ್ಟ್ 17 ರಂದು 'ವಾಡಿಕೆಯ ಪ್ರೋಟೋಕಾಲ್ ಮತ್ತು ಮುನ್ನೆಚ್ಚರಿಕೆ' ಪ್ರಕಾರ ಶಾಲೆಯಲ್ಲಿ ಇರಿಸಲಾಗಿತ್ತು, ಆದರೆ ಆಗಸ್ಟ್ 17 ರಂದು ರೈಫಲ್ಗಳು ಕಾಣೆಯಾಗಿದ್ದಾವೆ" ಎಂದು ತಿಳಿಸಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications