ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಷ ಬೆರೆತ ಕಾಳು ತಿಂದು ಯೋಧನ ಇಬ್ಬರು ಮಕ್ಕಳ ಸಾವು

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಚಿಕ್ಕೋಡಿ, ಅಕ್ಟೋಬರ್ 30: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧನ ಮಕ್ಕಳಿಬ್ಬರು ವಿಷಾಹಾರ ಸೇವನೆಯಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.

ಮೈಸೂರಿನಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥರಾದ ಕೇರಳ ಶಾಲಾ ಮಕ್ಕಳುಮೈಸೂರಿನಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥರಾದ ಕೇರಳ ಶಾಲಾ ಮಕ್ಕಳು

ಹನುಮಂತ ಕುಂಬಾರ ಎಂಬ ಯೋಧನ ಇಬ್ಬರು ಮಕ್ಕಳಾದ ಐಶ್ವರ್ಯ (4) ಹಾಗೂ ಜಯಶ್ರೀ (6) ಸಾವನ್ನಪ್ಪಿದ್ದಾರೆ. ಪತ್ನಿ ಕವಿತಾ ತೀವ್ರ ಅಸ್ವಸ್ಥಗೊಂಡಿದ್ದಾರೆ. ಗುವಾಹಟಿಯಲ್ಲಿ ಹನುಮಂತ ಕುಂಬಾರ ಯೋಧರಾಗಿ ಸೇವೆ ಸಲ್ಲಿಸುತ್ತಿದ್ದು, ಊರಿನಲ್ಲಿ ಅವರ ಪತ್ನಿ ಕವಿತಾ ಹಾಗೂ ಇಬ್ಬರು ಮಕ್ಕಳು ನೆಲೆಸಿದ್ದಾರೆ.

Two Daughters Of Soldier Died By Food Poison In Belagavi

ಹನುಮಂತನ ಸಹೋದರ ಲಗಮಣ್ಣ ವ್ಯಾಪಾರ ಮಾಡಲು ಮನೆಯಲ್ಲಿ ಕಾಳನ್ನು ತಂದಿಟ್ಟಿದ್ದು, ಅವು ಕೆಡದಂತೆ ಇಡಲು ಅದರ ಸುತ್ತ ಕ್ರಿಮಿನಾಶಕ ಸಿಂಪಡಿಸಿದ್ದರು ಎನ್ನಲಾಗಿದೆ. ಅದರ ಅಂಶ ಈ ಮಕ್ಕಳ ಹಾಗೂ ಕವಿತಾ ದೇಹವನ್ನು ಸೇರಿರುವ ಶಂಕೆ ವ್ಯಕ್ತಗೊಂಡಿದೆ. ರಾತ್ರಿ ಊಟ ಮಾಡಿ ಈ ಮೂರ್ವರೂ ಮಲಗಿದ್ದು, ಮಕ್ಕಳು ಬೆಳಗಾಗುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಕವಿತಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಪ್ಪು ಬಣ್ಣದ ಮೈ ಹೀಗಳೆದಿದ್ದಕ್ಕೆ ಆಹಾರದಲ್ಲಿ ವಿಷ ಬೆರೆಸಿದ ಮಹಿಳೆಕಪ್ಪು ಬಣ್ಣದ ಮೈ ಹೀಗಳೆದಿದ್ದಕ್ಕೆ ಆಹಾರದಲ್ಲಿ ವಿಷ ಬೆರೆಸಿದ ಮಹಿಳೆ

ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
The incident took place in Chinchali town of Rayabaga taluk in Belagavi district where two children of a soldier died of food poisoning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X