ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ: ಸ್ವಗ್ರಾಮಕ್ಕೆ ಪಾರ್ಥೀವ ಶರೀರ ಏರ್ಲಿಫ್ಟ್
ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ (61) ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಮೇಶ್ ಕತ್ತಿ ಪಾರ್ಥೀವ ಶರೀರ ಏರ್ಲಿಫ್ಟ್ ಮೂಲಕ ಬೆಳಗಾವಿಗೆ ಒಯ್ಯಲು ಸಿದ್ಧತೆ ನಡೆಸಲಾಗುತ್ತಿದೆ.
ಸದ್ಯ ಕತ್ತಿ ಅವರ ಪಾರ್ಥೀವ ಶರೀರ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿದ್ದು, ಅಲ್ಲಿಂದ ಎಚ್ಎಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಏರ್ಲಿಫ್ಟ್ ಮೂಲಕ ಕರೆದೊಯ್ಯಲಾಗುತ್ತಿದೆ. ಉಮೇಶ್ ಕತ್ತಿಯ ಅಂತ್ಯಕ್ರಿಯೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ.
Recommended Video

ಮಧ್ಯಾಹ್ನ 3.30ವರೆಗೂ ಹುಕ್ಕೇರಿಯ ಬೆಲ್ಲದ ಬಾಗೇವಾಡಿ ಹೊರಹೊಲದಲ್ಲಿ ವಿಶ್ವರಾಜ್ ಸಕ್ಕರಾಜ್ ಸಕ್ಕರೆ ಕಾರ್ಖಾನೆಯಲ್ಲಿ ಅಂತಿಮ ದರ್ಶನ ಪಡೆದುಕೊಳ್ಳಲು ತಯಾರಿ ನಡೆಸಲಾಗುತ್ತಿದೆ. ಸಾರ್ವಜನಿಕರು, ಆತ್ಮೀಯ ವಲಯ, ಅಭಿಮಾನಿಗಳು, ಹಿತೈಶಿಗಳು ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗುತ್ತಿದೆ. ಎಂ್ಎಸ್ ರಾಮಯ್ಯ ಆಸ್ಪತ್ರೆಗೆ ಬಂದ ಸಹೋದರ ರಮೇಶ್ ಕತ್ತಿ ಅಪ್ಪಿಕೊಂಡು ಕಣ್ಣೀರು ಹಾಕಿದ್ದಾರೆ.

ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ 10.30ರ ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಚಿವ ಉಮೇಶ್ ಕತ್ತಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ ಬೆಳಗಾವಿಯ ಅವರ ಸ್ವಗ್ರಾಮಕ್ಕೆ ತೆಗೆದುಕೊಂಡು ಹೋಗಲು ತಯಾರಿ ನಡೆಸಲಾಗುತ್ತದೆ. ಸಂಜೆ 7 ರಿಂದ 8 ರ ನಡುವೆ ಅವರ ಅಂತ್ಯಕ್ರಿಯಯನ್ನು ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications