ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಸಂಕಷ್ಟದ ನಡುವೆ ಸಿಎಂ ಆಸೆ ವ್ಯಕ್ತಪಡಿಸಿದ ಉಮೇಶ್ ಕತ್ತಿ

|
Google Oneindia Kannada News

ಬೆಳಗಾವಿ, ಜೂನ್ 22: ಶಾಸಕ ಉಮೇಶ್ ಕತ್ತಿ ಈಗಾಗಲೇ ಅನೇಕ ಬಾರಿ ಮುಖ್ಯಮಂತ್ರಿಯಾಗುವ ಆಸೆಯನ್ನು ಹೇಳಿಕೊಂಡಿದ್ದಾರೆ. ಆದರೆ, ಇದೀಗ ಕೊರೊನಾ ವೈರಸ್‌ ಸಮಯದಲ್ಲಿ ಮತ್ತೆ ಈ ಬಗ್ಗೆ ಮಾತನಾಡಿದ್ದಾರೆ.

Recommended Video

Galwan Faceoff : ಭಾರತ ಸೇನೆಗೆ ಬಂತು ಸೂಪರ್ ಪವರ್ | Full power For IAF & Army | Oneindia Kannadda

ಕೊರೊನಾ ವಾರಿಯರ್ಸ್‌ಗಳಿಗೆ ಕಿಟ್ ವಿತರಣೆ ಮಾಡುವ ಸಮಾರಂಭ ಇಂದು ಹುಕ್ಕೇರಿಯಲ್ಲಿ ನಡೆಯಿತು. ವಿಶ್ವರಾಜ ಕತ್ತಿ ಟ್ರಸ್ಟ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಉಮೇಶ್ ಕತ್ತಿ ಭಾಗಿಯಾಗಿದ್ದರು.

ನಿರಾಣಿಗೆ ಮೈಶುಗರ್ ಮಾರಾಟಕ್ಕೆ ಡಿಕೆಶಿ, ಸಿದ್ದರಾಮಯ್ಯ ತೀವ್ರ ವಿರೋಧ ಯಾಕೆ?ನಿರಾಣಿಗೆ ಮೈಶುಗರ್ ಮಾರಾಟಕ್ಕೆ ಡಿಕೆಶಿ, ಸಿದ್ದರಾಮಯ್ಯ ತೀವ್ರ ವಿರೋಧ ಯಾಕೆ?

ಈ ವೇಳೆ ಮಾತನಾಡಿರುವ ಅವರು ಮುಖ್ಯಮಂತ್ರಿಯಾಗುವ ಆಸೆಯನ್ನು ಹೇಳಿಕೊಂಡಿದ್ದಾರೆ. ''ನಾನು ಎಂಟು ಬಾರಿ ಶಾಸಕನಾಗಿ ಆಯ್ಕೆ ಆಗಿದ್ದೇನೆ. ಹಾಗೆಯೇ ನಾನು ರಾಜ್ಯದ ಚುಕ್ಕಾಣಿ ಹಿಡಿಯಲು ಸಬಲನಿದ್ದೇನೆ.'' ಎಂದು ಹೇಳಿದ್ದಾರೆ.

Umesh Katti Expressed His Desire To Become Chief Minister

''ಉತ್ತರ ಕರ್ನಾಟಕದ ಸುಪುತ್ರ ರಾಜ್ಯದ ಮುಖ್ಯಮಂತ್ರಿಯಾಗಿ ಬರಲಿ ಎನ್ನುವ ಹಾರೈಕೆ ನಿಮ್ಮದಾಗಿರಲಿ'' ಎಂದು ಜನರಲ್ಲಿ ಮನವಿ ಮಾಡಿದ್ದಾರೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡಿ, ತಾವು ಮುಖ್ಯಮಂತ್ರಿಯಾಗಲು ಹೊರಟಿದ್ದ ಉಮೇಶ್ ಕತ್ತಿ ಪದೇ ಪದೇ ಅದೇ ಮಾತನ್ನು ಆಡುತ್ತಿದ್ದಾರೆ.

English summary
MLA Umesh Katti expressed his desire to become chief minister in Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X