ಐದು ವರ್ಷದ ಮಗುವಿಗೆ ರೈಲಿನಲ್ಲಿ ಔಷಧಿ ತರಿಸಿದ ಕೇಂದ್ರ ಸಚಿವ
ಬೆಳಗಾವಿ, ಏಪ್ರಿಲ್ 21: ಬೆಳಗಾವಿಯ ಐದು ವರ್ಷದ ಮಗುವಿಗೆ ಅಗತ್ಯವಿದ್ದ ಔಷಧಗಳನ್ನು ರೈಲಿನಲ್ಲಿ ತರಿಸುವ ಮೂಲಕ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮಗುವಿನ ಜೀವ ಉಳಿಸಿದ್ದಾರೆ.
Recommended Video
ಲಾಕ್ ಡೌನ್ ಪರಿಣಾಮ ಔಷಧಿಯನ್ನು ತರಲಾಗದೆ ಮಗುವಿನ ಕುಟುಂಬದವರು ಸಂಕಷ್ಟಕ್ಕೆ ಸಿಲುಕಿದ್ದರು. ಏಪ್ರಿಲ್ 11 ರಂದು ಬೆಳಗಾವಿಯಲ್ಲಿರುವ ಸುರೇಶ್ ಅಂಗಡಿ ಅವರ ಕಚೇರಿಗೆ ಕರೆ ಮಾಡಿ, ಬೆಳಗಾವಿಯಲ್ಲಿನ 5 ವರ್ಷದ ಮಗುವಿಗೆ ಪುಣೆಯ ಡಾಕ್ಟರ್ ಚಿಕಿತ್ಸೆ ನೀಡುತ್ತಿದ್ದಾರೆ. ಮಗುವಿಗೆ ಔಷಧಗಳ ಅಗತ್ಯವಿದ್ದು, ಅದನ್ನು ಪುಣೆಯಿಂದ ತರಿಸಬೇಕಿದೆ ಎಂದಿದ್ದರು.
ಬೆಳಗಾವಿಯ ಬಿಜೆಪಿ ಸಂಸದ ಮತ್ತು ಕೇಂದ್ರ ಸಚಿವ ಸುರೇಶ್ ಅಂಗಡಿಯವರು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿ, ಪುಣೆಯಿಂದ ಬೆಳಗಾವಿಗೆ ಔಷಧ ತರಿಸಿದ್ದಾರೆ. ಬೆಳಗಾವಿಗೆ ಬಂದ ಔಷಧಿಯನ್ನು ಇಲಾಖೆಯ ಸಿಬ್ಬಂದಿಯೇ ಮಗುವಿನ ಮನೆಗೆ ತಲುಪಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ಜೊತೆ ಮಾತನಾಡಿ ಪುಣೆಯಿಂದ ಔಷಧವನ್ನು ತರಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದರು. ಪರಿಸ್ಥಿತಿ ಗಂಭೀರತೆ ಅರಿತ ಸಚಿವರು ಪುಣೆಯಲ್ಲಿರುವ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಗುವಿನ ಔಷಧಿಯನ್ನು ಪುಣೆ ರೈಲು ನಿಲ್ದಾಣಕ್ಕೆ ತರಲಾಯಿತು. ಬಳಿಕ ಬೆಳಗಾವಿ ಮಾರ್ಗವಾಗಿ ಸಂಚಾರ ನಡೆಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಅದನ್ನು ಬೆಳಗಾವಿಗೆ ಕಳುಹಿಸಿಕೊಡಲಾಯಿತು. ಮರುದಿನ ಬೆಳಿಗ್ಗೆ ಔಷಧಿಗಳು ಬೆಳಗಾವಿಯಲ್ಲಿರುವ ನಾರೋಗ್ಯ ಪೀಡಿತ ಮಗುವಿನ ಮನೆಗೆ ತಲುಪಿತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications