ಕರ್ನಾಟಕದ ಈ ಬಿಜೆಪಿ ಮಿನಿಸ್ಟರ್ ಬಾಯಿ ಬಿಟ್ಟರೆ ವಿವಾದ ಫಿಕ್ಸ್!
ಬೆಳಗಾವಿ, ಡಿಸೆಂಬರ್.02: ಕರ್ನಾಟಕದಲ್ಲಿ ಉಪ ಸಮರಕ್ಕೆ ಕ್ಷಣಗಣನೆ ಶುರುವಾಗಿದೆ. ಇನ್ನೊಂದು ವಾರದಲ್ಲಿ ಪಕ್ಕಾ ರಿಸೆಲ್ಟ್ ಹೊರ ಬೀಳಲಿದೆ. ಮತದಾರನ ಮನಸು ಗೆಲ್ಲಲು ಅಭ್ಯರ್ಥಿಗಳು ಪಡಬಾರದ ಪಾಡು ಪಡುತ್ತಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹಿರಿಯ ನಾಯಕರೆಲ್ಲ ಶ್ರಮಿಸುತ್ತಿದ್ದಾರೆ.
ಬಿಜೆಪಿಯಲ್ಲಿರುವ ಈ ಸಚಿವರು ಬಾಯಿ ಬಿಟ್ಟರೆ ಒಂದಿಲ್ಲೊಂದು ವಿವಾದಗಳು ಹುಟ್ಟುಕೊಳ್ಳುವುದು ಖಾಯಂ. ಇವತ್ತು ಬೆಳಗಾವಿಯಲ್ಲೂ ಮತ್ತದೇ ಆಯಿತು. ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲು ಅಖಾಡಕ್ಕಿಳಿದ ಹಿರಿಯ ನಾಯಕ ಈಗ ಪಕ್ಷಕ್ಕೆ ಮುಜುಗರ ತರುವಂತಾ ಹೇಳಿಕೆಯನ್ನು ನೀಡಿದ್ದಾರೆ.
ಹೌದು, ಹೀಗೆ ಪಕ್ಷಕ್ಕೆ ಮುಜುಗರ ಹುಟ್ಟಿಸುವಂತಾ ಹೇಳಿಕೆ ನೀಡಿದ್ದು ಮತ್ಯಾರೂ ಅಲ್ಲ. ಒನ್ ಆಂಡ್ ಒನ್ಲಿ ಸಚಿವ ಕೆ.ಎಸ್.ಈಶ್ವರಪ್ಪ. ಒಂದು ಕಡೆ ಬಿಜೆಪಿ ಹಿಂದುತ್ವದ ಅಜೆಂಡಾ ಹೊಂದಿರುವ ಪಕ್ಷವೆಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಇದಕ್ಕೆ ಪುಷ್ಟ ನೀಡುವಂತಾ ಹೇಳಿಕೆಯನ್ನು ಈಶ್ವರಪ್ಪನವರೇ ನೀಡಿದ್ದಾರೆ.

ಹಿಂದುತ್ವ, ರಾಮರಾಜ್ಯ ಮಹಾತ್ಮರ ಕನಸು!
ಹಿಂದುತ್ವ ಹಾಗೂ ರಾಮರಾಜ್ಯದ ಕನಸು ಬಿಜೆಪಿಯದ್ದಲ್ಲ. ಅದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಕನಸು ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಹಾತ್ಮ ಗಾಂಧೀಜಿ ರಾಮರಾಜ್ಯದ ಕನಸು ಕಂಡಿದ್ದರು. ರಾಮರಾಜ್ಯವಷ್ಟೇ ಅಲ್ಲದೇ ಹಿಂದುತ್ವ ಕೂಡಾ ಮಹಾತ್ಮರ ಕನಸಾಗಿದ್ದು, ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯನಿರ್ವಹಿಸುತ್ತಿದೆ ಎಂ ಈಶ್ವರಪ್ಪ ವಿವಾದದ ಕಿಡಿ ಹೊತ್ತಿಸಿದ್ದಾರೆ.
ಇನ್ನು, ಪ್ರಚಾರದ ವೇಳೆ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧವೂ ಈಶ್ವರಪ್ಪ ಕಿಡಿ ಕಾರಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ತಾವೊಬ್ಬ ಹೆಣ್ಣು ಎಂಬುದನ್ನು ಮರೆತು ಮಾತನಾಡುತ್ತಿದ್ದಾರೆ. ಅವರ ಹೇಳಿಕೆಯಿಂದ ತಮಗೆ ಸಾಕಷ್ಟು ನೋವಾಗಿದೆ ಎಂದು ಗುಡುಗಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications