ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಎಬ್ಬಿಸಿದ ಆರ್.ಬಿ.ತಿಮ್ಮಾಪೂರ
ಬೆಳಗಾವಿ, ಜೂನ್ 30: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿನ ಕ್ಷೀಣ ಧ್ವನಿ ಮತ್ತೆ ಮತ್ತೆ ಚಿಗುರೊಡೆದಿದೆ. ಇಂದು ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಅವರು ಪ್ರತ್ಯೇಕ ರಾಜ್ಯದ ವಿಷಯವನ್ನು ತೆಗೆದಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಭೆಯಲ್ಲಿ ಮಾತನಾಡಿದ ಆರ್.ಬಿ.ತಿಮ್ಮಾಪುರ ಅವರು, ಎಲ್ಲ ಪಕ್ಷಗಳು ಉತ್ತರ ಕರ್ನಾಟಕ ಅಭಿವೃದ್ಧಿ ಮಾಡದಿದ್ದರೆ ಪ್ರತ್ಯೇಕ ಧ್ವನಿ ಜನರದ್ದು ಆಗುತ್ತೆ. ಜನರ ಧ್ವನಿ ಪ್ರತ್ಯೇಕ ರಾಜ್ಯದ್ದಾದರೆ ನನ್ನ ಧ್ವನಿಯು ಅದೇ ಇರುತ್ತೆ ಎಂದು ತಿಮ್ಮಾಪುರ ಗುಡುಗಿದ್ದಾರೆ.
ಉತ್ತರ ಕರ್ನಾಟಕದ ಅಭಿವೃದ್ಧಿ ನಿರ್ಲಕ್ಷಿಸಿರುವ ಪಕ್ಷಗಳಿಗೆ ಬುದ್ಧಿ ಕಲಿಸಲು ಪ್ರತ್ಯೇಕ ರಾಜ್ಯ ಆಗಬೇಕು ಎಂಬ ಮನಸ್ಸಾಗುತ್ತದೆ ಆದರೆ ಅಖಂಡ ಕರ್ನಾಟಕವೇ ಇರಲಿ ಎಂಬ ಬಯಕೆ ನನ್ನದು ಎಂದು ಅವರು ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರ ಬೀಳುತ್ತೆ ಎಂದು ಮಾಧ್ಯಮವರು ಹೇಳುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತೆ. ಮಾಧ್ಯಮದವರು ಸಮ್ಮಿಶ್ರ ಸರ್ಕಾರ ಈಗ ಹೋಗುತ್ತೆ... ಆಗ ಹೋಗುತ್ತೆ ಅಂತಾ ನರಿ ಬಂತೂ ಹುಲಿ ಬಂತೂ ಅಂತಾ ಹೇಳುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಧರ್ಮಸ್ಥಳದಲ್ಲಿ ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ಆಂತರಿಕವಾಗಿ ಅನೇಕ ಚರ್ಚೆಗಳು ಆಗುತ್ತವೆ. ಅವು ಸರ್ಕಾರದ, ಪಕ್ಷದ ನಿರ್ಧಾರ ಆಗುವುದಿಲ್ಲ. ಮಾಧ್ಯಮದವರಿಗೆ ಸಮ್ಮಿಶ್ರ ಸರ್ಕಾರ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರು ಆರೋಪ ಮಾಡಿದರು.
ನನಗೂ ಮಂತ್ರಿ ಆಗುವ ಆಸೆಯಿದೆ ಆದರೆ ಸಚಿವ ಸ್ಥಾನಕ್ಕೆ ಒತ್ತಾಯ ಮಾಡುವುದಿಲ್ಲ. ಒಳ್ಳೆಯ ಕೆಲಸ ಮಾಡುತ್ತೇನೆ ಸಚಿವ ಮಾಡುವಂತೆ ಹೇಳಿದ್ದೇನೆ. ನಾನು ಯಾವತ್ತು ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿಯಲ್ಲಿ ಇದ್ದೇನೆ ಹೊರತು ಅತೃಪ್ತರ ಪಟ್ಟಿಯಲ್ಲಿ ಅಲ್ಲಾ ಎಂದು ಬೆಳಗಾವಿಯಲ್ಲಿ ಆರ.ಬಿ.ತಿಮ್ಮಾಪುರ ಹೇಳಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications