ಬೆಳಗಾವಿಯಲ್ಲಿ ವಾಟಾಳ್ ನಾಗರಾಜ್ ಬಂಧನ
ಬೆಳಗಾವಿ, ಆ.1 : ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡಾಟ ಖಂಡಿಸಿ ಬೆಳಗಾವಿಯಿಂದ ಯಳ್ಳೂರಿಗೆ ಹೊರಟಿದ್ದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮತ್ತು ಅವರ ಬೆಂಬಲಿಗರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ವಾಟಾಳ್ ನಾಗರಾಜ್ ಅವರನ್ನು ಬಂಧಿಸಲಾಗಿದೆ.
ಗುರುವಾರ ನಡೆದ ಬೆಂಗಳೂರು ಬಂದ್ ವೇಳೆ ಶುಕ್ರವಾರ ಬೆಳಗಾವಿಗೆ ತೆರಳಿ ಬೆಳಗಾವಿಯಿಂದ 6 ಕಿ.ಮೀ. ದೂರದಲ್ಲಿರುವ ಯಳ್ಳೂರಿನವರೆಗೆ 'ಯಳ್ಳೂರು ಚಲೋ' ಜಾಥಾ ನಡೆಸಲಾಗುವುದು ಎಂದು ವಾಟಾಳ್ ನಾಗರಾಜ್ ಹೇಳಿದ್ದರು. ಅದರಂತೆ ಇಂದು ಬೆಳಗ್ಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. [ಶುಕ್ರವಾರ ಯಳ್ಳೂರು ಚಲೋ]

ಎಂಇಎಸ್ ಮರಾಠಿ ನಾಮಫಲಕ ಹಾಕಿದ ನಂತರ ನಡೆದ ಗಲಭೆಯಿಂದಾಗಿ ಯಳ್ಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವಾಟಾಳ್ ನಾಗರಾಜ್ ಮತ್ತು ವಿವಿಧ ಕನ್ನಡ ಪರ ಸಂಘಟನೆಗಳ ಸದಸ್ಯರು ಇದನ್ನು ಉಲ್ಲಂಘಿಸಿ ಯಳ್ಳೂರಿಗೆ ಹೋಗಲು ಹೊರಟಿದ್ದರಿಂದ ಅವರನ್ನು ಬಂಧಿಸಲಾಗಿದೆ. [ಬೆಳಗಾವಿಯಲ್ಲಿ ಏನಾಗುತ್ತಿದೆ?]
ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಮರಾಠಿ ನಾಮಫಲಕ ಹಾಕಿದ ನಂತರ ಕನ್ನಡ ಮತ್ತು ಎಂಇಎಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆಯುತ್ತಿದೆ. ಗಲಭೆ ಹಿನ್ನಲೆಯಲ್ಲಿ ಜಿಲ್ಲೆಯ ನಿಪ್ಪಾಣಿ, ಖಾನಾಪುರ ಮುಂತಾದ ಕಡೆಗಳಲ್ಲಿ ನಿಷೇಧಾಜ್ಞೆ ಹಾಕಲಾಗಿತ್ತು. ಸದ್ಯ ಅದನ್ನು ಸಡಿಲಿಸಲಾಗಿದೆ. ಆದರೆ, ಗಡಿಭಾಗದ ಯಳ್ಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿದಿದೆ. [ಎಂಇಎಸ್ ನಿಷೇಧಕ್ಕೆ ನಡೆದಿದೆ ಚಿಂತನೆ]
ಇಂದು ಕನ್ನಡ ಪರ ಸಂಘಟನೆಗಳು ಯಳ್ಳೂರು ಚಲೋ ನಡೆಸಿದರೆ ಪುನಃ ಘರ್ಷಣೆ ಸಂಭವಿಸಬಹುದು ಎಂಬ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಾಟಾಳ್ ನಾಗರಾಜ್ ಸೇರಿದಂತೆ ಹಲವು ಮುಂಖಡರನ್ನು ವಿಮಾನ ನಿಲ್ದಾಣದಲ್ಲಿಯೇ ಪೊಲೀಸರು ಬಂಧಿಸಿದ್ದಾರೆ.
ಹೋರಾಟ ನಿಲ್ಲಿಸೋಲ್ಲ : ಬೆಳಗಾವಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ "ಪೊಲೀಸರು ನಮ್ಮನ್ನು ಬಂಧಿಸಿದರೆ ನಂತರ ಬಿಡುಗಡೆ ಮಾಡುತ್ತಾರೆ. ನಾವು ನಮ್ಮ ಹೋರಾಟವನ್ನು ನಿಲ್ಲಿಸೋದಿಲ್ಲ. ಯಳ್ಳೂರಿಗೆ ತೆರಳುತ್ತೇವೆ" ಎಂದು ಅವರು ಹೇಳಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications