ಸುವರ್ಣಸೌಧವನ್ನು ಮರಾಠ ಶ್ರೀಮಂತರಿಗೆ ಮಾರುತ್ತಾರೆ: ವಾಟಾಳ್
ಬೆಳಗಾವಿ, ನವೆಂಬರ್ 27: ಸುವರ್ಣಸೌಧವನ್ನು ಮರಾಠ ಶ್ರೀಮಂತರಿಗೆ ಒಂದಲ್ಲ ಒಂದು ದಿನಾ ಮಾರುತ್ತಾರೆ ಎಂದು ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ನಾಕಾ ಬಳಿ ವಾಟಾಳ್ ನಾಗರಾಜ್ ಹೇಳಿದರು.
ಸುವರ್ಣಸೌಧದ ಸುತ್ತ ನಿಷೇಧಾಜ್ಞೆ ಜಾರಿ ಮಾಡಲು ನಿಮಗೇನು ನೈತಿಕತೆ ಇದೆ, ಕರಾಳ ದಿನಾಚರಣೆ ಮಾಡುವ ಎಂಇಎಸ್ ನವರನ್ನು ಗಡಿಪಾರು ಮಾಡಲಿಲ್ಲ. ಬೆಳಗಾವಿಯ ಎಲ್ಲಾ ರಾಜಕಾರಣಿಗಳು ಮರಾಠಾ ಎಜೆಂಟರು ಎಂದು ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು.
ಶಿವಸೇನೆಯವರು ಯಾವಾಗ ಬೇಕಾದರೂ ಬೆಳಗಾವಿಗೆ ಬರಬಹುದು, ಕನ್ನಡ ಮುಖಂಡರು ಬಂದರೆ ಹಿರೇಬಾಗೇವಾಡಿ ಬಳಿ ತಡೆಯುತ್ತೀರಿ. ನಿಮ್ಮ ಸರ್ಕಾರ ಮರಾಠಿ ಏಜೆಂಟ್ ಸರ್ಕಾರನಾ, ಶಿವಸೇನೆ ಏಜೆಂಟ್ ಸರ್ಕಾರನಾ? ಎಂದು ಪ್ರಶ್ನಿಸಿದರು.

ನಮ್ಮ ರಾಜ್ಯವನ್ನು ಸಿಎಂ ಯಡಿಯೂರಪ್ಪ ಹರಾಜಿಗೆ ಇಟ್ಟಿದ್ದಾರೆ. ಬೆಳಗಾವಿ ಬೇಯುತ್ತಿದೆ, ಕನ್ನಡಿಗರ ಮೇಲೆ ದಾಳಿ ನಡೆಯುತ್ತಿದೆ. ಕನ್ನಡಿಗರು ಕಣ್ಣೀರಿನಲ್ಲಿದ್ದು, ರಾಯಚೂರು, ಬೀದರ್, ಕಲಬುರಗಿ ಕನ್ನಡಿಗರ ಕೈಯಲ್ಲಿಲ್ಲ ಎಂದು ಕಿಡಿಕಾರಿದರು.
ಮರಾಠ ಪ್ರಾಧಿಕಾರ ಮಾಡಲು ನಿಮಗೇನು ಅಧಿಕಾರ ಇದೆ, ಒಂದು ನಿಮಿಷ ನೀವು ಅಧಿಕಾರದಲ್ಲಿ ಇರಲು ಲಾಯಕ್ಕಿಲ್ಲ. ಮರಾಠ ಸಮುದಾಯವೆಂದರೆ ಅವರ ಭಾಷೆ ಮರಾಠಿನೇ, ಅವರಿಗೆ ಪ್ರಾಧಿಕಾರ ಮಾಡುವ ಉದ್ದೇಶ ಏನಿತ್ತು ಎಂದು ವಾಟಾಳ್ ನಾಗರಾಜ್ ಏರು ಧ್ವನಿಯಲ್ಲೇ ಪ್ರಶ್ನಿಸಿದರು.
ನಾಳೆ ತಮಿಳು, ತೆಲಗುದವರು ಪ್ರಾಧಿಕಾರ ಕೇಳುತ್ತಾರೆ, ಮರಾಠ ಪ್ರಾಧಿಕಾರ ಮಾಡಿರುವುದು ಅಕ್ಷಮ್ಯ ಅಪರಾಧ. ಯಡಿಯೂರಪ್ಪ ನೀವೆ ಸಿಎಂ ಆಗಿ ಉಳಿದರೆ ಬೆಳಗಾವಿಯನ್ನು ಯಾವುದೋ ರೂಪದಲ್ಲಿ ಮಹಾರಾಷ್ಟ್ರಕ್ಕೆ ಕೊಡುತ್ತೀರಿ ಹರಿಹಾಯ್ದರು.

ಮರಾಠ ಅಭಿವೃದ್ಧಿ ನಿಗಮ ಹಿಂಪಡೆಯುವಂತೆ ಆಗ್ರಹಿಸಿ ಸುವರ್ಣ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ಹೊರಟ ವಾಟಾಳ್ ನಾಗರಾಜ್, ಸಾರಾ ಗೋವಿಂದ್ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ಕಾರ್ಯಕರ್ತರ ಸಮೇತ ವಶಕ್ಕೆ ಪಡೆಯಲಾಯಿತು. ರಸ್ತೆಯಲ್ಲಿ ಮಲಗಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ನಂಗತರ ಪ್ರತಿಭಟನಾ ನಿರತರನ್ನು ಹೊತ್ತೊಯ್ದು ವಾಹನದಲ್ಲಿ ಕೂರಿಸಿ, ಹೋರಾಟಗಾರರನ್ನು ಧಾರವಾಡದತ್ತ ಪೊಲೀಸರು ಕರೆದೊಯ್ದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications