ಹಣಕ್ಕೆ ಮಾರಿಕೊಂಡ ಅನರ್ಹರಿಗೆ ಪ್ರವೇಶವಿಲ್ಲ: ಗ್ರಾಮಸ್ಥರ ನಿರ್ಧಾರ
ಅಥಣಿ, ನವೆಂಬರ್ 29: ಅನರ್ಹ ಶಾಸಕರಿಗೆ ಉಪಚುನಾವಣೆ ಮುಳ್ಳಿನ ಹಾದಿಯಾಗಿ ಪರಿಣಮಿಸುತ್ತಿದೆ. ತಾವು ರಾಜೀನಾಮೆ ನೀಡಿದ್ದಕ್ಕೆ ಏನೇನೋ ಸಬೂಬು ಕೊಟ್ಟಿದ್ದರೂ, ಜನರು ಅದನ್ನು ಒಪ್ಪಿದಂತೆ ಕಾಣುತ್ತಿಲ್ಲ.
ಬೆಳಗಾವಿಯ ಅಥಣಿ ಕ್ಷೇತ್ರದಲ್ಲಿ ತೆಲಸಂಗ ಗ್ರಾಮದಲ್ಲಿ ಅನರ್ಹ ಮಹೇಶ್ ಕುಮಟಳ್ಳಿಗೆ ಭಾರಿ ವಿರೋಧ ವ್ಯಕ್ತವಾಗಿದ್ದು, ಫ್ಲೆಕ್ಸ್ ಬ್ಯಾನರ್ ಹಾಕುವ ಮೂಲಕ ಅನರ್ಹ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.
ಗ್ರಾಮದಲ್ಲಿ ದೊಡ್ಡ ಫ್ಲೆಕ್ಸ್ ಕಟ್ಟಿರುವ ಗ್ರಾಮಸ್ಥರು 'ಅಥಣಿ ಶಿವಯೋಗಿಗಳ ಪುಣ್ಯ ಸ್ಥಳ, ಹಣಕ್ಕಾಗಿ ಶಾಸಕ ಸ್ಥಾನ ಮಾರಿಕೊಂಡ ಅನರ್ಹರಿಗೆ ನಮ್ಮ ಗ್ರಾಮಕ್ಕೆ ಪ್ರವೇಶವಿಲ್ಲ' ಎಂದು ದೊಡ್ಡ ಅಕ್ಷರದಲ್ಲಿ ಬರೆಸಿ ಊರಮಧ್ಯದಲ್ಲಿ ತೂಗು ಹಾಕಿದ್ದಾರೆ.

ಅದರ ಪಕ್ಕದಲ್ಲಿಯೇ ಮಾಜಿ ನ್ಯಾಯಮೂರ್ತಿ ಸಂತೋಶ್ ಹೆಗ್ಡೆ ಅವರು ಅನರ್ಹರನ್ನು ಸೋಲಿಸಿ ಎಂದು ಸಂದೇಶ ನೀಡಿರುವ ಫ್ಲೆಕ್ಸ್ ಒಂದನ್ನು ಸಹ ತೂಗು ಹಾಕಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹ ಆಗಿರುವ ಮಹೇಶ್ ಕುಮಟಳ್ಳಿ ಈ ಬಾರಿ ಪಕ್ಷೇತರವಾಗಿ ಬಿಜೆಪಿಯಿಂದ ಸ್ಪರ್ಧಿಸಿದ್ದು, ಅವರಿಗೆ ಕ್ಷೇತ್ರದಲ್ಲಿ ಹಲವು ಕಡೆ ವಿರೋಧ ವ್ಯಕ್ತವಾಗುತ್ತಿದೆ.
ಫ್ಲೆಕ್ಸ್ ಹಾಕಿರುವ ಬಗ್ಗೆ ಮಾಧ್ಯಮಳೊಟ್ಟಿಗೆ ಮಾತನಾಡಿರುವ ಗ್ರಾಮಸ್ಥ ರಮೇಶ್, 'ಮಹೇಶ್ ಕುಮಟಳ್ಳಿ ಶಾಸಕ ಸ್ಥಾನವನ್ನು ಮಾತ್ರವೇ ಮಾರಿಕೊಂಡಿಲ್ಲ, ಮತ ಹಾಕಿದ ನಮ್ಮ ಸ್ವಾಭಿಮಾನವನ್ನೂ ಮಾರಿಕೊಂಡಿದ್ದಾರೆ' ಎಂದಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications