ಬೆಳಗಾವಿಯಲ್ಲಿ ಸೆ.17ರಂದು ವಿಶ್ವಕರ್ಮ ಜಯಂತಿ
ಬೆಳಗಾವಿ, ಜು. 11 : ಗಡಿನಾಡು ಬೆಳಗಾವಿಯಲ್ಲಿ ಈ ಬಾರಿಯ ವಿಶ್ವಕರ್ಮ ಜಯಂತಿಯನ್ನು ಸೆ.17ರಂದು ಆಚರಿಸಲಾಗುತ್ತದೆ ಎಂದು ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಡಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿವಿಧ ಪಕ್ಷದ ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಡಿ ಅವರು ಈ ಕುರಿತು ಮಾಹಿತಿ ನೀಡಿದ್ದು, ಸೆ. 17ರ ಬೆಳಗ್ಗೆ 11 ಗಂಟೆಗೆ ಬೆಳಗಾವಿಯ ಸರ್ದಾರ್ ಮೈದಾನದಿಂದ ಪಿ.ಬಿ.ರಸ್ತೆಯವರೆಗೆ ಹಾಗೂ ಇತರೆ ಪ್ರಮುಖ ಬೀದಿಗಳಲ್ಲಿ 250 ಕೆ.ಜಿ ತೂಕದ ಪಂಚಲೋಹ ವಿಶ್ವಕರ್ಮ ಪುತ್ಥಳಿಯ ಮೆರವಣಿಗೆ ನಡೆಯಲಿದೆ ಎಂದರು.

ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಪಕ್ಷಾತೀತವಾಗಿ ಎಲ್ಲಾ ನಾಯಕರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು ಎಂದು ಕೆ.ಪಿ.ನಂಜುಡಿ ಹೇಳಿದರು. ಸುಮಾರು 2-3 ಲಕ್ಷ ಜನರು ಕಾರ್ಯಕ್ರದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು. [ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ವೆಬ್ ಸೈಟ್]
ಸರ್ಕಾರಕ್ಕೆ ಮನವಿ : ಸಮಾವೇಶದಲ್ಲಿ ವಿಶ್ವಕರ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು, ವಿಶ್ವಕರ್ಮ ಜಯಂತಿ ಅಂಗವಾಗಿ ಸೆ.17ರಂದು ಸರ್ಕಾರಿ ರಜೆ ಘೋಷಿಸಬೇಕು, ಚಿನ್ನ-ಬೆಳ್ಳಿ ಕೆಲಸಗಾರರ ಮೇಲೆ ನಡೆಯುತ್ತಿರುವ ಪೊಲೀಸ್ ದೌರ್ಜನ್ಯ ತಡೆಯಬೇಕು, ಸಮಾಜಕ್ಕೆ ರಾಜಕೀಯ ಶಕ್ತಿ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.
ತಮ್ಮ ಪ್ರತಿಭೆ ಮತ್ತು ಕಠಿಣ ಪರಿಶ್ರಮದಿಂದ ನಾಡಿಗೆ ವಿಶ್ವಕರ್ಮ ಸಮುದಾಯ ಹಲವಾರು ಕೊಡುಗೆಗಳನ್ನು ನೀಡಿದೆ. ಆದರೆ, ವಿಶ್ವಕರ್ಮ ಸಮಾಜಕ್ಕೆ ದೊರೆಯಬೇಕಾದ ಗೌರವ ಹಾಗೂ ರಾಜಕೀಯ ಸ್ಥಾನಮಾನ ಇನ್ನೂ ಸಿಕ್ಕಿಲ್ಲ. ಸಮುದಾಯಕ್ಕೆ ದೊರೆಯಬೇಕಾದ ಸೌಲಭ್ಯ, ಗೌರವ, ರಾಜಕೀಯ ಪ್ರಾತಿನಿಧ್ಯ ಸಿಗುವವರೆಗೆ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications