ತುರ್ತು ದ್ವಾರವಿಲ್ಲದ ವೋಲ್ವೋ ಬಸ್ಸುಗಳಿಗೆ ಬ್ರೇಕ್: ರೆಡ್ಡಿ

ಚಳಿಗಾಲ ಅಧಿವೇಶನದ ಅಂತಿಮ ದಿನವಾದ ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ರಘುನಾಥ್ ಮಲ್ಕಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇತ್ತೀಚಿನ ವೋಲ್ವೋ ಬಸ್ಸುಗಳ ದುರಂತದ ನಂತರ ಕಠಿಣ ಷರತ್ತುಗಳನ್ನು ವಿಧಿಸಲಾಗಿದೆ ಎಂದು ಹೇಳಿದರು. ವೋಲ್ವೋ ಬಸ್ಸುಗಳಲ್ಲಿ ವಾಣಿಜ್ಯ ಸರಕು ಸಾಗಣೆ ಮಾಡಬಾರದು. ಪ್ರಯಾಣಿಕರ ಸರಕನ್ನು ಮಾತ್ರ ಇಡಬೇಕು ಎಂಬುದು ಸೇರಿದಂತೆ 10-15 ಷರತ್ತುಗಳನ್ನು ಹಾಗೂ ಮಾರ್ಗಸೂಚಿಗಳನ್ನು ನೀಡಲಾಗಿದೆ.
( ಹಾವೇರಿ ದುರಂತ: ಅಪಘಾತಕ್ಕೆ ಸಿದ್ಧವಾಗಿಯೇ ಇದ್ದೆವು )
ಒಂದು ತಿಂಗಳ ಅವಧಿಯಲ್ಲಿ ನಡೆದ ಕಾರ್ಯಾಚರಣೆ ವೇಳೆ ವೋಲ್ವೋ ಬಸ್ಸುಗಳಲ್ಲಿ ಸರಕು ಸಾಗಣೆ, ಸರಿಯಾದ ನಿರ್ವಹಣೆ ಇಲ್ಲದಿರುವುದು ಸೇರಿದಂತೆ ಮತ್ತಿತರ 5199 ಪ್ರಕರಣಗಳನ್ನು ಪತ್ತೆ ಹಚ್ಚಿದ್ದು, ಈ ಪೈಕಿ 200 ವಾಹನಗಳ ಪಾರವಾನಗಿಯನ್ನು ರದ್ದು ಮಾಡಲಾಗಿದೆ. ಅಲ್ಲದೆ ಕಂಟ್ರ್ಯಾಕ್ಟ್ ಕ್ಯಾರೇಜ್ ಪದ್ಧತಿಯನ್ನು ನಿಷೇಧಿಸಲಾಗಿದೆ ಎಂದು ಸಚಿವರು ತಿಳಿಸಿದರು.
ವಾಹನಗಳ ಫಿಟ್ ನೆಸ್ ಅನ್ನು ಕಿರಿಯ ಅಧಿಕಾರಿಗಳು ಪರಿಶೀಲಿಸುತ್ತಿದ್ದರು. ಈಗ ಪ್ರತಿ ತಿಂಗಳು ಹಿರಿಯ ಇಬ್ಬರು ಅಧಿಕಾರಿಗಳು ಪರಿಶೀಲಿಸುವ ನಿಯಮವನ್ನು ಜಾರಿ ಮಾಡಲಾಗಿದೆ. 10 ಸ್ಕ್ವಾಡ್, ತಜ್ಞರ ಸಮಿತಿಯನ್ನು ಮಾಡಲಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಮಾಹಿತಿಯನ್ನು ಕಡ್ಡಾಯ ನಿರ್ವಹಣೆ ಮಾಡಬೇಕು, ಸಾಮರ್ಥ್ಯ ಮೀರಿ ಲಗೇಜ್ ಹಾಕಬಾರದು, ನಿಗದಿತ ವೇಗದಲ್ಲೇ ಬಸ್ ಚಾಲನೆ ಮಾಡುವಂತೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.
ವೋಲ್ವೋ ಬಸ್ಸಿನ ವಿನ್ಯಾಸ ಬದಲಿಸುವಂತೆ ದೆಹಲಿಯ ನ್ಯಾಷನಲ್ ಆಟೋಮೋಟಿವ್ ಟೆಸ್ಟಿಂಗ್ ಅಂಡ್ ರಿಸರ್ಚ್ ಡೆವಲಪ್ ಮೆಂಟ್ ಇನ್ ಫ್ರಾಸ್ಟ್ರಕ್ಚರ್ ಪ್ರಾಜೆಕ್ಟ್ ಗೆ ಮನವಿ ಮಾಡಿದ್ದೇವೆ. ಅವರು ಸ್ಪಂದಿಸಿದ್ದಾರೆ. ಕರ್ನಾಟಕಕ್ಕೆ ಬಂದು ಪರಿಶೀಲಿಸಿದ್ದಾರೆ. ಬಸ್ ದುರಂತಕ್ಕೆ ಅತಿ ವೇಗ ಹಾಗೂ ಸಾಮರ್ಥ್ಯ ಮೀರಿ ತುಂಬಿದ್ದ ಲಗೇಜ್ ಕಾರಣ ಎಂದು ಹೇಳಿದ್ದಾರೆ ಎಂದು ತಿಳಿಸಿದರು. ( ಜಬ್ಬಾರ್ ಬಸ್ ಅಪಘಾತಕ್ಕೆ ಕಾರಣ ತಿಳಿಯಿತು )
ಕೆಎಸ್ಆರ್ ಟಿಸಿ ಬಸ್ಸುಗಳಿಗೆ ಹಾಕುವ ಸಾಧನಗಳು ಕಳಪೆ ಗುಣಮಟ್ಟದಿಂದ ಕೂಡಿರುವ ಬಗ್ಗೆ ದೂರುಗಳು ಬಂದಿವೆ. ಹಾಗಾಗಿ ಟೆಂಡರ್ ಪದ್ಧತಿ ಬದಲಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಸಚಿವರು ಹೇಳಿದರು.
ಇದೇ ವೇಳೆ ಸದಸ್ಯ ಅರುಣ ಶಹಾಪುರ ಅವರು ಕೇಳಿದ ಪ್ರಶ್ನೆಗೆ ರಾಜ್ಯದ ಎಲ್ಲಾ ಚೆಕ್ ಪೋಸ್ಟ್ ಗಳಲ್ಲೂ ಸಿಸಿಟಿವಿ ಅಳವಡಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ತಿಳಿಸಿದರು.
ಪ್ರಮುಖ ಚೆಕ್ ಪೋಸ್ಟ್ ಗಳಾದ ಅತ್ತಿಬೆಲೆ, ನಂಗಲಿ, ಬಾಗೇಪಲ್ಲಿ, ಗೌರಿಬಿದನೂರು, ರಾಯಲ್ಪಾಡು, ಗುಂಡ್ಲುಪೇಟೆ, ಚಿಕ್ಕಹೊಳೆ ಡ್ಯಾಮ್, ಅಳಂದ, ಹಜರಿ, ಜಳಕಿ, ನಿಪ್ಪಾಣಿ, ರಾಮನಗರ, ಕಾಗವಾಡ, ಹುಮನಾಬಾದ್ ಚೆಕ್ ಪೋಸ್ಟ್ ಗಳಲ್ಲಿ ಸಿಸಿಟಿವಿ ಅಳವಡಿಸಲು ಸರ್ಕಾರ ಮುಂದಾಗಿದೆ ಎಂದರು.
ಚೆಕ್ ಪೋಸ್ಟ್ ಗಳಲ್ಲಿ ಅವ್ಯವಹಾರ ನಡೆಯುತ್ತಿರುವ ದೂರುಗಳು ಬಂದಿವೆ. ಆದರೆ, ಅವ್ಯವಹಾರ ತಡೆಗೆ ಸಿಬ್ಬಂದಿ ಕೊರತೆ ಇದೆ. ಎಲ್ಲಾ ಚೆಕ್ ಪೋಸ್ಟ್ ಗಳಿಗೂ ಸೇರಿ 580 ಮಂದಿ ಸಿಬ್ಬಂದಿ ಬೇಕು. ಆದರೆ, ಈಗಿರುವುದು 285 ಮಂದಿ ಮಾತ್ರ. ಹಾಗಾಗಿ ದೂರು ಬಂದ ಕಡೆ ಗೃಹ ಇಲಾಖೆ ಸಿಬ್ಬಂದಿಯನ್ನು ಬಳಸಿ ಕ್ರಮ ಕೈಗೊಳ್ಳಲು ಚಿಂತನೆ ನಡೆದಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications