ಬೆಳಗಾವಿ ವಿಟಿಯು ನೇಮಕದಲ್ಲಿ ಅಕ್ರಮ: 64 ಬೋಧಕರಿಗೆ ನೋಟಿಸ್
ಬೆಳಗಾವಿ, ಜು.11: ವಿವಿಧ ಜಿಲ್ಲೆಗಳಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಒಂದಲ್ಲಾ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತದೆ, ಇತ್ತೀಚೆಗೆ ಬೆಂಗಳೂರಿನ ವಿವಿಯಲ್ಲಿ ಪ್ರಶ್ನೆಪತ್ರಿಕೆ ಕೋಡ್ ಅದಲು ಬದಲಾಗಿ ಸುದ್ದಿ ಮಾಡಿತ್ತು.
ಇದೀಗ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನೇಮಕಗೊಂಡಿರುವ 168 ಸಿಬ್ಬಂದಿಗಳ ಪೈಕಿ 64 ಸಿಬ್ಬಂದಿಗಳು ಅನರ್ಹರು ಎಂದು ತಿಳಿದುಬಂದಿದ್ದು, ವಿವಿರ ಕೇಳಿ ನೋಡಿಸ್ ಜಾರಿ ಮಾಡಿದೆ.
5 ವರ್ಷಗಳ ಹಿಂದೆ ಕುಲಪತಿಯಾಗಿದ್ದ ಡಾ. ಎಚ್ ಮಹೇಶಪ್ಪ ಅಧಿಕಾರಾವಧಿಯಲ್ಲಿ 168 ಪ್ರೊಫೆಸರ್ಗಳು, ಅಸಿಸ್ಟೆಂಟ್ ಪ್ರೊಫೆಸರ್ಗಳು ಹಾಗೂ ಅಸೋಸಿಯೇಟ್ ಪ್ರೋಫೆಸರ್ಗಳನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಈ ಪೈಕಿ 64 ಮಂದಿ ಅನರ್ಹರರನ್ನು ನೇಮಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಈ ಹಿಂದಿನ ಕುಲಪತಿಗಳ ಅಧಿಕಾರಾವಧಿಯಲ್ಲಿ ನಡೆದ ಅಕ್ರಮಗಳ ಕುರಿತು ತನಿಖೆ ನಡೆಸಲು ರಾಜ್ಯಪಾಲರು ರಚಿಸಿದ್ದ ನ್ಯಾ. ಕೇಶವನಾರಾಯಣ ಸಮಿತಿ ಸಲ್ಲಿಸಿದ ವರದಿಯಲ್ಲಿ ಈ ಲೋಪಗಳನ್ನು ತಿಳಿಸಲಾಗಿತ್ತು. ವಿಟಿಯು ರಚಿಸಿದ್ದ ಕಾರ್ಯಕಾರಿ ಸಮಿತಿ 168 ಬೋಧಕ ಸಿಬ್ಬಂದಿಯ ನೇಮಕದಲ್ಲಿನ ದಾಖಲಾತಿ ಪರಿಶೀಲಿಸಿ, ಅರ್ಹತೆ ಇಲ್ಲದೆಯೂ ನೇಮಕಗೊಂಡವರಿಗೆ ನೋಟಿಸ್ ನೀಡಲಾಗಿದೆ. ಈ ಸಮಿತಿ ಕೂಡ ಇತ್ತೀಚೆಗಷ್ಟೇ ವಿವಿಗೆ ತನ್ನ ವರದಿ ಸಲ್ಲಿಸಿದೆ.
ಹಲವರು ನಿರ್ದಿಷ್ಟ ಮೀಸಲಾತಿ ವರ್ಗದಡಿ ಮೀಸಲಾತಿ ಕ್ಲೇಮ್ ಮಾಡಿದ್ದಾರೆ. ಆದರೆ ಅವರು ಆ ವರ್ಗದಡಿ ಸೌಲಭ್ಯ ಪಡೆಯಲು ಸಾಧ್ಯವೇ ಇಲ್ಲ ಎನ್ನಲಾಗಿದೆ. ಸಮಿತಿ ವರದಿ ಆಧರಿಸಿ 64 ಮಮದಿಗೆ ನೋಟಿಸ್ ನೀಡಿದ್ದು, 15 ದಿನಗಳಲ್ಲಿ ವಿವರ ನೀಡಬೇಕು ಎಂದು ತಿಳಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications