ಭ್ರಷ್ಟಾಚಾರ ಆರೋಪ : ವಿಟಿಯು ಕುಲಸಚಿವ ಜಗನ್ನಾಥ ರೆಡ್ಡಿ ಅಮಾನತು
ಬೆಳಗಾವಿ, ಫೆಬ್ರವರಿ 17 : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಕುಲಸಚಿವ ಜಗನ್ನಾಥ ರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ. 200 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.
ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಅವರು ಕುಲಸಚಿವ ಜಗನ್ನಾಥ ರೆಡ್ಡಿ ಅವರನ್ನು ಅಮಾನತು ಮಾಡಿದ್ದಾರೆ. ಶುಕ್ರವಾರವೇ ಇ-ಮೇಲ್ ಮೂಲಕ ಅಮಾನತು ಆದೇಶವನ್ನು ಜಗನ್ನಾಥ ರೆಡ್ಡಿ ಅವರಿಗೆ ತಲುಪಿಸಲಾಗಿದೆ.
ಕುಲಸಚಿವ ಜಗನ್ನಾಥ ರೆಡ್ಡಿ ಅವರ ಮೇಲೆ ಭ್ರಷ್ಟಾಚಾರದ ಆರೋಪವಿದೆ. ಜನವರಿ ತಿಂಗಳಿನಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಈ ಕುರಿತು ತನಿಖೆಯನ್ನು ಆರಂಭಿಸುವಂತೆ ಕುಲಪತಿಗಳಿಗೆ ಸೂಚನೆ ನೀಡಿದ್ದರು.

ಕುಲಪತಿ ಪ್ರೊ.ಕರಿಸಿದ್ದಪ್ಪ ಅವರು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದರು. ಸಮಿತಿಯ ವರದಿ ಮತ್ತು ರಾಜ್ಯಪಾಲರ ಶಿಫಾರಸಿನ ಅನ್ವಯ ಎರಡು ನೋಟಿಸ್ಗಳನ್ನು ನೀಡಿ, ಕುಲಸಚಿವ ಜಗನ್ನಾಥ ರೆಡ್ಡಿ ಅವರನ್ನು ಅಮಾನತು ಮಾಡಲಾಗಿದೆ.
ಆರೋಪವೇನು? : ಗುತ್ತಿಗೆ ಕಾಮಗಾರಿ ನೀಡುವಲ್ಲಿ ಅವ್ಯವಹಾರ ನಡೆಸಲಾಗಿದೆ ಎಂಬುದು ಆರೋಪ. ಇದು ಸುಮಾರು 200 ಕೋಟಿ ಹಗರಣವಾಗಿದೆ. ಇಬ್ಬರು ವಿದ್ಯಾರ್ಥಿಗಳ ಪಾಲಕರಾದ ಡಾ.ವಿಶ್ವನಾಥ ಹಾಗೂ ಡಾ.ವಾಸುದೇವಮೂರ್ತಿ ಅವರು ಕಳೆದ ವರ್ಷ ಅಕ್ಟೋಬರ್ನಲ್ಲಿ ರಾಜ್ಯಪಾಲರಿಗೆ ಈ ಕುರಿತು ದೂರು ನೀಡಿದ್ದರು.
ಈ ದೂರಿನ ಆಧಾರದ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರು ಕುಲಪತಿ ಪ್ರೊ.ಕರಿಸಿದ್ದಪ್ಪ ಅವರಿಗೆ ಸೂಚನೆ ನೀಡಿದ್ದರು. ನಿವೃತ್ತ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಡಿ.ಎಸ್.ಶಿಂಧೆ ನೇತೃತ್ವದಲ್ಲಿ ತನಿಖೆ ನಡೆಸಲು ಸಮಿತಿ ರಚಿಸಲಾಗಿತ್ತು.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ












Click it and Unblock the Notifications