ಜಾರಕಿಹೊಳಿ ಸಹೋದರರನ್ನು ಬಿಜೆಪಿಗೆ ಸ್ವಾಗತಿಸಿದ ಪ್ರಭಾಕರ ಕೋರೆ
ಬೆಳಗಾವಿ, ಸೆಪ್ಟೆಂಬರ್ 12 : 'ಕಾಂಗ್ರೆಸ್ ಪಕ್ಷದಲ್ಲಿ ಮೂಲ ನಾಯಕರು ಇಲ್ಲ. ಬೇರೆ ಪಕ್ಷದಿಂದ ಬಂದ ನಾಯಕರೇ ಹೆಚ್ಚಾಗಿದ್ದಾರೆ. ಜಾರಕಿಹೊಳಿ ಸಹೋದರರು ಬಿಜೆಪಿಗೆ ಬಂದರೆ ಸ್ವಾಗತ' ಎಂದು ಬಿಜೆಪಿ ನಾಯಕ ಪ್ರಭಾಕರ ಕೋರೆ ಹೇಳಿದರು.
ಬೆಳಗಾವಿಯಲ್ಲಿ ಬುಧವಾರ ಮಾತನಾಡಿದ ರಾಜ್ಯಸಭಾ ಸದಸ್ಯ ಮತ್ತು ಬಿಜೆಪಿ ನಾಯಕ ಪ್ರಭಾಕರ ಕೋರೆ ಅವರು, 'ಬೆಳಗಾವಿಯ ರಾಜಕೀಯವೇ ಬೇರೆ, ಇತರ ಜಿಲ್ಲೆಗಳ ರಾಜಕೀಯವೇ ಬೇರೆ. ಬೆಳಗಾವಿ ರಾಜಕೀಯ ಬೆಂಗಳೂರಿನಲ್ಲಿರುವ ಸರ್ಕಾರದ ಮೇಲೆ ಯಾವಾಗಲೂ ಪ್ರಭಾವ ಬೀರುತ್ತದೆ' ಎಂದರು.
'ಜಾರಕಿಹೊಳಿ ಸಹೋದರರು ಬಹಳ ಅನುಭವಿ ನಾಯಕರು. ಅವರಿಗೆ ಬಿಜೆಪಿಗೆ ಬರುವ ಆಸಕ್ತಿ ಇದ್ದರೆ ಬರಲಿ. ಅವರು ಬಿಜೆಪಿಗೆ ಬಂದರೆ ಸ್ಥಳೀಯ ನಾಯಕರು ಸ್ವಾಗತಿಸುತ್ತಾರೆ' ಎಂದು ಪ್ರಭಾಕರ ಕೋರೆ ತಿಳಿಸಿದರು.

'ಕಾಂಗ್ರೆಸ್ ರಾಜಕೀಯ ಪಕ್ಷವಾಗಿ ಉಳಿದಿಲ್ಲ. ಪಕ್ಷದಲ್ಲಿ ಮೂಲ ನಾಯಕರೇ ಇಲ್ಲ. ಬೇರೆ-ಬೇರೆ ಪಕ್ಷದಿಂದ ನಾಯಕರು ಪಕ್ಷದಲ್ಲಿ ಸೇರಿಕೊಂಡಿದ್ದಾರೆ' ಎಂದು ಪ್ರಭಾಕರ ಕೋರೆ ಹೇಳಿದರು.
ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ ಸಹೋದರರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ ಹಬ್ಬಿದೆ. ಕಾಂಗ್ರೆಸ್ ನಾಯಕರು ಜಾರಕಿಹೊಳಿ ಸಹೋದರರ ಜೊತೆ ಮಾತುಕತೆ ನಡೆಸಿ ಮನವೊಲಿಸಲು ಪ್ರಯತ್ನ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಜಾರಕಿಹೊಳಿ, ಪಾಟೀಲ್, ಕತ್ತಿ ಕುಟುಂಬಗಳು ಸಕ್ರಿಯವಾಗಿವೆ. ಆದರೆ, ಜಾರಕಿಹೊಳಿ ಸಹೋದರರು ಜಿಲ್ಲೆ ಮತ್ತು ರಾಜ್ಯ ರಾಜಕಾರಣದಲ್ಲಿ ಪ್ರಭಾವವನ್ನು ಹೊಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications