ಸಂಜಯ ಪಾಟೀಲ್ ವಿವಾದಾದ್ಮಕ ಹೇಳಿಕೆ ಬಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದೇನು?
ಬೆಳಗಾವಿ, ಏಪ್ರಿಲ್, 14: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಅಲ್ಲದೆ ಒಬ್ಬರ ಮೇಲೊಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಹಾಗೆಯೇ ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಂಜಯ ಪಾಟೀಲ ನೀಡಿರುವ ಹೇಳಿಕೆಯೊಂದು ಇದೀಗ ಭಾರೀ ಸದ್ದು ಮಾಡುತ್ತಿದ್ದು, ಈ ಬಗ್ಗೆ ಜಗದೀಶ್ ಶೆಟ್ಟರ್ ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಮಾಜಿ ಶಾಸಕ ಸಂಜಯ್ ಪಾಟೀಲ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ನಾನು ಮಾಜಿ ಶಾಸಕ ಸಂಜಯ್ ಪಾಟೀಲ ಜೊತೆಗೆ ಮಾತನಾಡಿರುವೆ. ಯಾವ ಹಿನ್ನೆಲೆಯಲ್ಲಿ ಹೇಳಿಕೆ ನೀಡಿದ್ದಾರೆ ಎಂಬ ಬಗ್ಗೆಯೂ ಚರ್ಚೆ ಮಾಡಿರುವೆ. ಇನ್ನು ನರೇಂದ್ರ ಮೋದಿ ಬಗ್ಗೆ, ಬಿಜೆಪಿ ನಾಯಕರ ಬಗ್ಗೆ ಕಾಂಗ್ರೆಸ್ನವರು ಕೀಳಾಗಿ ಮಾತನಾಡಿದ್ದಾರೆ. ಏಕವಚನದಲ್ಲಿ ಸಾಕಷ್ಟು ಸಲ ನಮ್ಮ ನಾಯಕರ ಬಗ್ಗೆ ಮಾತನಾಡಿದ್ದು ಇದೆ. ಹೀಗಾಗಿ ಸಂಜಯ್ ಪಾಟೀಲ ಅವರೇ ಈ ಬಗ್ಗೆ ಉತ್ತರ ನೀಡುತ್ತಾರೆ ಎಂದರು.

ಸಂಜಯ್ ಪಾಟೀಲ ಆಡಿರುವ ಮಾತುಗಳು ಬಿಜೆಪಿ ಅಜೆಂಡಾ ಅಲ್ಲವೇ ಅಲ್ಲ. ಸಂಜಯ ಪಾಟೀಲ್ ಜೊತೆಗೆ ಮತ್ತೊಮ್ಮೆ ಸಮಾಲೋಚನೆ ಮಾಡುತ್ತೇನೆ. ನಾನೂ ವೇದಿಕೆ ಮೇಲೆ ಇದ್ದೆ, ಆದರೆ ಸಂಜಯ ಪಾಟೀಲ ಇದಕ್ಕೆ ಸ್ಪಷ್ಟೀಕರಣ ನೀಡಿದ್ರೆ ಉತ್ತಮವಾಗಿದೆ. ನಾವು ಎಲ್ಲ ಕಾರ್ಯಕ್ರಮಗಳಲ್ಲೂ ವೇದಿಕೆ ಮೇಲೆ ಇರುತ್ತೇವೆ, ಎಲ್ಲರ ಭಾಷಣ ಗ್ರಹಿಸಿಕೊಳ್ಳಲು ಸಾಧ್ಯವಾಗಲ್ಲ. ಹೀಗಾಗಿ ಸಂಜಯ ಪಾಟೀಲ ಜೊತೆಗೆ ಸಮಾಲೋಚನೆ ಮಾಡಿ ನಿರ್ಧಾರಕ್ಕೆ ಬರುತ್ತೇನೆ ಎಂದರು.
ಸಂಜಯ ಪಾಟೀಲ ಹೇಳಿಕೆ ಲಿಂಗಾಯತ ಸಮಾಜಕ್ಕೆ ಮಾಡಿದ ಅನ್ಯಾಯ ಎಂಬ ಹೆಬ್ಬಾಳ್ಕರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಲ್ಲ ವಿಚಾರಗಳನ್ನು ಸಮಾಜಕ್ಕೆ, ಸಮುದಾಯಕ್ಕೆ ಏಕೆ ತೆಗೆದುಕೊಂಡು ಹೋಗುತ್ತಿದ್ದಾರೆಯೋ ನನಗೆ ತಿಳಿಯುತ್ತಿಲ್ಲ. ಲಿಂಗಾಯತ ಸಮಾಜಕ್ಕೆ, ಪಾಟೀಲ ಹೇಳಿಕೆಗೆ ಏನು ಸಂಬಂಧ ಇದೆ. ಹೇಳಿಕೆ ತಪ್ಪಾಗಿದ್ರೆ ತಪ್ಪು ಎಂದು ಹೇಳೋಣ, ಸಮುದಾಯಕ್ಕೆ ಹೋಗಿ ಮುಟ್ಟಿಸುವುದು ಸರಿಯಲ್ಲ ಎಂದರು.
ಗೃಹಲಕ್ಷ್ಮಿ ಯೋಜನೆಯ ಹಣದಿಂದ ಹಳ್ಳಿಯ ಹೆಣ್ಣುಮಕ್ಕಳು ಹಾದಿ ತಪ್ಪುತ್ತಿದ್ದಾರೆ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಚ್ಡಿಕೆ ಹೇಳಿಕೆಯನ್ನು ನಾನು ನೋಡಿಲ್ಲ, ಕೇಳಿಲ್ಲ. ಇದಕ್ಕೆ ಕುಮಾರಸ್ವಾಮಿ ಅವರೇ ಉತ್ತರ ನೀಡುತ್ತಾರೆ ಎಂದು ಶೆಟ್ಟರ್ ಹೇಳಿದರು.
10 ವರ್ಷಗಳ ಕಾಲ ಮೋದಿ ಸರ್ಕಾರ ಜನ ಪರ ಯೋಜನೆ ಜಾರಿಗೊಳಿಸಿದೆ. ಆ ಮೂಲಕ ಎಲ್ಲ ವರ್ಗದ ಜನರ ಪ್ರೀತಿಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಎಲ್ಲಾ ವರ್ಗಗಳ ಜನರನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ರಚಿಸಲಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೆ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಎಲ್ಲಾ ಭರವಸೆಗಳನ್ನು ಕೂಡ ನಮ್ಮ ಸರ್ಕಾರ ಈಡೇರಿಸಿದೆ. ಈ ಚುನಾವಣೆಗಾಗಿ ಬಿಡುಗಡೆಗೊಂಡಿರುವ ಪ್ರಣಾಳಿಕೆಯನ್ನು ನಾನು ಸ್ವಾಗತಿಸುವೆ ಎಂದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications