ಜಾತಿಗಳ ಮೀಸಲಾತಿ ಹೋರಾಟದ ವಿಚಾರವಾಗಿ ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಬೆಳಗಾವಿ, ಫೆಬ್ರವರಿ 12: ಮೀಸಲಾತಿಗಾಗಿ ವಿವಿಧ ಸಮುದಾಯಗಳಿಂದ ಹೋರಾಟದ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಕೆಲ ಸಮುದಾಯಗಳು ಮೀಸಲಾತಿಗಾಗಿ ಮಾಡುತ್ತಿರುವ ಹೋರಾಟ ನ್ಯಾಯಬದ್ಧವಾಗಿದೆ, ಇನ್ನು ಕೆಲ ಸಮುದಾಯಗಳ ಹೋರಾಟ ರಾಜಕೀಯ ಪ್ರೇರಿತವಾಗಿವೆ ಎಂದು ಹೇಳಿದರು.
ನ್ಯಾಯಬದ್ಧವಾಗಿ ಹೋರಾಡುತ್ತಿರುವ ಸಮುದಾಯಕ್ಕೆ ಮೀಸಲಾತಿ ಸಿಗಬೇಕು, ಸರ್ಕಾರವು ಅಳೆದು, ತೂಗಿ ನಿರ್ಧಾರ ಮಾಡಬೇಕು ಎಂಬುದು ನನ್ನ ಆಗ್ರಹವಾಗಿದೆ ಎಂದರು.

ಎಸ್.ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಿಎಂ ಸಮಯ ಹೇಳಿದ್ದಾರೆ, ಸಿಎಂ ನಿರ್ಧಾರದ ನಂತರ ನಮ್ಮ ಸ್ವಾಮೀಜಿ ಏನು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ನೋಡೋಣ ಎಂದು ತಿಳಿಸಿದರು.
ಇದೇ ವೇಳೆ ಅಹಿಂದ ಹೋರಾಟ ಮರು ಆರಂಭದ ಕುರಿತ ಚರ್ಚೆಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿ, ಅಹಿಂದ ಹೋರಾಟ ಮರು ಆರಂಭಿಸುವ ಯೋಜನೆಯೇ ಇಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅಹಿಂದ ಬೇಸ್ ಇದೆ, ಎಲ್ಲ ಸಮುದಾಯಕ್ಕೂ ಕಾಂಗ್ರೆಸ್ ವೇದಿಕೆ ಕಲ್ಪಿಸಿದೆ. ನಾವು ಈ ಅಹಿಂದ ಹೋರಾಟ ಮಾಡಿದಾಗ ಕಾಂಗ್ರೆಸ್ಸಿನಲ್ಲಿ ಇರಲಿಲ್ಲ ಎಂದು ಹೇಳಿದರು.
ಇದೀಗ ನಾವೆಲ್ಲರೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇವೆ, ಅಹಿಂದ ಹೋರಾಟ ಮಾಡಲ್ಲ. ಮುಂದೆ ಸಿದ್ದರಾಮಯ್ಯ ನೇತೃತ್ವದಲ್ಲಿ ಅಹಿಂದ ಹೋರಾಟ ಮಾಡುವ ಯೋಜನೆ ಇಲ್ಲ ಎಂದ ಸತೀಶ್ ಜಾರಕಿಹೊಳಿ, ಬೆಳಗಾವಿ ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ, ಅಭ್ಯರ್ಥಿ ಆಯ್ಕೆಗಾಗಿ ಎಂ.ಬಿ ಪಾಟೀಲ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿ ತನ್ನ ಕೆಲಸವನ್ನು ಮಾಡಿದ್ದು, ಆಕಾಂಕ್ಷಿಗಳ ಪಟ್ಟಿ ಹೈಕಮಾಂಡ್ ಗೆ ರವಾನಿಸಲಾಗಿದೆ. ಅಭ್ಯರ್ಥಿ ಆಯ್ಕೆ ಸಂಬಂಧ ರಚಿಸಲಾಗಿದ್ದ ಕಮಿಟಿ ತನ್ನ ಕೆಲಸ ಮಾಡಿ ಮುಗಿಸಿದೆ ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications