ಟೈಂ ಬರ್ಲಿ ಅವರನ್ನೆಲ್ಲ ವಿದೇಶ ಪ್ರವಾಸಕ್ಕೆ ಕರೆದುಕೊಂಡು ಹೋಗೋಣ-ಸತೀಶ್ ಜಾರಕಿಹೊಳಿ ಹೀಗೆ ಹೇಳಿದ್ದೇಕೆ?
ಬೆಳಗಾವಿ, ನವೆಂಬರ್, 26: ಟೈಂ ಬಂದಾಗ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕರೆದುಕೊಂಡು ಹೋಗೋಣ ಎಂದು ವಿದೇಶ ಪ್ರವಾಸದಿಂದ ವಾಪಸ್ ಆದ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ಹೇಳಿದರು. ಅವರು ಹೀಗೆ ಹೇಳಿದ್ದೇಕೆ? ಇದರ ಹಿಂದಿರುವ ಉದ್ದೇಶವೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ವಿದೇಶ ಪ್ರವಾಸ ಸ್ವಂತ ಮತ್ತು ಖಾಸಗಿ ಪ್ರವಾಸವಾಗಿದೆ. ಬೇರೆ ಬೇರೆ ಕೆಲಸವಿತ್ತು, ಅದಕ್ಕೆ ಪ್ರವಾಸಕ್ಕೆ ಹೋಗಿದ್ದೆ. ಅದರಲ್ಲಿ ಏನು ವಿಶೇಷವಿಲ್ಲ ಎಂದರು. ಇನ್ನು ಹಾಲಿ ಮತ್ತು ಮಾಜಿ ಶಾಸಕರನ್ನು ಬಿಟ್ಟು ಹೋಗಿದ್ದೀರಿ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನೋಡೋಣ ಟೈಮ್ ಬಂದಾಗ ಅವರನ್ನು ಕರೆದುಕೊಂಡು ಹೋಗೋಣ ಎಂದು ನಗುತ್ತಲೇ ಉತ್ತರಿಸಿದರು.

ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆ ಮರ್ಜ್ ಮಾಡುತ್ತಿರುವ ವಿಚಾರಕ್ಕೆ ಪ್ರಕ್ರಿಯಿಸಿ, 10 ವರ್ಷಗಳ ಹಿಂದೆ ಒಂದು ರಿಪೋರ್ಟ್ ಕೊಟ್ಟಿದ್ದಾರೆ. ಆ ರಿಫೋರ್ಟ್ ಆಧಾರದ ಮೇಲೆ ಮರ್ಜ್ ಮಾಡುತ್ತಾರೆ. ಇಲಾಖೆಗಳ ವಿಲೀನಕ್ಕೂ ಗ್ಯಾರಂಟಿ ಯೋಜನೆಗಳಿಗೂ ಸಂಬಂಧವಿಲ್ಲ ಎಂದರು.
ಕಾಂತರಾಜ್ ವರದಿ ಅಂಗೀಕಾರ ಮಾಡಿದರೆ ಕಾಂಗ್ರೆಸ್ಗೆ ಎಫೆಕ್ಟ್ ಆಗುತ್ತದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇನ್ನೂ ಕಾಂತರಾಜ್ ವರದಿ ನಮಗೆ ಕೊಡಬೇಕು. ಆ ವರದಿ ಚರ್ಚೆ ಆಗಬೇಕು, ಆಮೇಲೆ ಒಪ್ಪಿಕೊಳ್ಳುವ ಪ್ರಶ್ನೆ ಬರುತ್ತದೆ.
ಇನ್ನೂ ಕಾಂತರಾಜ್ ವರದಿ ಪ್ರಕ್ರಿಯೆಗೆ ಲಾಂಗ್ ಟೈಮ್ ಇದೆ. ಎರಡು ತಿಂಗಳು ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಕಾಂತರಾಜ್ ವರದಿ ಕೊಟ್ಟ ಬಳಿಕ ಸರ್ಕಾರವಿದೆ. ಸಿಎಂ, ಡಿಸಿಎಂ ಅವರು ಚರ್ಚೆ ಮಾಡುತ್ತಾರೆ ಎಂದರು.
ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ಆಗಿದೆ. ಡಿಸಿ, ಕಮಿಷನರ್ ಎಲ್ಲರೂ ಅಗತ್ಯ ತಯಾರಿ ಮಾಡಿದ್ದಾರೆ. ಪ್ರತಿಭಟನೆ ಮಾಡುವವರಿಗೆ ಬೇಡ ಅನ್ನೋದಕ್ಕೆ ಆಗುವುದಿಲ್ಲ. ಅವರು ಬಂದು ಸರ್ಕಾರಕ್ಕೆ ತಮ್ಮ ಸಮಸ್ಯೆಗಳನ್ನು ಹೇಳಲಿ ಎಂದ ಅವರು, ಪ್ರತಿಭಟನಾಕಾರರ ಸಮಸ್ಯೆ ಆಲಿಸಿದರೆ ಕೊಂಚ ಸಮಾಧಾನ ಆಗುತ್ತಾರೆ. ಲೋಕಸಭೆ ಚುನಾವಣೆಗೆ ಸಿದ್ಧತೆ ಬಗ್ಗೆ ಅಧಿವೇಶನ ವೇಳೆ ಸಭೆ ಮಾಡುತ್ತೇವೆ ಎಂದು ಹೇಳಿದರು.
ಡಿ.ಕೆ.ಶಿ ಮೇಲಿನ ಪ್ರಕರಣ ವಾಪಸ್ ಸ್ವಾಗತಾರ್ಹ
ಸಿಬಿಐ, ಇಡಿ, ಐಟಿ ಸಂಸ್ಥೆಗಳನ್ನ ರಾಜಕೀಯ ವಿರೋಧಿಗಳನ್ನು ಹಣಿಯಲಿಕ್ಕೆ ಉಪಯೋಗಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ಗಂಭೀರ ಸ್ವರೂಪದ ಆರೋಪ ಮಾಡಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೇಲಿನ ಅಕ್ರಮ ಪ್ರಕರಣ ವಾಪಾಸ್ ಪಡೆಯಲು ಸಚಿವ ಸಂಪುಟದ ಒಪ್ಪಿಗೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇಂದು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದರು.
ಡಿ.ಕೆ.ಶಿವಕುಮಾರ್ ಮೇಲಿನ ಪ್ರಕರಣವನ್ನು ಸಿಬಿಐಗೆ ಕೊಟ್ಟವರು ಯಾರು? ಅಂದು ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಯಡಿಯೂರಪ್ಪ ಇದ್ದರು. ಅವರೇ ಈ ಪ್ರಕರಣ ಸಿಬಿಐಗೆ ಕೊಟ್ಟವರು. ಇಂದು ಕಾಂಗ್ರೆಸ್ ಸರ್ಕಾರದ ಬಂದಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಸಹಜವಾಗಿಯೇ ಡಿಸಿಎಂ ಶಿವಕುಮಾರ್ ಮೇಲಿನ ಪ್ರಕರಣ ವಾಪಾಸ್ ಪಡೆದರೆ ಇದನ್ನು ನಾನು ಸ್ವಾಗತ ಮಾಡುವೆ ಎಂದರು.
ಈ ಕುರಿತು ಮಾತನಾಡಲು ಯಾರಿಗೂ ನೈತಿಕತೆ ಇಲ್ಲ. ಪಾರ್ಲಿಮೆಂಟ್ನಲ್ಲಿ ಆದಾನಿ ವಿರುದ್ಧ ಮಾತಾಡಿದರೆ ನೋಟಿಸ್ ಕೊಡುತ್ತಾರೆ. ಯಾವ ಆಧಾರದ ಮೇಲೆ ಕೊಡುತ್ತಾರೆ. ಯಾವುದೇ ಪ್ರಕರಣ, ದೂರು ದಾಖಲು ಮಾಡದೇ ನೋಟಿಸ್ ಕೊಡುವುದು ತಪ್ಪು. ಈ ನಿಟ್ಟಿನಲ್ಲಿ ನನಗೆ ಕಾನೂನು ಬಗ್ಗೆ ಮಾಹಿತಿ ಇದೆ ಅಂತಾ ಮಾತಾನಾಡುವೆ. ಒಬ್ಬ ವ್ಯಕ್ತಿ ಮೇಲೆ ದೂರು ದಾಖಲು ಮಾಡಿದ ನಂತರ ನೋಟಿಸ್, ವಿಚಾರಣೆ ಮಾಡಬೇಕು ಎಂದರು.
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications