ಬಕ್ರಾ ಮಾಡಲು ಇಲ್ಲಿಗೆ ಬಂದಿದ್ದೀರಾ?, ಬೆಳಗಾವಿಗೆ ನಿಮ್ಮ ಕೊಡುಗೆ ಏನು?: ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ
ಬೆಳಗಾವಿ, ಮಾರ್ಚ್ 28: ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಂದ ಬೆಳಗಾವಿಗೆ ಕೊಡುಗೆ ಏನು? ಅವರು ಬೆಳಗಾವಿ ನನ್ನ ಕರ್ಮ ಭೂಮಿ ಎನ್ನುತ್ತಿದ್ದಾರೆ. ಹಾಗಾದರೆ ನಾವೇನು ಹುಚ್ಚರಾ? ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಖಾರವಾಗಿ ಪ್ರಶ್ನೆ ಮಾಡಿದ್ದಾರೆ.
ಗುರುವಾರ ಗೋಕಾಕ್ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಅಲೋಟ್ ಆಗಿದ್ದ ಆಕ್ಸಿಜನ್ ಘಟಕ ಅನ್ನು ಹುಬ್ಬಳ್ಳಿ- ಧಾರವಾಡಕ್ಕೆ ತೆಗೆದುಕೊಂಡು ಹೋಗಿದ್ದರು. ಬೆಳಗಾವಿ ಜನರಿಗೆ ಅನ್ಯಾಯ ಮಾಡಿರುವ ಅವರು, ಇಂದು ಇದು ನನ್ನ ಕರ್ಮ ಭೂಮಿ ಎನ್ನುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಕ್ರಾ ಮಾಡಲು ಬಂದಿದ್ದೀರಾ?
ಬೆಳಗಾವಿ ದೊಡ್ಡ ಜಿಲ್ಲೆ, ಇಲ್ಲಿ ಜನಸಂಖ್ಯೆ ಹೆಚ್ಚಿದೆ. ಬೆಳಗಾವಿ ಜಿಲ್ಲೆ ನಿಮ್ಮ ಕೊಡುಗೆ ಏನು? ಈಗ ಕರ್ಮ ಭೂಮಿ ಎಂದು ಜಿಲ್ಲೆಯ ಜನರನ್ನು ಬಕ್ರಾ ಮಾಡಲು ಇಲ್ಲಿಗೆ ಬಂದಿದ್ದೀರಾ? ಎಂದು ಪ್ರಶ್ನಿಸಿದರು.
ಆರು ಬಾರಿ ಹುಬ್ಬಳ್ಳಿ ಜನರು ಜಗದೀಶ್ ಶೆಟ್ಟರ್ ಅವರನ್ನು ಆಯ್ಕೆ ಮಾಡಿ ಕಳುಹಿಸಿದ್ದರು. ವಿರೋಧ ಪಕ್ಷದ ನಾಯಕರಾದರು, ಮಂತ್ರಿಯಾದರು, ಮುಖ್ಯಮಂತ್ರಿಯಾದರು, ಬಿಜೆಪಿ ಅಧ್ಯಕ್ಷರಾದರು. ಎಲ್ಲವನ್ನೂ ಅನುಭವಿಸಿದ್ದಂತವರನ್ನು ಹುಬ್ಬಳ್ಳಿ- ಧಾರವಾಡ ಜನರು ಈಗ ಹೊರಗೆ ಹಾಕಿದ್ದಾರೆ.
ಈಗ ಇಲ್ಲಿಗೆ ಬಂದು ಕರ್ಮ ಭೂಮಿ ಕರ್ಮ ಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ? ಏನಾದರೂ ಕೊಡುಗೆ ಇದೆಯಾ ನಾಚಿಕೆಯಾಗಬೇಕು ನಿಮಗೆ ಎಂದು ಹೆಬ್ಬಾಳಕರ್ ಕಿಡಿ ಕಾರಿದರು.

ಬಿಜೆಪಿ ನಾಯಕರಿಂದಲೇ 'ಗೋಬ್ಯಾಕ್ ಅಭಿಯಾನ'
ಗೋ ಬ್ಯಾಕ್ ಶೆಟ್ಟರ್ ಎಂದು ಅವರ ಬಿಜೆಪಿ ಪಕ್ಷದ ಕಾರ್ಯಕರ್ತರೇ ಮಾಡುತ್ತಿರುವ ಅಭಿಯಾನ. ಅವರ ಪಕ್ಷದ ಕಾರ್ಯಕರ್ತರ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ. ಪ್ರಧಾನಿ ಮೋದಿಯವರು ಎಲ್ಲೋ ಹೋಗಿ ಚುನಾವಣೆಗೆ ನಿಂತಿದ್ದಾರೆ ಎಂದು ತಮ್ಮ ಬೆಳಗಾವಿ ಸ್ಪರ್ಧೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇವರೇನು ಮೋದಿಯಷ್ಟು ದೊಡ್ಡವರಾ? ನಾಚಿಕೆಯಾಗಬೇಕು ಇವರಿಗೆ ಎಂದು ಅವರು ಜರಿದರು.
ಭಿನ್ನಮತ ಶಮನಕ್ಕೆ ಶೆಟ್ಟರ್ ಪ್ರಯತ್ನ
ಬಹುಕಸರತ್ತಿನ ಬಳಿಕ ಬೆಳಗಾವಿ ಕ್ಷೇತ್ರದ ಟಿಕೆಟ್ ಪಡೆಯುವಲ್ಲಿ ಜಗದೀಶ್ ಶೆಟ್ಟರ್ ಯಶಸ್ವಿಯಾದರು. ಇದೀಗ ಪ್ರಚಾರ ಕಾರ್ಯದಲ್ಲಿರುವ ಅವರು, ಬೆಳಗಾವಿಯಲ್ಲಿ ಪಕ್ಷದೊಳಗಿನ ಅಸಮಾಧಾನ, ಭಿನ್ನಮತ ಶಮನ ಮಾಡುವಲ್ಲಿ ನಿರಂತರ ಪ್ರಯತ್ನ ನಡೆಸಿದ್ದಾರೆ. ಇದರೊಂದಿಗೆ ಪ್ರಚಾರ ಕಾರ್ಯದಲ್ಲಿರುವ ಅವರು, ಇದು ನನ್ನ ಕರ್ಮಭೂಮಿ ಎಂದಿದ್ದಾರೆ. ಇದಕ್ಕೆ ಕಾಂಗ್ರೆಸ್ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಕೌಂಟರ್ ಕೊಟ್ಟಿದ್ದಾರೆ. ಕೆಲವು ಪ್ರಶ್ನೆಗಳನ್ನು ಅವರ ಮುಂದಿಟ್ಟಿದ್ದಾರೆ.
ಪ್ರಚಾರದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೀತಿನ ಸಂಹಿತೆ ಉಲ್ಲಂಘನೆ ಮಾಡಿದ್ದರಿಂದ ಅವರಿಗೆ ಚುನಾವಣೆ ಆಯೋಗ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications