'ಜಗತ್ತಿನ ಮುಸ್ಲಿಂ ದೇಶಗಳು ಭಾರತಕ್ಕೆ ನಿರ್ಬಂಧ ಹಾಕಿದರೆ ಏನಾಗಬಹುದು'
ಬೆಳಗಾವಿ, ಮಾರ್ಚ್ 27: ನಮ್ಮ ರಾಜ್ಯದ ರಾಜಕಾರಣಿಗಳು ಮೇಲಾಟದಲ್ಲಿ ನಿರತರಾಗಿದ್ದಾರೆ, ಒಬ್ಬರು ಕುಡುಕ ಎಂದರೆ ಇನ್ನೊಬ್ಬರು ಕಳ್ಳ ಎಂದು ಹೇಳುತ್ತಿದ್ದಾರೆ. ರಾಜ್ಯದ ಪ್ರತಿಷ್ಠಿತ ನಾಯಕರು ಮಾತನಾಡುವ ರೀತಿಯಾ ಇದು? ಚುನಾವಣೆಯ ಸಮಯದಲ್ಲಿ ರಾಜ್ಯದ ಜನತೆಗೆ ಏನು ಸಂದೇಶ ನೀಡಿದಂತಾಗಿದೆ"ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತ ಪಡಿಸಿದರು.
Recommended Video
"ಮುಂಬರುವ ಚುನಾವಣೆ ಹೊಸ ಕ್ರಾಂತಿಗೆ ನಾಂದಿಯಾಗಬೇಕು, ಮೂರೂ ಪಕ್ಷದ ಪ್ರಮುಖ ನಾಯಕರು, ಯಾವುದೇ ಆಮಿಶಕ್ಕೆ ಒಳಗಾಗದೆ ಮತ ಚಲಾಯಿಸಿ ಎಂದು ಮತದಾರರಿಗೆ ಸೂಚಿಸಲಿ. ಇದು ಸಾಧ್ಯವೇ"ಎಂದು ಎಚ್. ವಿಶ್ವನಾಥ್ ಪ್ರಶ್ನಿಸಿದರು.
"ಹಿಜಾಬ್ ಮತ್ತು ವ್ಯಾಪಾರದ ಸ್ಥಳದಲ್ಲಿ ಧರ್ಮ ಇದು ಸರಿಯಲ್ಲ, ರಾಜ್ಯ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ ಎನ್ನುವ ಭಯ ಆಗುತ್ತಿದೆ. ನಾವೆಲ್ಲಾ ರಾಜ್ಯವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಈಗ, ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಿದಂತೆ, ಮುಸ್ಲಿಂ ರಾಷ್ಟ್ರಗಳು ಭಾರತದ ಮೇಲೆ ನಿಷೇಧ ಹೇರಿದರೆ ಏನಾಗುತ್ತದೆ ಎನ್ನುವ ಕಲ್ಪನೆ ಬೇಡವೇ"ಎಂದು ವಿಶ್ವನಾಥ್ ಆತಂಕ ಹೊರಹಾಕಿದ್ದಾರೆ.

"ಮುಸ್ಲಿಂ ವ್ಯಾಪಾರಿಗಳ ಮೇಲೆ ನಿರ್ಬಂಧ ಹೇರಬಾರದು, ಪಾಪ ಅವರು ಹೊಟ್ಟೆಗೆ ಏನು ಮಾಡುತ್ತಾರೆ. ಪಂಚರ್ ಹಾಕುವವನು, ತಗಡು ಬಡಿಯುವವನು, ಗುಜರಿಯಲ್ಲಿ ಕೆಲಸ ಮಾಡುವವನು ಯಾರು? ಇದೊಂದು ಅಮಾನವೀಯ ಕೆಲಸ, ಇದನ್ನು ಯಾರೂ ಒಪ್ಪುವುದಿಲ್ಲ"ಎಂದು ಎಚ್.ವಿಶ್ವನಾಥ್ ಅಭಿಪ್ರಾಯ ಪಟ್ಟರು.
ಗೋಕಾಕ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಶ್ವನಾಥ್, "ಬೇರೆ ಬೇರೆ ದೇಶಗಳಲ್ಲಿ ನಮ್ಮ ದೇಶದವರು ನೆಲೆಸಿದ್ದಾರೆ. ಒಂದು ವೇಳೆ, ಮುಸ್ಲಿಂ ರಾಷ್ಟ್ರಗಳು ಭಾರತೀಯರು ಅಲ್ಲಿ ಇರಬಾರದು ಎಂದು ತೀರ್ಮಾನ ತೆಗೆದುಕೊಂಡರೆ ನಮ್ಮವರ ಗತಿ ಏನಾಗಬಹುದು" ಎಂದು ವಿಶ್ವನಾಥ್ ಹೇಳಿದರು.
"ಒಂದು ವೇಳೆ ಮುಸ್ಲಿಂ ದೇಶಗಳು ಆ ನಿರ್ಧಾರ ತೆಗೆದುಕೊಂಡರೆ ಅಲ್ಲಿಯ ಭಾರತೀಯರು ಎಲ್ಲಿಗೆ ಹೋಗುವುದು, ಇಂತಹ ಹುಚ್ಚಾಟ ಸರಿಯಲ್ಲ. ಈ ರೀತಿ ಮಾಡಿ ಎಂದು ಯಾವ ಧರ್ಮ, ದೇವರು ಹೇಳಿದ್ದಾರೆ. ಸರಕಾರದ ಮೌನ ಈ ವಿಚಾರದಲ್ಲಿ ಸರಿಯಲ್ಲ. ಸರ್ಕಾರ ಈ ಬಗ್ಗೆ ಕೂಡಲೇ ಮಧ್ಯಪ್ರವೇಶ ಮಾಡಬೇಕು. ಭಾರತದಲ್ಲೇ ಉಳಿದ ಮುಸ್ಲಿಂ ಸಮುದಾಯದವರು ಭಾರತೀಯರು. ಪಾಕಿಸ್ತಾನದವರು ಅಲ್ಲ" ಎಂದು ವಿಶ್ವನಾಥ್ ಹೇಳಿದರು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications