ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ: ಯಾರು ಏನು ಹೇಳಿದರು?
ಬೆಂಗಳೂರು, ಜು.27: ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆಗೆ ರಾಜ್ಯದೆಲ್ಲೆಡೆ ತೀವ್ರ ಖಂಡನೆ, ವಿರೋಧ, ಆಕ್ಷೇಪ ವ್ಯಕ್ತವಾಗಿದೆ. ಹೈ ಕೋರ್ಟ್ ನ ತೀರ್ಪನ್ನು ಧಿಕ್ಕರಿಸಿ, ಕರ್ನಾಟಕದ ಗಡಿಯನ್ನು ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದ್ದು ಎಂದು ವಾದಿಸುವ ಎಂ.ಇ.ಎಸ್ ಸಂಘಟನೆ ಮತ್ತೆ ಮತ್ತೆ ತನ್ನ ಪುಂಡಾಟ ಮುಂದುವರೆಸುತ್ತಲೇ ಇದೆ.
ಮಹಾರಾಷ್ಟ್ರದಿಂದ ಬಂದಿರುವ ನೂರಾರು ಮಂದಿ ಎಳ್ಳೂರು ಸೇರಿದಂತೆ ಗಡಿನಾಡಿನ 5-6 ಹಳ್ಳಿಗಳಲ್ಲಿ ಮಹಾರಾಷ್ಟ್ರಕ್ಕೆ ಸೇರಿವೆ ಎಂದು ಮರಾಠಿ ನಾಮಫಲಕ ಹಾಕಲು ಮುಂದಾಗಿರುವ ಸುದ್ದಿ ಬಂದಿದೆ.
ಎಳ್ಳೂರಿನಲ್ಲಿ ಮರಾಠಿ ಕಾರ್ಯಕರ್ತರಿಗೆ ಜಿಲ್ಲಾಡಳಿತ ಭಾನುವಾರ ಬೆಳ್ಳಂಬೆಳ್ಳಗೆ ಚುರುಕು ಮುಟ್ಟಿಸಿತ್ತು. ಎಂಇಎಸ್ ನೆಟ್ಟಿದ್ದ ನಾಮಫಲಕವನ್ನು ಹೈಕೋರ್ಟ್ ಆದೇಶದಂತೆ ತೆರವುಗೊಳಿಸಿತ್ತು. ಇದರಿಂದ ಕೆರಳಿದ ಎಂಇಎಸ್ ಕಾರ್ಯಕರ್ತರು ಆಕ್ರೋಶಗೊಂಡು ಕಲ್ಲು ತೂರಾಟ ನಡೆಸಿದ್ದರು. ಮುಖ್ಯವಾಗಿ ಕನ್ನಡ ಭಾಷಿಕ ಪತ್ರಕರ್ತರನ್ನು ಗುರಿ ಮಾಡಿಕೊಂಡು ಕಲ್ಲೆಸೆತ ಮುಂದುವರೆಸಿದ್ದರು.[ನಿಲ್ಲದ ಮರಾಠಿ ಪುಂಡಾಟಿಕೆ, ಪ್ರದೇಶ ಪ್ರಕ್ಷುಬ್ಧ]
ಆದರೆ, ಎಂಇಎಸ್ ಪುಂಡರನ್ನು ವಶಕ್ಕೆ ಪಡೆಯಲಾಗಿದೆ. ಎಳ್ಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ, ಎಳ್ಳೂರು, ನಿಪ್ಪಾಣಿ, ಖಾನಾಪುರ, ರಾಜಹಂಸ ಗಡ ಮುಂತಾದೆಡೆ ನಿಷೇಧಾಜ್ಞೆ ಮುಂದುವರೆಸಲಾಗುವುದು ಎಂದು ಡಿಸಿ ಜಯರಾಮ್ ಹೇಳಿದ್ದಾರೆ. ಎಂಇಎಸ್ ಪುಂಡಾಟಿಕೆ ಬಗ್ಗೆ ವಿವಿಧ ನಾಯಕರು, ಸಾರ್ವಜನಿಕರ ಪ್ರತಿಕ್ರಿಯೆ ಹೀಗಿದೆ...

ಎಂಇಎಸ್ ವಿರುದ್ಧ ಕಾನೂನು ಕ್ರಮ ಜಾರಿ
ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವುದು, ಸ್ವಹಿತಾಸಕ್ತಿಗಾಗಿ ಪುಂಡಾಟಿಕೆ ನಡೆಸುವವರ ವಿವರ ಕ್ರಮ ಜರುಗಿಸಲು ಸರ್ಕಾರ ಬದ್ಧವಾಗಿದೆ. ಗಡಿ ಭಾಗದಲ್ಲಿನ ಕನ್ನಡಿಗರ ಹಿತಾಸಕ್ತಿ ಕಾಪಾಡಲು ಬೇಕಾದ ಅಗತ್ಯ ಕಾನೂನು ಕ್ರಮಗಳ ಬಗ್ಗೆ ಈಗಾಗಲೇ ಗೃಹ ಸಚಿವ ಕೆ.ಜೆ ಜಾರ್ಜ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ತುಮಕೂರಿನಲ್ಲಿ ಭಾನುವಾರ ಕಾನೂನು ಸಚಿವ ಟಿ.ಬಿ ಜಯಚಂದ್ರ ಹೇಳಿದರು.

ಕನ್ನಡ-ಕನ್ನಡಿಗ-ಕರ್ನಾಟಕವನ್ನು ಪ್ರತಿನಿಧಿಸುವ ಪಕ್ಷವೆಲ್ಲಿದೆ?
ಹೈ ಕೋರ್ಟ್ ನ ತೀರ್ಪನ್ನು ಧಿಕ್ಕರಿಸಿ, ಕರ್ನಾಟಕದ ಗಡಿಯನ್ನು ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದ್ದು ಎಂದು ವಾದಿಸುವ ಎಂ.ಇ.ಎಸ್ ನಂತಹ ಸಂಘಟನೆಗಳು ಮಾಡಿರುವ ಕೆಲಸವನ್ನು ರಾಜ್ಯ ಸರಕಾರ ಸುಮ್ಮನೆ ನೋಡುತ್ತ ಕುಳಿತಿದೆ. ಪೋಲಿಸರ ಮೇಲೆ ಹೆಲ್ಲೆ ಮಾಡಿರುವ ಜನರನ್ನು ಬಂಧಿಸುವ ಬದಲು, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸುವ ಕೆಲಸ ಮಾಡಲಾಗಿದೆ.
ಇನ್ನೇನು ಕೆಲವೇ ತಿಂಗಳುಗಳಲ್ಲಿ ಮಹಾರಾಷ್ಟ್ರದಲ್ಲಿ ಚುನಾವಣೆಗಳು ಬರುತ್ತಿವೆ. ಈ ಬಗ್ಗೆ ಇಲ್ಲಿ ಧ್ವನಿ ಎತ್ತಿದರೆ ಅಲ್ಲಿ ತಮಗೆ ಓಟು ಸಿಗುವುದಿಲ್ಲ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಮೌನ ವಹಿಸಿರುವಂತಿದೆ. ಸೋ ಕಾಲ್ಡ್ ರಾಷ್ಟ್ರೀಯ ಪಕ್ಷಗಳ ನಿಜ ಬಣ್ಣ ಕಾಲಕಾಲಕ್ಕೆ ಬಯಲಾಗುತ್ತಲೇ ಬಂದಿದೆ. ಹೈಕಮಾಂಡ್ ನ ಗುಲಾಮಗಿರಿಯಲ್ಲಿ ಬದುಕುವ ಇಂತಹ ಪಕ್ಷಗಳಿಂದ ನಮ್ಮ ನಾಡಿಗೆ ಒಳಿತಾಗುತ್ತದೆ ಎನ್ನುವ ಆಸೆಯಂತೂ ನನಗಿಲ್ಲ. ಕನ್ನಡ-ಕನ್ನಡಿಗ-ಕರ್ನಾಟಕವನ್ನು ಪ್ರತಿನಿಧಿಸುವ, ನಮ್ಮೆಲ್ಲರನ್ನೂ ಪ್ರತಿನಿಧಿಸುವ ಕನ್ನಡದ್ದೇ ಆದ ಪ್ರಾದೇಶಿಕ ಪಕ್ಷವೊಂದು ನಮ್ಮ ನಾಡಿನಲ್ಲಿ ಉದಯಿಸಲೇಬೇಕು.-ಚೇತನ್ ಜೀರಾಳ್

ನಮ್ಮ ನೆಲದಲ್ಲಿ ಎಂಇಎಸ್ ಪುಂಡಾಟಿಕೆ ಖಂಡನೀಯ
ಬೆಳಗಾವಿಯಲ್ಲಿ ಎಂಇಎಸ್ ಕನ್ನಡಿಗರಿಗೆ ತೊಂದರೆ ಮಾಡಿದ್ದು ಸರಿಯಲ್ಲ, ನಮ್ಮ ನೆಲದಲ್ಲಿ ಎಂಇಎಸ್ ಪುಂಡಾಟಿಕೆ ಖಂಡನೀಯ, ಎಂಇಎಸ್ ಅಟ್ಟಹಾಸಕ್ಕೆ ನಾವು ಸುಮ್ಮನಿರಬಾರದು, ಇಂತಹ ಶಾಂತಿಭಂಗ ಮಾಡಿದ ಜನ ನಮ್ಮ ರಾಜ್ಯಕ್ಕೆ ಬೇಡ, ಅವರ ವೋಟ್ನಿಂದ ನಾವು ರಾಜಕಾರಣ ಮಾಡುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಉಮಾಶ್ರೀ ಅವರು ಗುಲ್ಬರ್ಗಾದಲ್ಲಿ ಹೇಳಿದ್ದಾರೆ. ಗುಲ್ಬರ್ಗಾದಲ್ಲಿ ಅತ್ಯಾಚಾರ ಪೀಡಿತ ಮಹಿಳೆಗೆ ಸಾಂತ್ವನ ಹೇಳಲು ಸಚಿವೆ ಉಮಾಶ್ರೀ ಆಗಮಿಸಿದ್ದಾರೆ.

ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು
ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಕ್ಯಾತೆ ತೆಗೆಯುತ್ತಿದ್ದರೂ ಗೃಹ ಸಚಿವ ಕೆ.ಜೆ. ಜಾರ್ಜ್ ಮಾತನಾಡುತ್ತಿಲ್ಲ, ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು, ಯಳ್ಳೂರಿನಲ್ಲಿ ಮರಾಠಿ ಬೋರ್ಡ್ ತೆರವುಗೊಳಿಸಬೇಕು. ಇಲ್ಲವಾದ್ರೆ ಸೋಮವಾರ ಕರವೇ ಉಗ್ರ ಹೋರಾಟ ನಡೆಸಲಿದೆ.
ಎಂಇಎಸ್ ವಿರುದ್ಧ ಕೂಡಲೇ ಕ್ರಮಕೈಗೊಳ್ಳಲಿ, ಕೋರ್ಟ್ ಆದೇಶವಿದ್ದರೂ ಎಂಇಎಸ್ ಪುಂಡಾಟಿಕೆ ಮಾಡಿದೆ. ರಾಜಕಾರಣಿಗಳು ವೋಟ್ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ನಾರಾಯಣಗೌಡರು ಹೇಳಿದ್ದಾರೆ.

ನೃಪತುಂಗ ಕನ್ನಡ ಪ್ರಗತಿಪರ ಸಂಘ ಸ್ವಾಗತ
ಎಳ್ಳೂರಿನ ಮಹಾರಾಷ್ಟ್ರ ರಾಜ್ಯ ನಾಮ ಫಲಕವನ್ನು ತೆರವುಗೊಳಿಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಅಖಿಲ ಕರ್ನಾಟಕ ನೃಪತುಂಗ ಕನ್ನಡ ಪ್ರಗತಿಪರ ಸಂಘ ಕಾರ್ಯಕಾರಿ ಸಮಿತಿ ಸ್ವಾಗತಿಸಿದೆ. ಈ ತೀರ್ಪಿನಿಂದ ಗಡಿಭಾಗದ ಕನ್ನಡಿಗರು ಸೇರಿದಂತೆ ಎಲ್ಲರಿಗೂ ಸಂತಸ ಮೂಡಿದೆ ಎಂದು ರಾಜ್ಯಾಧ್ಯಕ್ಷ ಎನ್ ಗಣೇಶ್ ಗೌಡ ಹೇಳಿದ್ದಾರೆ. ಜು.31ರಂದು ನಡೆಯಲಿರುವ ಬಂದ್ ಗೆ ತಮ್ಮ ಸಂಘಟನೆಯೂ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಬೆಳಗಾವಿ ಉಸ್ತುವಾರಿ ಸಚಿವರ ಹೇಳಿಕೆ
ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ ಎಳ್ಳೂರಿನಲ್ಲಿ ಗಲಾಟೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ. ಕೋರ್ಟ್ ಆದೇಶದಂತೆ ಬೋರ್ಡ್ ತೆರವು ಮಾಡಲಾಗಿತ್ತು. ಸ್ಥಳೀಯ ಮುಖಂಡರು ಮತ್ತೆ ಬೋರ್ಡ್ ಹಾಕಿರುವುದು ಸರಿಯಲ್ಲ. ಬೋರ್ಡ್ ತೆರವುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ. ಅದರಂತೆ ಸಾರ್ವಜನಿಕರ ಹಿತಾಸಕ್ತಿ ಕಾಪಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications