ದೇವರೇ ನನ್ನ ಮಗಳನ್ನು ಬದುಕಿಸು: ಕಾವೇರಿಯ ತಾಯಿಯ ಮೊರೆ
ಬೆಳಗಾವಿ, ಏಪ್ರಿಲ್ 24: ಬೆಳಗಾವಿಯ ಝಂಜರವಾಡ ದಲ್ಲಿ ಏಪ್ರಿಲ್ 22, ಶನಿವಾರದಂದು ಸಂಜೆ ಕೊಳವೆ ಬಾವಿಗೆ ಬಿದ್ದ ಕಾವೇರಿಯ ರಕ್ಷಣಾ ಕಾರ್ಯ ಕೊನೆಯ ಹಂತ ತಲುಪಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಕಾವೇರಿಯನ್ನು ಬಾವಿಯಿಂದ ಹೊರತೆಗೆಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.[ಅಥಣಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕಿ: ಚುರುಕುಗೊಂಡ ರಕ್ಷಣಾ ಕಾರ್ಯ]
ಕಾವೇರಿಗೆ ಸತತ ಆಮ್ಲಜನಕದ ಪೂರೈಕೆ ಮಾಡಲಾಗುತ್ತಿದ್ದು, ಆಕೆ ಜೀವಂತವಾಗಿ ಹೊರಗೆ ಬರಲಿ ಎಂದು ಇಡೀ ಕನ್ನಡ ನಾಡೂ ಪ್ರಾರ್ಥಿಸುತ್ತಿದೆ. ಆಕೆಯನ್ನು ಹುಕ್ ಮೂಲಕ ಮೇಲಕ್ಕೆತ್ತುವ ಪ್ರಯತ್ನವೂ ನಿನ್ನೆ ನಡೆದಿದ್ದು, ಅದು ವಿಫಲವಾಗಿತ್ತು.
ಆಕೆ ಕೊಳವೆ ಬಾವಿಗೆ ಬಿದ್ದಾಗಿನಿಂದಲೂ ಊಟ-ನಿದ್ದೆ ಬಿಟ್ಟಿರುವ ತಾಯಿ ಸವಿತಾ ಸ್ಥಿತಿ ಸಹ ಹದಗೆಟ್ಟಿದೆ.[ಕೊಳವೆ ಬಾವಿಯಲ್ಲಿ ಬಿದ್ದ ಬಾಲಕಿ ಕಾವೇರಿ ಬದುಕಿ ಬರಲಿ]
ಯಾವುದೇ ಕ್ಷಣದಲ್ಲಿ ಬಾಲಕಿಯನ್ನು ಹೊರತೆಗೆಯುವ ಸಾಧ್ಯತೆ ಇರುವುದರಿಂದ ಸ್ಟ್ರೆಚರ್ ನೊಂದಿಗೆ ವೈದ್ಯಕೀಯ ಸಿಬ್ಬಂದಿ ಸಹ ಸ್ಥಳಕ್ಕೆ ಆಗಮಿಸಿದ್ದಾರೆ. ಬಾಲಕಿಯನ್ನು ಹೊರತೆಗೆಯುತ್ತಿದ್ದಂತೆಯೇ ತ್ವರಿತವಾಗಿ ಆಸ್ಪತ್ರೆಗೆ ರವಾನಿಸಲು ಸಕಲ ಪ್ರಯತ್ನ ಮಾಡಲಾಗುತ್ತಿದೆ.
ಕಾವೇರಿ ಇರುವ ಸ್ಥಳಕ್ಕೆ ತಲುಪಿರುವ ರಕ್ಷಣಾ ಸಿಬ್ಬಂದಿಗೆ ಕಾವೇರಿಯ ಕೈ ಕಾಣಿಸುತ್ತಿದೆ ಎಂಬ ಮಾಹಿತಿಯೂ ಸಿಕ್ಕಿದೆ.

ಯಾರದೋ ನಿಲರ್ಕ್ಷ್ಯದಿಂದಾಗಿ, ಸಾವು-ಬದುಕಿನ ನಡುವಿನ ತೆಳುಗೆರೆಯ ಮೇಲೆ ನಿಂತಿರುವ ಕಾವೇರಿ ಬದುಕಿಬಂದರೆ ಅದು ಪವಾಡವೇ ಸರಿ. ಆ ಪವಾಡ ಇಂದು ಸಂಭವಿಸಿಬಿಡಲಿ ಎಂಬುದು ಕರುನಾಡಿನ ಎಲ್ಲರ ಪ್ರಾರ್ಥನೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications