ದೇವರೇ ನನ್ನ ಮಗಳನ್ನು ಬದುಕಿಸು: ಕಾವೇರಿಯ ತಾಯಿಯ ಮೊರೆ
ಬೆಳಗಾವಿ, ಏಪ್ರಿಲ್ 24: ಬೆಳಗಾವಿಯ ಝಂಜರವಾಡ ದಲ್ಲಿ ಏಪ್ರಿಲ್ 22, ಶನಿವಾರದಂದು ಸಂಜೆ ಕೊಳವೆ ಬಾವಿಗೆ ಬಿದ್ದ ಕಾವೇರಿಯ ರಕ್ಷಣಾ ಕಾರ್ಯ ಕೊನೆಯ ಹಂತ ತಲುಪಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಕಾವೇರಿಯನ್ನು ಬಾವಿಯಿಂದ ಹೊರತೆಗೆಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.[ಅಥಣಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕಿ: ಚುರುಕುಗೊಂಡ ರಕ್ಷಣಾ ಕಾರ್ಯ]
ಕಾವೇರಿಗೆ ಸತತ ಆಮ್ಲಜನಕದ ಪೂರೈಕೆ ಮಾಡಲಾಗುತ್ತಿದ್ದು, ಆಕೆ ಜೀವಂತವಾಗಿ ಹೊರಗೆ ಬರಲಿ ಎಂದು ಇಡೀ ಕನ್ನಡ ನಾಡೂ ಪ್ರಾರ್ಥಿಸುತ್ತಿದೆ. ಆಕೆಯನ್ನು ಹುಕ್ ಮೂಲಕ ಮೇಲಕ್ಕೆತ್ತುವ ಪ್ರಯತ್ನವೂ ನಿನ್ನೆ ನಡೆದಿದ್ದು, ಅದು ವಿಫಲವಾಗಿತ್ತು.
ಆಕೆ ಕೊಳವೆ ಬಾವಿಗೆ ಬಿದ್ದಾಗಿನಿಂದಲೂ ಊಟ-ನಿದ್ದೆ ಬಿಟ್ಟಿರುವ ತಾಯಿ ಸವಿತಾ ಸ್ಥಿತಿ ಸಹ ಹದಗೆಟ್ಟಿದೆ.[ಕೊಳವೆ ಬಾವಿಯಲ್ಲಿ ಬಿದ್ದ ಬಾಲಕಿ ಕಾವೇರಿ ಬದುಕಿ ಬರಲಿ]
ಯಾವುದೇ ಕ್ಷಣದಲ್ಲಿ ಬಾಲಕಿಯನ್ನು ಹೊರತೆಗೆಯುವ ಸಾಧ್ಯತೆ ಇರುವುದರಿಂದ ಸ್ಟ್ರೆಚರ್ ನೊಂದಿಗೆ ವೈದ್ಯಕೀಯ ಸಿಬ್ಬಂದಿ ಸಹ ಸ್ಥಳಕ್ಕೆ ಆಗಮಿಸಿದ್ದಾರೆ. ಬಾಲಕಿಯನ್ನು ಹೊರತೆಗೆಯುತ್ತಿದ್ದಂತೆಯೇ ತ್ವರಿತವಾಗಿ ಆಸ್ಪತ್ರೆಗೆ ರವಾನಿಸಲು ಸಕಲ ಪ್ರಯತ್ನ ಮಾಡಲಾಗುತ್ತಿದೆ.
ಕಾವೇರಿ ಇರುವ ಸ್ಥಳಕ್ಕೆ ತಲುಪಿರುವ ರಕ್ಷಣಾ ಸಿಬ್ಬಂದಿಗೆ ಕಾವೇರಿಯ ಕೈ ಕಾಣಿಸುತ್ತಿದೆ ಎಂಬ ಮಾಹಿತಿಯೂ ಸಿಕ್ಕಿದೆ.

ಯಾರದೋ ನಿಲರ್ಕ್ಷ್ಯದಿಂದಾಗಿ, ಸಾವು-ಬದುಕಿನ ನಡುವಿನ ತೆಳುಗೆರೆಯ ಮೇಲೆ ನಿಂತಿರುವ ಕಾವೇರಿ ಬದುಕಿಬಂದರೆ ಅದು ಪವಾಡವೇ ಸರಿ. ಆ ಪವಾಡ ಇಂದು ಸಂಭವಿಸಿಬಿಡಲಿ ಎಂಬುದು ಕರುನಾಡಿನ ಎಲ್ಲರ ಪ್ರಾರ್ಥನೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications