ಬೆಳಗಾವಿ ಉಪ ಚುನಾವಣೆ; ಪ್ರಕಾಶ್ ಹುಕ್ಕೇರಿ ಅಚ್ಚರಿಯ ಹೇಳಿಕೆ!
ಬೆಳಗಾವಿ, ಅಕ್ಟೋಬರ್ 25 : "ಸುರೇಶ್ ಅಂಗಡಿ ಕುಟುಂಬದ ಯಾರಿಗಾದರೂ ಟಿಕೆಟ್ ನೀಡಿದರೆ ಅವರನ್ನು ಗೆಲ್ಲಿಸಲು ಶ್ರಮಿಸುವೆ" ಎಂದು ಚಿಕ್ಕೋಡಿಯ ಮಾಜಿ ಸಂಸದ, ಕಾಂಗ್ರೆಸ್ ನಾಯಕ ಪ್ರಕಾಶ್ ಹುಕ್ಕೇರಿ ಹೇಳಿದರು.
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ, ಬೆಳಗಾವಿ ಸಂಸದರಾಗಿದ್ದ ಸುರೇಶ್ ಅಂಗಡಿ ಕೋವಿಡ್ ಸೋಂಕಿನಿಂದಾಗಿ ನಿಧನ ಹೊಂದಿದ್ದಾರೆ. ಈಗ ಬೆಳಗಾವಿ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿ ಯಾರು? ಎಂಬ ಚರ್ಚೆಗಳು ಜೋರಾಗಿದೆ.
ಭಾನುವಾರ ಚಿಕ್ಕೋಡಿಯಲ್ಲಿ ಮಾತನಾಡಿದ ಪ್ರಕಾಶ್ ಹುಕ್ಕೇರಿ, "ಹಳ್ಳಿ ಹಳ್ಳಿಗಳಲ್ಲೂ ಪ್ರಚಾರ ಮಾಡಿ ಸುರೇಶ್ ಅಂಗಡಿ ಕುಟುಂಬ ಸದಸ್ಯರನ್ನು ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ" ಎಂದರು.

"ಪಕ್ಷ ಬೇರೆ-ಬೇರೆಯಾಗಿದ್ದರೂ ನಾನು ಮತ್ತು ಸುರೇಶ್ ಅಂಗಡಿ ಆತ್ಮೀಯ ಸ್ನೇಹಿತರಾಗಿದ್ದೆವು. ಅವರು ನಮ್ಮೊಂದಿಗೆ ಇಲ್ಲದಿರುವುದು ದುಃಖದ ಸಂಗತಿ" ಎಂದು ಪ್ರಕಾಶ್ ಹುಕ್ಕೇರಿ ಬೇಸರ ವ್ಯಕ್ತಪಡಿಸಿದರು.
"ಸುರೇಶ್ ಕುಟುಂಬದವರು ಸ್ಪರ್ಧೆ ಮಾಡಿದರೆ ಪಕ್ಷ ನೋಡುವುದಿಲ್ಲ. ನನ್ನ ಮಗನ ಚುನಾವಣೆ ಹೇಗೆ ಮಾಡಿದ್ದೇನೋ, ಅದೇ ರೀತಿ ಅವರಿಗೂ ನೆರವಾಗುತ್ತೇನೆ" ಎಂದು ಪ್ರಕಾಶ್ ಹುಕ್ಕೇರಿ ಸ್ಪಷ್ಟಪಡಿಸಿದರು.
"ನಮ್ಮ ಪಕ್ಷ, ಹೈಕಮಾಂಡ್ ಅದೇನು ಕ್ರಮ ಕೈಗೊಳ್ಳುತ್ತದೆಯೋ ತೆಗೆದುಕೊಳ್ಳಲಿ, ನನಗೇನು ಅಭ್ಯಂತರವಿಲ್ಲ. ಅವರ ಕುಟುಂಬದ ಗೆಲುವಿಗಾಗಿ ಕೆಲಸ ಮಾಡುವೆ" ಎಂದು ಹೇಳಿದರು.
ಸ್ಪಷ್ಟನೆ ನೀಡಿದ್ದ ಜಾರಕಿಹೊಳಿ : ಬೆಳಗಾವಿಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ ಜಾರಕಿಹೊಳಿ ಬಿಜೆಪಿಯಿಂದ ಉಪ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು. ಅಮರನಾಥ ಜಾರಕಿಹೊಳಿ ಈ ಸುದ್ದಿಗಳಿಗೆ ಸ್ಪಷ್ಟನೆ ಕೊಟ್ಟಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications