ಬೆಳವಾಗಿ: ಸಿಲಿಂಡರ್ ಸ್ಪೂಟಗೊಂಡು ಮಹಿಳೆ ಸಾವು, ಕೊಲೆ ಶಂಕೆ
ಬೆಳಗಾವಿ, ಡಿಸೆಂಬರ್ 15: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಗೃಹಿಣಿಯೊಬ್ಬರು ಧಾರುಣ ಸಾವು ಕಂಡ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ತಾಲ್ಲೂಕಿನಲ್ಲಿ ನಡೆದಿದೆ. ಆದರೆ ಮೃತ ಮಹಿಳೆಯ ಕುಟುಂಬದವರು ಇದನ್ನು ಕೊಲೆ ಎಂದು ಆರೋಪಿಸಿದ್ದಾರೆ.
ತಾಲ್ಲೂಕಿನ ಹಿರೇಮುನ್ನ ಗ್ರಾಮದ ಮಹಿಳೆ ಶ್ವೇತಾ ನಾಗಯ್ಯ(28) ಅವರು ನಿನ್ನೆ(ಡಿಸೆಂಬರ್ 15) ರಾತ್ರಿ ಅವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಕಾರಣ ತೀರ್ವ ಸುಟ್ಟ ಗಾಯಗಳಿಂದ ಅಸುನೀಗಿದ್ದಾರೆ. ಘಟನೆಯಲ್ಲಿ ಪತಿ ನಾಗಯ್ಯ ಅವರಿಗೂ ಗಾಯಗಳಾಗಿವೆ.

ಹಾಲು ಕಾಯಿಸಲು ಇಟ್ಟಾಗ ಆಕಸ್ಮಿಕವಾಗಿ ಗ್ಯಾಸ್ ಬರ್ಸ್ಟ್ ಆಗಿ ಅವಘಡ ಸಂಭವಿಸಿತು ಎಂದು ಪತಿ ನಾಗಯ್ಯ ಹೇಳಿದ್ದಾರೆ, ಆದರೆ ಶ್ವೇತಾ ಅವರ ಪೋಷಕರು ನಾಗಯ್ಯ ಅವರ ಮಾತನ್ನು ತಳ್ಳಿಹಾಕಿದ್ದು ಪತಿ ನಾಗಯ್ಯನೇ ಮಗಳನ್ನು ಕೊಂದಿದ್ದಾನೆ ಎಂದು ಆರೋಪಿಸುತ್ತಿದ್ದಾರೆ.
ಶ್ವೇತಾ ಮತ್ತು ನಾಗಯ್ಯ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಅಂತರ್ಜಾತಿ ವಿವಾಹಕ್ಕೆ ಎರಡು ಕುಟುಂಬದಿಂದ ವಿರೋಧವಿತ್ತು ಆದರೂ ಅವರು ಮದುವೆಯಾಗಿದ್ದರು, ಇತ್ತೀಚೆಗೆ ಮನೆಯಲ್ಲಿ ಸಮಸ್ಯೆ ಎದುರಾಗಿತ್ತು, ಕಲಹಗಳು ನಡೆಯುತ್ತಿದ್ದವು ಇದರಿಂದಲೇ ನಾಗಯ್ಯ ಶ್ವೇತಾಳನ್ನು ಕೊಲೆ ಮಾಡಿದ್ದಾನೆ ಎನ್ನುತ್ತಿದ್ದಾರೆ ಅವರ ಪೋಷಕರು.
11 ವರ್ಷದ ಹಿಂದೆ ಪ್ರೇಮವಿವಾಹವಾಗಿದ್ದ ಅವರಿಗೆ ಇಬ್ಬರು ಗಂಡುಮಕ್ಕಳಿದ್ದರು. ಬೆಳಗಾವಿ ನಂದಗಡ ಠಾಣೆಯಲ್ಲಿ ಪತಿ ನಾಗಯ್ಯ ವಿರುದ್ಧ ದೂರು ನೀಡಲು ಶ್ವೇತಾ ಕುಟುಂಬಸ್ಥರು ಮುಂದಾಗಿದ್ದಾರೆ. ಪೊಲೀಸ್ ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications