ಚಿತ್ರಗಳು : ಗೋಕಾಕನಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ
ಬೆಳಗಾವಿ, ನವೆಂಬರ್ 19 : 'ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದಿವೆ. ಆದರೆ, ಗೋಕಾಕ ಮತಕ್ಷೇತ್ರಕ್ಕೆ ಇನ್ನೂ ಸ್ವಾತಂತ್ರ್ಯ ಬಂದಿಲ್ಲ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.
ಶನಿವಾರ ಸಂಜೆ ಗೋಕಾಕದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆದ ನವ ಕರ್ನಾಟಕ ಪರಿವರ್ತನಾ ಯಾತ್ರೆಯನ್ನು ಉದ್ದೇಶಿಸಿ ಯಡಿಯೂರಪ್ಪ ಮಾತನಾಡಿದರು. 'ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯಕ್ಕೆ ತಡೆ ಹಾಕುತ್ತೇವೆ. ಗೋಕಾಕ್ನ ಗೂಂಡಾ ರಾಜ್ಯವನ್ನು ಕಿತ್ತೆಸೆಯುತ್ತೇವೆ' ಎಂದು ಘೋಷಿಸಿದರು.
'ಗೋಕಾಕಿನ ಗುಂಡಾ ರಾಜಕೀಯವನ್ನು ಕಿತ್ತೆಸೆಯಬೇಕಾಗಿದೆ. ಆ ದಿಸೆಯಲ್ಲಿ ಎಲ್ಲರೂ ಒಗ್ಗಟಾಗಬೇಕಾಗಿದೆ. ಗೋಕಾಕನ್ನು ದತ್ತು ತೆಗೆದುಕೊಂಡು ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ' ಎಂದು ಯಡಿಯೂರಪ್ಪ ಹೇಳಿದರು.
'ಕೇಂದ್ರ ಸರ್ಕಾರದಿಂದ ಗೋಕಾಕ ಕ್ಷೇತ್ರಕ್ಕೆ 120 ಕೋಟಿ ಅನುದಾನ ಬಂದಿದೆ. ಆದರೆ, ಕ್ಷೇತ್ರದ ಶಾಸಕರ ಇಚ್ಛಾಶಕ್ತಿ ಕೊರತೆಯಿಂದಾಗಿ ಅನುದಾನ ಸದ್ಭಳಕೆ ಆಗಿಲ್ಲ' ಎಂದು ಯಡಿಯೂರಪ್ಪ ದೂರಿದರು.
ಗೋಕಾಕ್ನಲ್ಲಿ ಶನಿವಾರ ಪರಿವರ್ತನಾ ಯಾತ್ರೆ ಅಂತ್ಯಗೊಂಡಿದ್ದು, ಇಂದು ಬಿಜೆಪಿ ನಾಯಕರು ವಿಶ್ರಾಂತಿ ಪಡೆಯಲಿದ್ದಾರೆ. ಬೆಳಗಾವಿ ಗ್ರಾಮಾಂತರ ಕ್ಷೇತ್ರದಿಂದ ಸೋಮವಾರ ಪುನಃ ಯಾತ್ರೆ ಆರಂಭವಾಗಲಿದೆ.
ಚಿತ್ರಗಳು: ರಾಜ್ಯದಲ್ಲಿ ಹೊಸ ಅಲೆ ಎಬ್ಬಿಸಲಿರುವ ಬಿಜೆಪಿಯ ಪರಿವರ್ತನಾ ಯಾತ್ರೆ

ಭ್ರಷ್ಟಾಚಾರ ಮಾಡುತ್ತಿದೆ
'ಅತ್ಯಾಚಾರಿಗಳು, ಭ್ರಷ್ಟಾಚಾರಿಗಳು ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಸಿದ್ದರಾಮಯ್ಯ ನವರು ಸೇರಿ ಸಚಿವ ಸಂಪುಟದ ಸಹೋದ್ಯೋಗಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ' ಎಂದು ಯಡಿಯೂರಪ್ಪ ಹೇಳಿದರು.

ಗೋಕಾಕ ಕ್ಷೇತ್ರವನ್ನು ಗೆಲ್ಲಿಸಬೇಕು
'ಬಿಜೆಪಿ ಗೆಲ್ಲಿಸಿ ಬಲತ್ಕಾರದಿಂದ ಮತ ಪಡೆಯುವ ಸಂಸ್ಕೃತಿಯನ್ನು ನಿಲ್ಲಿಸಬೇಕಾಗಿದೆ. ದರೋಡೆ ಮಾಡುವ ಸರಕಾರವನ್ನು ಕಿತ್ತೆಸೆಯಬೇಕಾಗಿದೆ. ಕಮೀಷನ್ ಏಂಜೆಟ್ ಆಗಿರುವ ಸಿದ್ದರಾಮಯ್ಯ ಸರಕಾರದ ಕೆಲಸ ಮುಂದಿನ ಮೂರು ತಿಂಗಳು ಮಾತ್ರ ನಡೆಯಬಲ್ಲದು. ಬದಲಾವಣೆಗಾಗಿ ಗೋಕಾಕ ಕ್ಷೇತ್ರವನ್ನು ಗೆಲ್ಲಬೇಕಾಗಿದೆ. ಅದಕ್ಕಾಗಿ ಎಲ್ಲ ಮತದಾರರು ಮುಂದಾಗಬೇಕಾಗಿದೆ' ಎಂದು ಯಡಿಯೂರಪ್ಪ ಹೇಳಿದರು.

ನಿದ್ದೆ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಕೇಂದ್ರ ಸಚಿವ ಅನಂತಕುಮಾರ್ ಮಾತನಾಡಿ, 'ರಾಜ್ಯದ ನಿದ್ದೆಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಗೋಕಾಕದಲ್ಲಿ ಗುಂಡಾ ರಾಜಕೀಯಕ್ಕೆ ಸೆಡ್ಡು ಹೊಡೆದು ಜನ ಈ ಯಾತ್ರೆಯನ್ನು ಬೆಂಬಲಿಸಿದ್ದಾರೆ. ದಾದಾಗೀರಿ ರಾಜಕಾರಣದಿಂದ ಮುಕ್ತಿ ಹೊಂದಲು ಜನ ಪಣ ತೋಡಬೇಕಾಗಿದೆ'. ಎಂದು ಕರೆ ನೀಡಿದರು.

ಜನರಿಗೆ ನೆಮ್ಮದಿ ನೀಡುವ ಸರ್ಕಾರ ಬೇಕಿದೆ
'ನರೇಂದ್ರ ಮೋದಿ ಅವರ ಕಲ್ಪನೆಯಂತೆ ದೇಶದ 135 ಕೋಟಿ ಜನ ನೆಮ್ಮದಿಯಿಂದ ಬದುಕುವ ಸರಕಾರ ನಿಡಬೇಕಾಗಿದೆ. ಆ ರೀತಿಯ ಸರಕಾರವನ್ನು ನೀಡಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಿಂದ ಸಾಧ್ಯ. ಗೋಕಾಕ ತಾಲೂಕಿನಲ್ಲಿ 10 ಜನಷೌಧಿ ಕೇಂದ್ರ ತೆರೆಯಲು ಮುಂದಿನ ದಿನಗಳಲ್ಲಿ ಕ್ರಮ ಕೈಗೋಳಲಾಗುವುದು' ಎಂದು ಅನಂತ್ ಕುಮಾರ್ ಹೆಗಡೆ ಹೇಳಿದರು.

ಬಿಜೆಪಿ ಗೆಲ್ಲಿಸಿ ಎಂದು ಮನವಿ
ಸಮಾವೇಶದಲ್ಲಿ ಮಾತನಾಡಿದ ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರು, 'ಬಿಹಾರಕ್ಕಿಂತ ಕಡೆಯಾಗಿರುವ ಗೋಕಾಕ ಮತಕ್ಷೇತ್ರವನ್ನು ಬದಲಾವಣೆ ಮಾಡಬೇಕಿದೆ. ಗೋಕಾಕ ಮತಕ್ಷೇತ್ರವನ್ನು ಕರ್ನಾಟಕದಲ್ಲಿ ಮಾದರಿ ಕ್ಷೇತ್ರ ಮಾಡಲು ನಾವು ಪಣತೋಟ್ಟಿದೇವೆ. ಆದ್ದರಿಂದ, ಬಿಜೆಪಿ ಗೆಲ್ಲಿಸಿ' ಎಂದು ಮನವಿ ಮಾಡಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications