ಬೆಳಗಾವಿಯಲ್ಲಿ ಬುದ್ಧಿ ಹೇಳಲು ಬಂದವರಿಗೆ ಚಾಕು ಇರಿದ ಯುವಕ
ಬೆಳಗಾವಿ, ಮಾರ್ಚ್ 17: ಯುವತಿಯನ್ನು ಪೀಡಿಸುತ್ತಿದ್ದ ಯುವಕನಿಗೆ ಬುದ್ಧಿವಾದ ಹೇಳಲು ಹೋದ ಯುವತಿಯ ಕುಟುಂಬಸ್ಥರಿಗೆ ಚಾಕು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಿನ್ನೆ ಬೆಳಗಾವಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
Recommended Video
ದೇವಗಿರಿ ಗ್ರಾಮದ ರವಿ ಪರಸು ಬಸ್ಸರಗಿ (19) ಬಂಧಿತ ಯುವಕ. ಇನ್ನೋರ್ವ ಆರೋಪಿ ಅಡಿವೆಪ್ಪಾ ಕುಂಬರಗಿ ಪರಾರಿಯಾಗಿದ್ದು, ಅದೇ ಗ್ರಾಮದ ಯುವತಿ ಚಿಕ್ಕಪ್ಪ ಬಸವರಾಜ ಮಜಗಾವಿ (45) ಹಲ್ಲೆಗೊಳಗಾದ ವ್ಯಕ್ತಿ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿಯನ್ನು ಬಂಧಿಸಿಲಾಗಿದೆ. ಮಾರ್ಚ್ 15ರ ಭಾನುವಾರ ರಾತ್ರಿ ಈ ಘಟನೆ ನಡೆದಿದೆ.
ಕೆಲವು ದಿನಗಳಿಂದ ರವಿ ಬಸ್ಸರಗಿ ಎಂಬ ಯುವಕ ಅದೇ ಗ್ರಾಮದ ಯುವತಿಯ ಕೆಲವು ಫೋಟೊಗಳನ್ನು ಇಟ್ಟುಕೊಂಡು ನಿರಂತರವಾಗಿ ಕಿರುಕುಳ ನೀಡುತ್ತಿದ್ದನು. ಆರೋಪಿಯ ಕಿರುಕುಳದಿಂದ ಬೇಸತ್ತ ಯುವತಿ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಇದರಿಂದಾಗಿ ಯುವತಿಯ ಮನೆಯವರು ಬುದ್ಧಿವಾದ ಹೇಳಲು ಯುವಕನ ಮನೆಗೆ ಬರಲು ಮುಂದಾಗಿದ್ದಾರೆ.

ಈ ವಿಷಯ ತಿಳಿದ ಆರೋಪಿ ರವಿ ಬಸ್ಸರಗಿ ಮತ್ತು ಆತನ ಸ್ನೇಹಿತ ಅಡಿವೇಪ್ಪಾ ಕುಂಬರಗಿ ಜೊತೆಗೂಡಿ ಯುವತಿಯ ಚಿಕ್ಕಪ್ಪನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾರೆ. ಇರಿತಕ್ಕೊಳಗಾದ ಬಸವರಾಜ ಮಜಗಾವಿ ಕಾಕತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಂತೆ ಆರೋಪಿಗಳು ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ ರವಿ ಬಸ್ಸರಗಿ ಸಿಕ್ಕಿಹಾಕಿಕೊಂಡಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications