ಬೆಳಗಾವಿ : ಶಿಕ್ಷಕರಿಗೆ ರಜಾ, ಕಳ್ಳರಿಗೆ ಮಜಾ!
ಬೆಳಗಾವಿ, ಮೇ 4 : ರಜೆಗೆಂದು ಪರ ಊರುಗಳಿಗೆ ತೆರಳಿದ್ದ ಶಾಲಾ ಶಿಕ್ಷರ ಮನೆಗಳನ್ನು ದೋಚಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಶನಿವಾರ ರಾತ್ರಿ ವಿವೇಕನಗರ ಮತ್ತು ದೇಸಾಯಿ ಬ್ಲಾಕ್ ನಲ್ಲಿರುವ 10 ಶಿಕ್ಷಕರ ಮನೆಗಳನ್ನು ದೋಚಲಾಗಿದ್ದು, ಮನೆ ಮುಂದೆ ನಿಲ್ಲಿಸಿದ್ದ ಕಾರುಗಳನ್ನು ಕದ್ದೊಯ್ಯಲಾಗಿದೆ.
ಶಾಲೆಗಳಿಗೆ ರಜೆ ಇದ್ದ ಶಿಕ್ಷಕರು ತಮ್ಮ ಕುಟುಂಬದೊಂದಿಗೆ ಪರ ಊರಿಗೆ ತೆರಳಿದ್ದರು, ಇದನ್ನು ಅರಿತ ಕಳ್ಳರ ಗುಂಪು ಶನಿವಾರ ರಾತ್ರಿ ರಾಯಭಾಗ ಪಟ್ಟಣದ ವಿವೇಕನಗರ ಮತ್ತು ದೇಸಾಯಿ ಬ್ಲಾಕ್ನಲ್ಲಿರುವ 10 ಮಂದಿ ಶಿಕ್ಷಕರ ಮನೆಗಳಲ್ಲಿ ಸರಣಿ ಕಳ್ಳತನ ನಡೆಸಿದ್ದಾರೆ.

ಎಲ್ಲಾ 10 ಮನೆಗಳ ಬೀಗ ಮುರಿಯಲಾಗಿದ್ದು, ಲಕ್ಷಾಂತರ ರೂ. ಬೆಳೆಬಾಳುವ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಮನೆಯನ್ನು ದೋಚಿದ ನಂತರ ಮನೆಯ ಮುಂದೆ ನಿಲ್ಲಿಸಿದ್ದ ಕಾರನ್ನು ತೆಗೆದುಕೊಂಡು ಕಳ್ಳರು ಪರಾರಿಯಾಗಿದ್ದಾರೆ.
ಶಾಲೆಗಳಿಗೆ ರಜೆ ಇರುವ ಕಾರಣ ಶಿಕ್ಷಕರ ಕುಟುಂಬದವರು ಸ್ವಂತ ಊರುಗಳಿಗೆ ಹೋಗಿದ್ದು, ಹಲವು ದಿನಗಳಿಂದ ಅವರ ಮೆನಗಳಿಗೆ ಬೀಗ ಹಾಕಲಾಗಿದೆ. ಇದನ್ನು ಅರಿತ ಸ್ಥಳೀಯರು ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ರಾಯಭಾಗ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಪರ ಊರುಗಳಿಗೆ ತೆರಳಿರುವ ಶಿಕ್ಷರು ವಾಪಸ್ ಬಂದ ಬಳಿಕ ಕಳುವಾಗಿರುವ ಆಭರಣ, ವಸ್ತು ಮತ್ತು ನಗದಿನ ಕುರಿತು ಮಾಹಿತಿ ದೊರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಕಾರನ್ನು ಕದ್ದು ಪರಾರಿಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಪರಿಶೀಲನೆ ಮುಂದುವರೆದಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications