ಉಗ್ರರ ಕರಿನೆರಳು ಬೆಳಗಾವಿಯ ಮೇಲೂ ಬಿತ್ತೇ?
ಬೆಳಗಾವಿ, ಡಿಸೆಂಬರ್, 07: ಉತ್ತರ ಕರ್ನಾಟಕದ ಮೇಲೆ ಅದರಲ್ಲೂ ಬೆಳಗಾವಿ ಮೇಲೆ ಉಗ್ರರು ಕಣ್ಣಿಟ್ಟಿದ್ದಾರೆ ಎಂಬ ಆತಂಕದ ಸಂಗತಿ ಬಯಲಾಗಿದೆ. ಬೆಳಗಾವಿಯ ಸೂಕ್ಷ್ಮ ಪ್ರದೇಶಗಳ ಫೋಟೋ ತೆಗೆಯುತ್ತಿದ್ದ ಪತ್ರಕರ್ತ ಎಂದು ಕರೆದುಕೊಳ್ಳುತ್ತಿದ್ದ ಹುಡುಗನನ್ನು ವಿಚಾರಣೆಗೆ ಒಳಪಡಿಸಿದಾಗ ಅನೇಕ ಸಂಗತಿಗಳು ಗೊತ್ತಾಗಿದೆ.
ಹುಡುಗನನ್ನು ವಿಚಾರಣೆಗೆ ಒಳಪಡಿಸಿದಾಗ, ನಾನು ಸಲಾಮತಿ ಇಝ್ ಬಿಹಾರಿ ಎಂಬುವರ ನಿರ್ದೇಶನದಂತೆ ತೆಗೆಯುತ್ತಿದ್ದೆ. ಅವರು ಉರ್ದು ಪತ್ರಿಕೆಯೊಂದನ್ನು ನಡೆಸುತ್ತಿದ್ದಾರೆ. ಅವರಿಗೆ ಡಾಟಾ ಬೇಸ್ ಮಾಡಲು ಬೇಕೆಂದು ಕೇಳಿದ್ದರು ಎಂದು ತಲೆಬುಡ ಇಲ್ಲದ ಹೇಳಿಕೆ ನೀಡಿದ್ದಾನೆ. ಆದರೆ ಇದನ್ನು ಬಿಹಾರಿ ತಿರಸ್ಕರಿಸಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.[ಉಗ್ರಗಾಮಿ ಸಂಘಟನೆ ಸೇರೋದ್ರಲ್ಲಿ ಕರ್ನಾಟಕವೇ ಫಸ್ಟ್!]

ಬಿಹಾರಿ ಯಾರು?
ಸಲಾಮತಿ ಇಝ್ ಬಿಹಾರಿ ಮುಲತಃ ಬಿಹಾರದವನು. ಕಲಬುರ್ಗಿಯಲ್ಲಿ ಕಳೆದ ಕೆಲ ವರ್ಷಗಳಿಂದ ವಾಸ ಮಾಡುತ್ತಿದ್ದಾನೆ. ಬೆಳಗಾವಿ ಮತ್ತು ಕಲಬುರ್ಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಗೊಂದಲಗಳು ಬಗೆ ಹರಿದಿಲ್ಲ
ಕಾರಣವಿಲ್ಲದೇ ಸೂಕ್ಷ್ಮ ಪ್ರದೇಶಗಳ ಚಿತ್ರ ತೆಗೆಯುತ್ತಿದ್ದ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಚಿತ್ರ ತೆಗೆಯುತಿದ್ದವನ ಜತೆಗೆ ಮತ್ತೆ ಇಬ್ಬರು ಪತ್ರಕರ್ತರನ್ನು ಬಂಧಿಸಿದ್ದ ಪೊಲೀಸರು ಸಾಕ್ಷಾಧಾರ ಕೊರತೆ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಿದ್ದಾರೆ.ಆದರೆ ಬಿಹಾರಿಯನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.[ಐಎಸ್ ಐಎಸ್ ಸೇರುವ ಯುವಕರಿಗೆ ಹಣ, ಕೆಲಸದ ಆಮಿಷ]
ಗುಪ್ತಚರ ಇಲಾಖೆ ನೀಡಿರುವ ಮಾಹಿತಿಯಂತೆ ಉಗ್ರರು ಇದೀಗ ಉತ್ತರ ಕರ್ನಾಟಕದ ನಗರಗಳನ್ನು ಟಾರ್ಗೆಟ್ ಮಾಡಿಕೊಳ್ಳುತ್ತಿದ್ದಾರೆ. ಸಿಮಿ ಸಂಘಟನೆ ಭಾಗದಲ್ಲಿ ತನ್ನ ಕಾರ್ಯ ವಿಸ್ತಾರಕ್ಕೆ ಯೋಜನೆ ಹಾಕಿಕೊಳ್ಳುತ್ತಿದೆ. ಸ್ಥಳೀಯ ಪೊಲೀಸರ ಕಣ್ಣು ತಪ್ಪಿಸಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಹೇಳಿದೆ. ವಿಮಾನ ನಿಲ್ದಾಣ ಸೇರಿದಂತೆ ವಿವಿಧೆಡೆ ಭದ್ರತಾ ಶಕ್ತಿಯನ್ನು ಹೆಚ್ಚು ಮಾಡಲು ಸೂಚಿಸಲಾಗಿದೆ.
-
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್











Click it and Unblock the Notifications