ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಬಿಜೆಪಿ ಮುಖಂಡನ ಹತ್ಯೆ

ಬೊಮ್ಮಸಂದ್ರ ಪುರಸಭೆಯ ಸದಸ್ಯರಾಗಿದ್ದ ಶ್ರೀನಿವಾಸ್ ಪ್ರಸಾದ್ ವಾಸು ಎಂದೇ ಪರಿಚಿತರು. ಬೆಳ್ಳಂಬೆಳಗ್ಗೆ ನಡೆದ ಈ ಬರ್ಬರ ಹತ್ಯೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

|
Google Oneindia Kannada News

ಬೆಂಗಳೂರು, ಮಾರ್ಚ್ 14: ಬೆಂಗಳೂರಿನಲ್ಲಿ ಮತ್ತೆ ಮಚ್ಚಿನ ಅಬ್ಬರ! ರಾಜಕೀಯ ದ್ವೇಷದ ಕಾರಣಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ಲಿನ ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್(43) ಎಂಬುವವರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಸಾಯಿಸಿದ ಘಟನೆ ನಡೆದಿದೆ.[ಕರ್ನಾಟಕದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ: ಪ್ರತಾಪ್ ಸಿಂಹ]

Another BJP leader killed in bengaluru today

ಕಿತಗಾನಹಳ್ಳಿ ವಾಸು ಎಂದು ಜನಪ್ರಿಯರಾಗಿದ್ದ ದಲಿತ ಮುಖಂಡ ಶ್ರೀನಿವಾಸ್ ಆರೆಸ್ಸೆಸ್, ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಬೆಳಗ್ಗಿನ ವಾಕಿಂಗ್ ಮುಗಿಸಿ ಕಾರು ಹತ್ತುತ್ತಿದ್ದ ಸಂದರ್ಭದಲ್ಲಿ ಬಂದ ಏಳೆಂಟು ಜನ ಅಪರಿಚಿತರು ವಾಸು ಅವರನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದೆ.[ವರ್ಷದ ಹಿನ್ನೋಟ : ಹಿಂದೂ ಕಾರ್ಯಕರ್ತರ ಸಾವಿನ ಸರಣಿ]

Another BJP leader killed in bengaluru today

ಬೊಮ್ಮಸಂದ್ರ ಪುರಸಭೆಯ ಸದಸ್ಯರಾಗಿದ್ದ ಶ್ರೀನಿವಾಸ್ ಪ್ರಸಾದ್ ಹತ್ಯೆಯಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಬೆಳ್ಳಂಬೆಳಗ್ಗೆ ನಡೆದ ಈ ಬರ್ಬರ ಹತ್ಯೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

English summary
Political difference killed a BJP leader in bengaluru today. Person is identified as Shrinivas Prasad. The incident took place near Anekal, Bengaluru rural.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X