ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಬಿಜೆಪಿ ಮುಖಂಡನ ಹತ್ಯೆ
ಬೊಮ್ಮಸಂದ್ರ ಪುರಸಭೆಯ ಸದಸ್ಯರಾಗಿದ್ದ ಶ್ರೀನಿವಾಸ್ ಪ್ರಸಾದ್ ವಾಸು ಎಂದೇ ಪರಿಚಿತರು. ಬೆಳ್ಳಂಬೆಳಗ್ಗೆ ನಡೆದ ಈ ಬರ್ಬರ ಹತ್ಯೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು, ಮಾರ್ಚ್ 14: ಬೆಂಗಳೂರಿನಲ್ಲಿ ಮತ್ತೆ ಮಚ್ಚಿನ ಅಬ್ಬರ! ರಾಜಕೀಯ ದ್ವೇಷದ ಕಾರಣಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ಲಿನ ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್(43) ಎಂಬುವವರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಸಾಯಿಸಿದ ಘಟನೆ ನಡೆದಿದೆ.[ಕರ್ನಾಟಕದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ: ಪ್ರತಾಪ್ ಸಿಂಹ]
ಕಿತಗಾನಹಳ್ಳಿ ವಾಸು ಎಂದು ಜನಪ್ರಿಯರಾಗಿದ್ದ ದಲಿತ ಮುಖಂಡ ಶ್ರೀನಿವಾಸ್ ಆರೆಸ್ಸೆಸ್, ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಬೆಳಗ್ಗಿನ ವಾಕಿಂಗ್ ಮುಗಿಸಿ ಕಾರು ಹತ್ತುತ್ತಿದ್ದ ಸಂದರ್ಭದಲ್ಲಿ ಬಂದ ಏಳೆಂಟು ಜನ ಅಪರಿಚಿತರು ವಾಸು ಅವರನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದೆ.[ವರ್ಷದ ಹಿನ್ನೋಟ : ಹಿಂದೂ ಕಾರ್ಯಕರ್ತರ ಸಾವಿನ ಸರಣಿ]
ಬೊಮ್ಮಸಂದ್ರ ಪುರಸಭೆಯ ಸದಸ್ಯರಾಗಿದ್ದ ಶ್ರೀನಿವಾಸ್ ಪ್ರಸಾದ್ ಹತ್ಯೆಯಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಬೆಳ್ಳಂಬೆಳಗ್ಗೆ ನಡೆದ ಈ ಬರ್ಬರ ಹತ್ಯೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.