ಚಳಿಗಾಲ ಅಧಿವೇಶನಕ್ಕೆ ಪ್ರಿಯಾಂಕಾ ಗಾಂಧಿ ಕರೆ ತಂದ 'ಪ್ರಭು'
ಸುವರ್ಣ ವಿಧಾನಸೌಧ, ಡಿ.10: ಸದನದಲ್ಲಿ ಡರ್ಟಿ ಪಿಕ್ಚರ್ ವೀಕ್ಷಣೆ ಮೂಲಕ ಅಂತಾರಾಷ್ಟ್ರೀಯ ಮಟ್ಟದ ಅಪಖ್ಯಾತಿ ಗಳಿಸಿದ ಬಿಜೆಪಿ ನಾಯಕರ ಸಾಲಿಗೆ ಈಗ ಔರಾದ್ ಕ್ಷೇತ್ರದ ಶಾಸಕ ಪ್ರಭು ಚೌವಾಣ್ ಹೊಸದಾಗಿ ಸೇರ್ಪಡೆಗೊಂಡಿದ್ದಾರೆ.
ಸುವರ್ಣ ವಿಧಾನ ಸೌಧದಲ್ಲಿ ನಡೆದಿರುವ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಬುಧವಾರ ಪ್ರಭು ಚೌವಾಣ್ ಎರಡು ಬಾರಿ ಮಾಧ್ಯಮಗಳ ಗಮನ ಸೆಳೆದರು. ಬೆಳಗ್ಗೆ ಕಸದ ಬುಟ್ಟಿಯನ್ನು ಸದನದೊಳಗೆ ತಂದು ಪ್ರತಿಭಟನೆ ನಡೆಸಿದ್ದ ಪ್ರಭು ಅವರು ಮಧ್ಯಾಹ್ನದ ವೇಳೆ ಸದನದಲ್ಲಿ ಮೊಬೈಲ್ ಫೋನ್ ದುರ್ಬಳಕೆ ಮಾಡಿಕೊಂಡ ಪ್ರಕರಣ ಬಯಲಾಗಿದೆ.
ಬೀದರ್ ಜಿಲ್ಲೆಯ ಔರಾದ್ ಕ್ಷೇತ್ರದ ಶಾಸಕರಾದ ಪ್ರಭು ಚೌವಾಣ್ ಅವರು ಸದನದ ಕಲಾಪ ನಡೆಯುತ್ತಿರುವ ವೇಳೆ ಮೊಬೈಲ್ ಫೋನ್ ಬಳಕೆ ಮಾಡಿದ್ದಾರೆ. ಮೊಬೈಲ್ ಫೋನ್ ನಲ್ಲಿ ಹಿಂದಿ/ಮರಾಠಿ ಭಾಷೆಯಲ್ಲಿದ್ದ ಸುದ್ದಿಯೊಂದನ್ನು ಜೂಮ್ ಮಾಡಿ ನೋಡಿದ್ದಾರೆ.
ಈ ದೃಶ್ಯ ಖಾಸಗಿ ಸುದ್ದಿವಾಹಿನಿ ಛಾಯಾಗ್ರಾಹಕರ ಕಣ್ಣಿಗೆ ಬಿದ್ದಿದೆ. ಇವರುಗಳು ಕೂಡಾ ಶಾಸಕ ಪ್ರಭು ಅವರ ಮೊಬೈಲಿಗೆ ಜೂಮ್ ಹಾಕಿದ್ದಾರೆ. ಈ ಸಮಯಕ್ಕೆ ಸರಿಯಾಗಿ ಪ್ರಭು ಅವರ ಮೊಬೈಲ್ ಪರದೆ ಮೇಲೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾಧ್ರಾ ಅವರ ಚಿತ್ರ ಕಾಣಿಸಿಕೊಂಡಿದೆ. [ಬೆಳಗಾವಿ : ಸದನದಲ್ಲಿ ಕ್ಯಾಂಡಿ ಕ್ರಷ್ ಆಟ]

ಬಾಬ್ ಕಟ್ ಮಾಡಿಸಿಕೊಂಡು ಬಿಳಿ ಬಣ್ಣದ ಶರ್ಟ್ ಧರಿಸಿರುವ ಪ್ರಿಯಾಂಕಾ ಗಾಂಧಿ ಅವರ ಚಿತ್ರವನ್ನು ಕಂಡ ಪ್ರಭು ಅವರು ಜೂಮ್ ಮಾಡಿದ್ದಾರೆ. ಮತ್ತೊಮ್ಮೆ ಚಿತ್ರದ ಮೇಲೆ ಮೆಲ್ಲಗೆ ತಟ್ಟಿದ್ದಾರೆ. ನಂತರ ಇತರೆ ಚಿತ್ರಗಳತ್ತ ಗಮನ ಹರಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಅವರ ಫೋಟೋವನ್ನು ಅಸಹ್ಯ ರೀತಿಯಲ್ಲಿ ನೋಡುತ್ತಿದ್ದ ಆರೋಪ ಪ್ರಭು ಮೇಲೆ ಬಿದ್ದಿದೆ.
ಸದನದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚೆ ನಡೆಯುವಾಗ ಶಾಸಕ ಪ್ರಭು ಚವಾಣ್ ಅವರು ಪ್ರಿಯಾಂಕಾ ಅವರ ಫೋಟೋ ಅಸಭ್ಯ ರೀತಿಯಲ್ಲಿ ನೋಡುತ್ತಿರುವ ವರ್ತನೆ ಬಗ್ಗೆ ಟಿವಿ ಮಾಧ್ಯಮಗಳಲ್ಲಿ ಕ್ಷಣ ಕ್ಷಣದ ಸುದ್ದಿಗಳು ಬರುತ್ತಿವೆ. ['ಡರ್ಟಿ ಪಿಕ್ಚರ್' ವೀಕ್ಷಣೆ ಸಿಬಿಐನಿಂದ ವರದಿ ಬಂದಿಲ್ಲ]
ಸ್ಯಾಮ್ ಸಂಗ್ ಸ್ಮಾರ್ಟ್ ಫೋನ್ ಬಳಸುವ ಪ್ರಭು ಅವರು ತಮ್ಮ ಮೊಬೈಲಿನ ಗ್ಯಾಲರಿಯಲ್ಲಿರುವ ಚಿತ್ರಗಳನ್ನು ನೋಡತೊಡಗುತ್ತಾರೆ. ಪ್ರಭು ಅವರ ಪಕ್ಕದಲ್ಲಿದ್ದ ಶಾಸಕ ರವಿ ಸುಬ್ರಮಣ್ಯ ಅವರು ಎಚ್ ಡಿ ಕುಮಾರಸ್ವಾಮಿ ಅವರ ವಾದಗಳನ್ನು ಆಲಿಸುವಲ್ಲಿ ಮಗ್ನರಾಗಿರುವ ದೃಶ್ಯಗಳನ್ನು ಕಾಣಬಹುದಾಗಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದ ಎರಡನೇ ದಿನದ ಕಲಾಪದಲ್ಲಿ ಬುಧವಾರ ಬೆಳಗ್ಗೆ ಪಡಿತರ ಚೀಟಿ ವಿತರಣೆಯಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ಪ್ರಭು ಚೌವಾಣ್ ಅವರು ಪಡಿತರ ಚೀಟಿ ತುಂಬಿದ ಬುಟ್ಟಿಯನ್ನು ಸದನಕ್ಕೆ ಹೊತ್ತು ತಂದು ಎಲ್ಲರ ಗಮನ ಸೆಳೆದಿದ್ದರು. ಆದರೆ, ಮಧ್ಯಾಹ್ನದ ವೇಳೆಯಲ್ಲಿ ಮೊಬೈಲಿನಲ್ಲಿ ಪ್ರಿಯಾಂಕಾ ಗಾಂಧಿ ZOOOM ಮಾಡಿ ನೋಡಿ ಸಿಕ್ಕಿಬಿದ್ದಿದ್ದಾರೆ.
ಮತ್ತೊಂದೆಡೆ ಕೆಜೆಪಿಯಿಂದ ಹಿರೇಕೆರೂರಿನಿಂದ ಶಾಸಕರಾಗಿ ಆಯ್ಕೆಯಾಗಿ ಈಗ ಬಿಜೆಪಿ ಶಾಸಕರಾಗಿರುವ ಯು.ಬಿ ಬಣಕರ್ ಅವರು ಸದನದಲ್ಲಿ ಕ್ಯಾಂಡಿ ಕ್ರಷ್ ಆಟವಾಡುತ್ತಾ ಸಿಕ್ಕಿಬಿದ್ದಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications