ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಖಾರದಪುಡಿ ಎರಚಿ 24 ಲಕ್ಷ ದೋಚಿದ್ದ ಖದೀಮರು ಪೊಲೀಸರ ಬಲೆಗೆ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಜನವರಿ 1 : ನಗರದ ಸಾಗರ್ ಹೋಟೆಲ್ ಬಳಿ ತುಮಕೂರು ಮೂಲ ಹೂವಿನ ವ್ಯಾಪಾರಿಗೆ ಖಾರದಪುಡಿ ಎರಚಿ 24 ಲಕ್ಷ ರೂ ದೋಚಿ ಪರಾರಿಯಾಗಿದ್ದ ಖದೀಮರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಡಿಸೆಂಬರ್ 4 ರಂದು ಮೂಲದ ಹೂವಿನ ವ್ಯಾಪಾರಿಯೊಬ್ಬರ ಕಣ್ಣಿಗೆ ಖಾರದಪುಡಿ ಎರಚಿ 24 ಲಕ್ಷ ರೂ. ದೋಚಿದ್ದರು. ಹುಕ್ಕೇರಿ ಮೂಲದ ಮೂರು ಜನ ಹೂವಿನ ವ್ಯಾಪಾರಿಗಳು ಸೇರಿ ತಮಗೆ ಹೂವು ಸಪ್ಲಾಯ್ ಮಾಡುತ್ತಿದ್ದ ಮಾಲೀಕನ ಹಣ ದೋಚಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.

Belgaum police arrested who theft RS24 lakh

ಹುಕ್ಕೇರಿಯ ಅಸ್ಕರ್ ಅಲಿ ನಜೀರ ಅಹ್ಮದ್ ಮಕಾನದಾರ, ಉಮೇಶ ತಮ್ಮಣ್ಣ ಬಸ್ತವಾಡೆ,ಯಲ್ಲೇಶ ಮತ್ತು ಶಶಿಕಾಂತ ಸೇರಿದಂತೆ ಒಟ್ಟು ನಾಲ್ಕು ಜನ ಆರೋಪಿಗಳನ್ನು ಬಂಧಿಸಿರುವ ಪೋಲೀಸರು ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಪ್ರಭಾರಿ ಪೋಲೀಸ್ ಆಯುಕ್ತ ರಾಮಚಂದ್ರ ರಾವ್ ಪ್ರಕರಣದ ಕುರಿತು ಮಾಹಿತಿ ನೀಡಿ ಸಿಸಿಬಿ ಪೋಲೀಸರ ಕಾರ್ಯವನ್ನು ಶ್ಲಾಘಿಸಿದರು. ನಾಲ್ಕು ಜನ ಆರೋಪಗಳನ್ನು ಬಂಧಿಸಿರುವ ಪೋಲೀಸರು ಆರೋಪಿಗಳಿಂದ ಹನ್ನೆರಡು ಲಕ್ಷ ರೂ ವಶಪಡಿಸಿಕೊಂಡಿದ್ದಾರೆ.

English summary
Belgaum city crime branch police have arrested four miscreants who looted Rs.24 lakhs of a flower merchant by throwing chilly powder on him. Belgaum in charge police commissioner Ramachandra Rao informed reporters here on Monday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X