ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹದಾಯಿಯಲ್ಲಿ ಕಾಂಗ್ರೆಸ್, ಬಿಜೆಪಿ ರಾಜಕಾರಣ: ಪ್ರಜ್ವಲ್ ಕೆಂಡ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಡಿಸೆಂಬರ್ 22: : ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ಪಕ್ಷ ಬಲವರ್ಧನೆಗೆ ರಾಜ್ಯ ಪ್ರವಾಸದಲ್ಲಿ ತೊಡಗಿರುವ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಇಂದು (ಡಿಸೆಂಬರ್ 22) ಬೆಳಗಾವಿಯಲ್ಲಿ ರಾಷ್ಟ್ರೀಯ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪ್ರಜ್ವಲ್ ರೇವಣ್ಣ ಹೇಳಿದ್ದು ಹೀಗೆ..ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪ್ರಜ್ವಲ್ ರೇವಣ್ಣ ಹೇಳಿದ್ದು ಹೀಗೆ..

ಬೆಳಗಾವಿ ನಗರದಲ್ಲಿರುವ ಗಾಂಧಿ ಭವನದಲ್ಲಿ ಶುಕ್ರವಾರ ಜೆಡಿಎಎಸ್ ಸಮಾವೇಶದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ, "ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ರಾಜಕಾರಣ ಮಾಡುತ್ತಿವೆ ಎಂದು ಕೆಂಡಕಾರಿದರು.

Prajwal Reavanna

ಇಷ್ಟು ದಿನ ಮಹದಾಯಿ ಹೋರಾಟ ಮಾಡದ ಬಿಜೆಪಿಯವರನ್ನ ಜನರು ಪರಿವರ್ತನಾ ಯಾತ್ರೆಯಲ್ಲಿ ಒದ್ದಿದ್ದರಿಂದ ಎಚ್ಚರಾಗಿದ್ದಾರೆ. ಮುಂದಿನ ಚುನಾವಣೆಗೆ ಮಹದಾಯಿ ಮಂತ್ರವಾಗಿಟ್ಟುಕೊಂಡು ಹೋಗುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಬಿಜೆಪಿ ಬತ್ತಳಿಕೆಯಲ್ಲಿರುವ ಶಕ್ತಿಶಾಲಿ ಬಾಣ 'ಮಹದಾಯಿ!'ಬಿಜೆಪಿ ಬತ್ತಳಿಕೆಯಲ್ಲಿರುವ ಶಕ್ತಿಶಾಲಿ ಬಾಣ 'ಮಹದಾಯಿ!'

ಮಹದಾಯಿ, ಸಾಲಮನ್ನಾ ವಿಚಾರದಲ್ಲಿ ಒಬ್ಬರಿಗೊಬ್ಬರು ಗೂಬೆ ಕೂರಿಸುತ್ತಿದ್ದಾರೆ. ಮಹದಾಯಿ ಸಮಸ್ಯೆ ಪ್ರಾದೇಶಿಕ ಪಕ್ಷದಿಂದ ಮಾತ್ರ ಬಗೆಹರಿಯುತ್ತದೆ ಎಂದು ಹೇಳಿದರು.

English summary
Congress and BJP were making politics in Mahadayi issue, the only regional party will solve the Mahadayi issue said JDS general secretary Prajwal Ravenna in JDS convention at Belagavi on December 22.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X