ದಾಬೋಲ್ಕರ್ ಎದೆಹೊಕ್ಕ ಗುಂಡು ಕೊಂಡಿದ್ದು ಬೆಳಗಾವಿಯಲ್ಲಿ
ಬೆಂಗಳೂರು, ಜೂನ್ 17 : ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆಗೆ ಬೆಳಗಾವಿಯಲ್ಲಿ ಗುಂಡುಗಳನ್ನು ಖರೀದಿ ಮಾಡಲಾಗಿತ್ತು. ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಈ ಕುರಿತು ಮಾಹಿತಿ ಸಂಗ್ರಹಣೆ ಮಾಡಿದೆ.
ದಾಬೋಲ್ಕರ್ ಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ಡಾ.ವಿರೇಂದ್ರ ತಾವಡೆ ಎಂಬುವವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ. ಹತ್ಯೆ ಪ್ರಕರಣದಲ್ಲಿ ಸಾರಂಗ್ ಅಕೋಲ್ಕರ್ ಸೇರಿದಂತೆ 6 ಆರೋಪಿಗಳು ಭಾಗಿಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಸಾರಂಗ್ 2009ರ ಗೋವಾ ಸ್ಫೋಟದಲ್ಲಿಯೂ ಭಾಗಿಯಾದ ಬಗ್ಗೆ ಆರೋಪಗಳಿವೆ. [ಕಲ್ಲುಬಂಡೆಯಂತೆ ಕುಳಿತಿರುವ ಎಂಎಂ ಕಲಬುರ್ಗಿ ಹತ್ಯೆ ತನಿಖೆ]

ಮೂರು ಹತ್ಯೆ ನಡುವೆ ಸಾಮ್ಯತೆ : ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ, ಎಂ.ಎಂ.ಕಲಬುರ್ಗಿ ಅವರ ಹತ್ಯೆ ನಡುವೆ ಸಾಮ್ಯತೆ ಇದೆ ಎಂಬುದು ಸಿಬಿಐ ವಾದ. ಒಂದೇ ಗುಂಪಿನ ಸದಸ್ಯರು ಈ ಮೂರು ಹತ್ಯೆ ಮಾಡಿದ್ದಾರೆ ಎಂಬುದು ತನಿಖೆ ವೇಳೆ ಖಚಿತಗೊಂಡಿದೆ. [ಕಲಬುರ್ಗಿ ಹತ್ಯೆಯ ತನಿಖೆ ವಿಳಂಬಕ್ಕೆ ಯಾರು ಕಾರಣ?]
2013ರ ಆಗಸ್ಟ್ 20ರಂದು ಪುಣೆಯಲ್ಲಿ ದಾಬೋಲ್ಕರ್ ಹತ್ಯೆ ನಡೆದಿತ್ತು. ಸಾರಂಗ್ ಅಕೋಲ್ಕರ್ ಮತ್ತೊಬ್ಬನ ಜೊತೆ ಸೇರಿ ದಾಬೋಲ್ಕರ್ ಮೇಲೆ ಗುಂಡು ಹಾರಿಸಿದ್ದ. ಸಾರಂಗ್ ಬಂಧನವಾದರೆ, ಮೂರು ಹತ್ಯೆಯ ಬಗ್ಗೆ ಖಚಿತವಾದ ಮಾಹಿತಿ ಲಭ್ಯವಾಗಲಿದೆ.
ಚಾಕೋಲೇಟ್ ತನ್ನಿ : ದಾಬೋಲ್ಕರ್ ಹತ್ಯೆಗೂ ಮುನ್ನ ಬೆಳಗಾವಿಯಲ್ಲಿ ಹಲವು ಚಟುವಟಿಕೆಗಳು ನಡೆದಿದ್ದವು. 'ಚಾಕೋಲೇಟ್ ತನ್ನಿ' ಎಂಬ ಇ ಮೇಲ್ ಅನ್ನು ಸಿಬಿಐ ಅಧಿಕಾರಿಗಳು ಡಿಕೋಡ್ ಮಾಡಿದ್ದು, ಚಾಕೋಲೇಟ್ ಎಂದರೆ ಗುಂಡು ಎಂದು ತಾವಡೆ ವಿಚಾರಣೆ ವೇಳೆ ಹೇಳಿದ್ದಾರೆ.
ಡಾ.ವಿರೇಂದ್ರ ತಾವಡೆ ಅವರ ಬಂಧನದಿಂದ ದಾಬೋಲ್ಕರ್, ಕಲಬುರ್ಗಿ ಮತ್ತು ಪನ್ಸಾರೆ ಹತ್ಯೆಯ ತನಿಖೆಗೆ ವೇಗ ಸಿಕ್ಕಿದಂತಾಗಿದೆ. ಹಿಂದೂಗಳ ಭಾವನೆ ವಿರೋಧಿಸುವವರ ಮೇಲೆ ಕಣ್ಣಿಡಲು 15 ಸಾವಿರ ಜನರ ಸೇನೆ ಕಟ್ಟಲು ನಿರ್ಧರಿಸಲಾಗಿತ್ತು ಎಂದು ತಾವಡೆ ವಿಚಾರಣೆ ವೇಳೆ ಹೇಳಿದ್ದಾರೆ.
2015ರ ಆಗಸ್ಟ್ 30ರಂದು ಧಾರವಾಡದ ಕಲ್ಯಾಣ ನಗರದ ನಿವಾಸದಲ್ಲಿ ಎಂ.ಎಂ.ಕಲಬುರ್ಗಿ ಅವರ ಹತ್ಯೆ ನಡೆದಿತ್ತು. ಮೊದಲು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದರು. ನಂತರ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ












Click it and Unblock the Notifications