ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬರ ಪರಿಹಾರ ಕಾಮಗಾರಿಗಳಿಗೆ ರು. 254 ಕೋಟಿ ಬಿಡುಗಡೆ

By Ananthanag
|
Google Oneindia Kannada News

ರಾಜ್ಯದ ಬರಪೀಡಿತ ತಾಲೂಕುಗಳ ಬರ ಪರಿಹಾರಕ್ಕಾಗಿ ಬೆಳಗಾವಿ ಅಧಿವೇಶನದ ಪ್ರಶ್ನೋತ್ತರ ಕಾರ್ಯಕ್ರಮ ವೇಳೆ ಮಾತನಾಡಿದ ಕಾಗೋಡು ತಿಮ್ಮಪ್ಪ ಬರಪರಿಹಾರವನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಬರ ಪರಿಹಾರ ಕಾಮಗಾರಿಗಳಿಗಾಗಿ ರು. 254ಕೋಟಿ ಬಿಡುಗಡೆ ಮಾಡಲಾಗಿದೆ ಸಮೀಕ್ಷೆಗನುಗುಣವಾಗಿ ಆಯಾ ಜಿಲ್ಲಾಡಳಿತದಿಂದ ಅನುದಾನ ಬಿಡುಗಡೆಯಾಗಲಿದೆ ಎಂದು ಹೇಳಿದರು.[ಕಂದಾಯ ಖಾತೆ ಸಿಕ್ಕರೆ ತುಂಬಾ ಸಂತೋಷ: ಕಾಗೋಡು ತಿಮ್ಮಪ್ಪ]

Drought solution Rs 254 crore are released : Kagodu

ಬರ ಪರಿಹಾರ ಕಾಮಗಾರಿಗಳ ಕುರಿತು ಶಾಸಕ ಯು.ಬಿ.ಬಣಕಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ತುರ್ತು ಕುಡಿಯುವ ನೀರು ಪೂರೈಕೆ. ಜಾನುವಾರು ಸಂರಕ್ಷಣೆ ಹಾಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಕಲ್ಪಿಸಲು ಸೂಚನೆ ನೀಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ರು. 1903.93ಕೋಟಿ ಬಿಡುಗಡೆ ಮಾಡಲಾಗಿದೆ ಎಂದರು.

ಬರ ಪರಿಹಾರ ಕಾರ್ಯಗಳಿಗೆ ರು. 4702.54ಕೋಟಿ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಕುರಿತು ಕೇಂದ್ರ ಸರ್ಕಾರದ ಅಂತರ್ ಇಲಾಖಾ ಅಧಿಕಾರಿಗಳ ತಂಡ ನವೆಂಬರ್ 2 ರಿಂದ 5ರವರೆಗೆ ರಾಜ್ಯದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಬರ ಅಧ್ಯಯನ ಮಾಡಿದೆ. ಕೇಂದ್ರ ಸರ್ಕಾರದಿಂದ ಅನುದಾನ ನಿರೀಕ್ಷಿಸಲಾಗಿದೆ ಎಂದು ಹೇಳಿದರು.

English summary
The 10 day winter session of the Karnataka Assembly to be held at the Suvarna soudha start on monday, the time of questioner Minitster Kagodu Timmappa says drought solution of Rs 254 crore are released.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X