ನ,16ರಂದು ಸುವರ್ಣ ಸೌಧ ಎದುರು ಮಾಜಿ ಸಿಎಂ ಕೆ.ಸಿ.ರೆಡ್ಡಿ ಮೊಮ್ಮಗಳಿಂದ ಧರಣಿ
ಬೆಳಗಾವಿ, ನವೆಂಬರ್ 15: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪ್ರತಿಮೆಯನ್ನು ವಿಧಾನ ಸೌಧದ ಪಶ್ಚಿಮ ದ್ವಾರದ ಮುಂದೆ ಸ್ಥಾಪಿಸುವಂತೆ ಒತ್ತಾಯಿಸಿ ಅವರ ಮೊಮ್ಮಗಳು ಕೆ.ಸಿ.ವಸಂತ ಕವಿತಾ ಅವರು ನಾಳೆ (ನ.16) ಬೆಳಗಾವಿಯ ಸುವರ್ಣ ಸೌಧದ ಎದುರು ಧರಣಿ ನಡೆಸಲ್ಲಿದ್ದಾರೆ.
ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ಹಾಗೂ ವಿಧಾನ ಸೌಧ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಮೂರ್ತಿಯನ್ನು ಯಾವುದೇ ಸರಕಾರಗಳು ವಿಧಾನ ಸೌಧದೆದುರು ನಿರ್ಮಿಸಲು ಮುಂದಾಗಿಲ್ಲ. ರೆಡ್ಡಿ ಜನಾಂಗದ ಶಾಸಕರು, ಸಚಿವರು ಈ ಬಗ್ಗೆ ಮಾತನಾಡದೆ ಇರುವುದು ದುರ್ದೈವದ ಸಂಗತಿಯಾಗಿದೆ. ಸರಕಾರಗಳು ರೆಡ್ಡಿ ಅವರನ್ನು ನಿರ್ಲಕ್ಷಿಸಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಅ.12 ರೊಳಗೆ ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೇರಿದಂತೆ ಸಭಾಧ್ಯಕ್ಷರಿಗೆ, ಸಭಾಪತಿಗಳಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ ಸರಕಾರ ಪ್ರತಿಮೆ ಸ್ಥಾಪನೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.